AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MP Renukacharya: ಶಾಸಕ ರೇಣುಕಾಚಾರ್ಯರಿಂದ ಮತ್ತೊಂದು ಸತ್ಕಾರ್ಯ; ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂರು ದಿನಗಳ ವಾಸ್ತವ್ಯ

ಎಂಪಿ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಪ್ರತೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು ಸೋಂಕಿತರಿಗಾಗಿಯೇ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

MP Renukacharya: ಶಾಸಕ ರೇಣುಕಾಚಾರ್ಯರಿಂದ ಮತ್ತೊಂದು ಸತ್ಕಾರ್ಯ; ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂರು ದಿನಗಳ ವಾಸ್ತವ್ಯ
ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on:Jun 04, 2021 | 9:33 AM

Share

ದಾವಣಗೆರೆ: ಮಹಾಮಾರಿ ಕೊರೊನಾ ಭೀಕರತೆಯ ನಡುವೆ ಜೀವನ ಸಾಗಿಸುವುದು ಕಷ್ಟವಾಗಿದೆ. ಸೋಂಕಿತರು ಧೈರ್ಯ ಕಳೆದುಕೊಂಡು ಜೀವನವೇ ಮುಗಿತಾ ಎಂಬಂತೆ ಚಿಂತೆಗೀಡಾಗುತ್ತಿದ್ದಾರೆ. ಇದರ ನಡುವೆ ಶಾಸಕ ಎಂಪಿ ರೇಣುಕಾಚಾರ್ಯ ಜನಪ್ರತಿನಿಧಿಯಾಗಿ ಜನ ಸೇವೆಯಲ್ಲಿ ತೊಡಗಿದ್ದಾರೆ.  ಒಂದಲ್ಲ ಒಂದು ಸೇವಾ ಕಾರ್ಯದಲ್ಲಿ ಭಾಗಿಯಾಗಿ ಸೋಂಕಿತರ ಬಗ್ಗೆ ಕಾಳಜಿ ವಹಿಸುತ್ತಾ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.  ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಎಂಪಿ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಪ್ರತೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು ಸೋಂಕಿತರಿಗಾಗಿಯೇ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕೊವಿಡ್ ಸೆಂಟರ್ನಲ್ಲಿ ವಾಸ್ತವ್ಯ ಹೂಡುವ ಮೂಲಕ ಸೋಂಕಿತರಲ್ಲಿ ಆತ್ಮ ಸ್ಥೈರ್ಯ ತುಂಬುತ್ತಿದ್ದಾರೆ. ಇನ್ನು ಇಂದಿನಿಂದ ಮೂರು ದಿನಗಳ‌ ಕಾಲ ವಾಸ್ತವ್ಯ ಮಾಡಲಿದ್ದು ಸೋಂಕಿತರ ಕಷ್ಟ-ಸುಖಗಳಲ್ಲಿ ಭಾಗಿಯಾಗಲಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಯೋಗಾಸನದ ವಿವಿಧ ಭಂಗಿಗಳನ್ನು ಹೇಳಿಕೊಟ್ಟಿದ್ದಾರೆ. ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಸೋಂಕಿತರಿಗೂ ಮಾಡಿಸಿದ್ದಾರೆ. ಯೋಗ ಮಾಡುವವರಿಗೆ ರೋಗವಿಲ್ಲ ಎಂಬ ಸಂದೇಶ ಸಾರಿದ್ದಾರೆ. ಹಾಗೂ ಪ್ರತಿಯೊಬ್ಬರೂ ಯೋಗಾಸನ ಮೈ ಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇನ್ನು ರೇಣುಕಾಚಾರ್ಯ ಕೊವಿಡ್ ಕೇರ್ ಸೆಂಟರ್ನಲ್ಲಿ ಚಪಾತಿ ತಯಾರಿಸಿದ್ದಾರೆ. ಅರಬಗಟ್ಟೆಯ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಪಾತಿ ಲಟ್ಟಿಸಿ, ಚಪಾತಿ ಸುಟ್ಟಿದ್ದಾರೆ. ಹಾಗೂ ಸೋಂಕಿತರಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟದ ಆಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

Published On - 9:01 am, Fri, 4 June 21

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು