AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
TV9 Web
| Edited By: sandhya thejappa|

Updated on: Jun 06, 2021 | 5:32 PM

Share

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಒಂದು ಹೊತ್ತಿನ ಊಟಕ್ಕೂ ಜನ ಪರದಾಡುವಂತಾಗಿದೆ. ಸಂಕಷ್ಟದಲ್ಲಿರುವ ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಸಚಿವ ಎಂಟಿಬಿ ನಾಗರಾಜ್ ಬಿರಿಯಾನಿ ಹಂಚಿದ್ದಾರೆ. ಹೊಸಕೋಟೆಯ ಸರ್ಕಾರಿ ಆಸ್ಪತ್ರೆ ಮುಂಭಾಗ ಬಿರಿಯಾನಿಗೆ ನಾ ಮುಂದು ತಾ ಮುಂದು ಅಂತ ಜನ ಮುಗಿಬಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು (ಜೂನ್ 6) ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಂಟಿಬಿ ನಾಗರಾಜ್, ಜೂ.14ರವರೆಗೆ ಅನ್​ಲಾಕ್​ ಬೇಡ ಎಂದು ಹೇಳಿದ್ದೇನೆ. ನಿನ್ನೆ ರಾತ್ರಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ಹೇಳಿದ್ದೇನೆ. ಈಗಾಗಲೇ ಕೊರೊನಾ ಕೇಸ್ ಇಳಿಮುಖವಾಗುತ್ತಿದೆ. ಬೆಂಗಳೂರಿನಲ್ಲೂ ಪ್ರಕರಣಗಳು ಇಳಿಮುಖವಾಗುತ್ತಿವೆ. ಹೀಗಾಗಿ ಜೂನ್ 14ರ ವರೆಗೆ ಅನ್​ಲಾಕ್​ ಬೇಡ ಎಂದಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ

2006ರಲ್ಲಿ ನಡೆದಿದ್ದ ಆ ದುರಂತದ ಬಗ್ಗೆ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದಕ್ಕೆ ಪತ್ರಕರ್ತನ ವಿರುದ್ಧ ಎಫ್​ಐಆರ್​..

ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಲೇಬೇಕು: ಸಿಎಂ ಯಡಿಯೂರಪ್ಪ ಆಪ್ತರಿಂದ ನಿರ್ಧಾರ

(MTB Nagaraj gave Biryani to Corona infected relatives and the public in devanahalli)

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ