AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಪ್ಲ್ಯಾನ್

ಗ್ಯಾರಂಟಿ ಸ್ಕಿಮ್‌ಗಳ ಅನಾವರಣೆ ಬಳಿಕ ಕರ್ನಾಟಕ ಸರ್ಕಾರವು ಉಳಿತಾಯ ಯೋಜನೆಗೆ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಎಂಎಸ್‌ಐಎಲ್‌ ಚಿಟ್‌ ಫಂಡ್ ಮೂಲಕ ಜನರು ಹಣ ಉಳಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ. ಆದರೆ, ಸದ್ಯ ಆ ರೀತಿ ಯಾವುದೇ ಯೋಜನೆಗಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಪ್ಲ್ಯಾನ್
ಎಂಎಸ್‌ಐಎಲ್‌ ಚಿಟ್‌ ಫಂಡ್: ಹಣ ಉಳಿತಾಯಕ್ಕೆ ಕರ್ನಾಟಕ ಸರ್ಕಾರದಿಂದ ಹೊಸ ಯೋಜನೆ (ಸಾಂದರ್ಭಿಕ ಚಿತ್ರ)
Shivaraj
| Edited By: Rakesh Nayak Manchi|

Updated on: Nov 06, 2023 | 3:06 PM

Share

ಬೆಂಗಳೂರು, ನ.6: ಗ್ಯಾರಂಟಿ ಯೋಜನೆಗಳ ಜಾರಿ ಬಳಿಕ ಕರ್ನಾಟಕ ಸರ್ಕಾರವು ಜನರ ಹಣ ಉಳಿತಾಯಕ್ಕೆ ಎಂಎಸ್‌ಐಎಲ್‌ ಚಿಟ್‌ ಫಂಡ್ (MSIL Chit Fund) ಯೋಜನೆ ಜಾರಿ ಮಾಡಲು ಮುಂದಾಗಿದೆ. ಆ ಮೂಲಕ ಬೇರೆ ಕಡೆ ಹಣ ಹಾಕಿ ಮೊಸ ಹೋಗುವುದನ್ನು ತಡೆಯಲು ಹೊಸ ಪ್ಲ್ಯಾನ್ ಮಾಡಿಕೊಂಡಿದೆ.

ಜನರು ಹಣ ಉಳಿತಾಯ ಮಾಡುವ ಯೋಜನೆ ಇದಾಗಿದ್ದು, ಸರ್ಕಾರ ಈಗಾಗಲೇ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಎಸ್‌ಐಎಲ್‌ನಲ್ಲಿ 10 ಸಾವಿರದ ವರೆಗೆ ಚಿಟ್‌ಫಂಡ್ ವ್ಯವಹಾರ ನಡೆಸಬಹುದು.

ವ್ಯವಹಾರದಲ್ಲಿ ಈಗಾಗಲೇ ನೆರೆಯ ರಾಜ್ಯ ಕೇರಳ ಯಶ್ವಸಿಯಾಗಿದ್ದು, ಸುಮಾರು 27 ಸಾವಿರ ಕೋಟಿಯಷ್ಟು ವ್ಯವಹಾರವಿದೆ. ಕರ್ನಾಟಕದಲ್ಲಿ 22 ಸಾವಿರ ಗ್ರಾಹಕರು 305 ಕೋಟಿ ಮಾತ್ರ ಇದೆ. ಹೀಗಾಗಿ ಇದನ್ನ ಉತ್ತೇಜಿಸಲು ಸರ್ಕಾರ ಹೊಸ ಪ್ಲ್ಯಾನ್ ರೂಪಿಸಿದೆ. ಇದು ಶಿಕ್ಷಣ, ಆರೋಗ್ಯಕ್ಕೆ ಅನುಕೂಲವಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸ್ತಾರೋ? ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ

ಚಿಟ್ ಫಂಡ್​ಗೆ ಗ್ಯಾರೆಂಟಿ ಹಣ ಬಳಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯ ಆ ರೀತಿ ಯಾವುದೇ ಯೋಜನೆಗಳಿಲ್ಲ. ಟಿಬಿಟಿ ಮೂಲಕ ನಾವು ದುಡ್ಡು ಕಳಿಸುತ್ತೇವೆ. ಈ ಯೋಜನೆ ಹಾಗೇ ಮುಂದುವರಿಯುತ್ತದೆ. ಆ ಹಣವನ್ನ ಫಲಾನುಭವಿಗಳು ಅದ್ಬಳಕೆ ಮಾಡಿಕೊಳ್ಳಬೇಕು. ಅದು ಅವರಿಗೆ ಬಿಟ್ಟ ವಿಚಾರ. ಚಿಟ್ ಫಂಡ್​ಗೆ ಗ್ಯಾರೆಂಟಿ ಹಣ ಬಳಕೆಗೆ ಯಾವ ತೀರ್ಮಾನವನ್ನೂ ಮಾಡಿಲ್ಲ ಎಂದರು.

ಉನ್ನತ ವಲಯಕ್ಕೆ ಚಿಟ್ ಫಂಡ್

ಈ ಬಗ್ಗೆ ಟ್ವೀಟ್ ಮಾಡಿದ ಸಚಿವ ಎಂಬಿ ಪಾಟೀಲ್, ಎಂಎಸ್​ಐಎಲ್​ ಚಿಟ್ಸ್ ಅನ್ನು ಭಾರತದ ಪ್ರಮುಖ ಚಿಟ್ ಫಂಡ್ ಮಾಡುವ ಮೂಲಕ ಚಿಟ್ ಫಂಡ್ ವಲಯವನ್ನು ಉನ್ನತ ಸ್ಥಾನಕ್ಕೆ ಒಯ್ಯಲು ಕರ್ನಾಟಕವು ಮಹತ್ತರ ಪ್ರಯಾಣ ಆರಂಭಿಸುತ್ತಿದೆ ಎಂದಿದ್ದಾರೆ.

MSIL ವಿಶ್ವಾಸಾರ್ಹ ಬ್ರ್ಯಾಂಡ್, ಸುಭದ್ರ, ಸುರಕ್ಷಿತ ಮತ್ತು ಪ್ರಗತಿ ವರ್ಧಕ, AI ಪ್ಲಾಟ್ ಫಾರ್ಮ್​​ನಲ್ಲಿ ಇರಲಿದೆ, ಕೆಲವೇ ವರ್ಷಗಳಲ್ಲಿ ರೂ. 300 ಕೋಟಿಯಿಂದ 10,000 ಕೋಟಿ ವಹಿವಾಟು ತಲುಪುವ ಗುರಿ ಹೊಂದಲಾಗಿದೆ ಎಂದು ಎಂಬಿ ಪಾಟೀಲ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!