AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್

ಜನರನ್ನು ಕಂಡ ತಕ್ಷಣ ಸಿಟ್ಟಿಗೆದ್ದು ದಾಳಿಗೆ ಮುಂದಾಗುವ ಸ್ವಭಾವವನ್ನು ಈ ಕೋತಿ ರೂಢಿಸಿಕೊಂಡಿದೆ. ಮಕ್ಕಳನ್ನು ರಸ್ತೆಗೆ ಬಿಡಲೂ ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋತಿ ದಾಳಿಯಿಂದ ರೇಣುಕಾಚಾರ್ಯ ಬಚಾವ್
ಕೋತಿಯನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸಲು ವಲಯ ಅರಣ್ಯಾಧಿಕಾರಿ ಮುಂದಾಗಿದ್ದಾರೆ
Ghanashyam D M | ಡಿ.ಎಂ.ಘನಶ್ಯಾಮ
| Updated By: Skanda|

Updated on:Dec 16, 2020 | 7:24 PM

Share

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೋತಿ ದಾಳಿಯಿಂದ ಮಂಗಳವಾರ ಸ್ವಲ್ಪದರಲ್ಲಿ ಪಾರಾದರು.

ಪಟ್ಟಣದ ತಾಲೂಕು ಕಚೇರಿ ಎದುರು ಕೋತಿಯೊಂದು ಶಾಸಕರ ಮೇಲೆ ಎರಗುವುದರಲ್ಲಿತ್ತು. ಅಷ್ಟರಲ್ಲಿ ಎಚ್ಚೆತ್ತುಕೊಂಡ ಶಾಸಕರ ಪಟಾಲಂ, ರೇಣುಕಾಚಾರ್ಯರನ್ನು ದಾಳಿಯಿಂದ ರಕ್ಷಿಸಿತು. ಕಳೆದ ಒಂದು ತಿಂಗಳಿಂದ ಹೊನ್ನಾಳಿ ಜನರನ್ನು ಕಾಡುತ್ತಿರುವ ಕೋತಿ, ಈವರೆಗೆ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ.

ಜನರನ್ನು ಕಂಡ ತಕ್ಷಣ ಸಿಟ್ಟಿಗೆದ್ದು ದಾಳಿಗೆ ಮುಂದಾಗುವ ಸ್ವಭಾವವನ್ನು ಈ ಕೋತಿ ರೂಢಿಸಿಕೊಂಡಿದೆ. ಮಕ್ಕಳನ್ನು ರಸ್ತೆಗೆ ಬಿಡಲೂ ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ, ಪುರಸಭೆ, ದುರ್ಗಿಗುಡಿ, ಟಿ.ಬಿ.ಸರ್ಕಲ್ ಪ್ರದೇಶದಲ್ಲಿ ಈ ಕೋತಿ ನಿತ್ಯ ಸಂಚರಿಸುತ್ತದೆ. ಕೋತಿಯನ್ನು ಕಂಡರೆ ಜನರು ಭೀತಿಯಿಂದ ಓಡಿ ಹೋಗ್ತಾರೆ. ಬಾಳೆಹಣ್ಣು ಕೊಡಲು ಹೋದರೂ ಕೋತಿ ದಾಳಿ ಮಾಡುವುದು ಬಿಡುವುದಿಲ್ಲ.

‘ಅರಣ್ಯ ಇಲಾಖೆಯವರು ಬಲೆ ತೆಗೆದುಕೊಂಡು ಬಂದು ಕೋತಿಯನ್ನು ಹಿಡಿಯಲು ಯತ್ನಿಸುತ್ತಾರೆ. ಆದರೆ ಕೋತಿ ಅವರಿಂದ ತಪ್ಪಿಸಿಕೊಳ್ಳುತ್ತಿದೆ. ಈ ಕೋತಿಗೆ ಅರವಳಿಕೆ ಮದ್ದು ನೀಡಿ ಹಿಡಿಯಬೇಕು’ ಎಂದು ಸ್ಥಳೀಯರಾದ ಸತೀಶ್​ ಒತ್ತಾಯಿಸಿದರು. ಕೋತಿಯನ್ನು ಸೆರೆ ಹಿಡಿಯಲು ವಿಶೇಷ ತಂಡ ಕರೆಸಲು ವಲಯ ಅರಣ್ಯಾಧಿಕಾರಿ ಮುಂದಾಗಿದ್ದಾರೆ ಎಂದು ತಹಶೀಲ್ದಾರ್ ತುಷಾರ ಟಿವಿ9ಗೆ ಪ್ರತಿಕ್ರಿಯಿಸಿದರು.

ಸಚಿವ ಸ್ಥಾನದ ಕನಸು ಕಾಣುತ್ತಿರುವ ರೇಣುಕಾಚಾರ್ಯ ಕ್ಷೇತ್ರದ ಜನಕ್ಕೆ ಈಗ ಕೋತಿ ಕಾಟ

Published On - 9:55 am, Wed, 16 December 20

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ