AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಸ್ಥಾನ ಸಿಗದಿದ್ದರೆ 16 ಶಾಸಕರ ರಾಜೀನಾಮೆ – ಹೈಕಮಾಂಡ್ ಗೆ ವಾರ್ನ್ ಮಾಡಿ ಗೆದ್ದ ಎಂಟಿಬಿ ನಾಗರಾಜ್

MTB Nagaraj: ಕೈತಪ್ಪಿ ಹೋಗುತ್ತಿದ್ದ ಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಎಂಟಿಬಿ ನಾಗರಾಜ್ ನೇರವಾಗಿ ಹೈಕಮಾಂಡ್ ನಾಯಕರನ್ನು ಟಚ್ ಮಾಡಿದ್ದಾರೆ. ಜೆ.ಪಿ ನಡ್ಡಾ ಮೇಲೆ ಒತ್ತಡ ಹಾಕಿದ ಎಂಟಿಬಿ ನಾಗರಾಜ್ ಮತ್ತೆ ಸಚಿವಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮಂತ್ರಿ ಸ್ಥಾನ ಸಿಗದಿದ್ದರೆ 16 ಶಾಸಕರ ರಾಜೀನಾಮೆ - ಹೈಕಮಾಂಡ್ ಗೆ ವಾರ್ನ್ ಮಾಡಿ ಗೆದ್ದ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
TV9 Web
| Edited By: |

Updated on:Aug 04, 2021 | 11:55 AM

Share

ನವದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಂದ ಶಾಸಕರಿಗೆ ಮತ್ತೆ ಮಂತ್ರಿಸ್ಥಾನ ಸಿಗುತ್ತೋ ಇಲ್ಲವೋ ಎನ್ನುವ ಆತಂಕ ಇತ್ತು. ಮತ್ತೆ ಮಂತ್ರಿಸ್ಥಾನ ಸಿಗುವುದೇ ಇಲ್ಲ ಎಂದು ಅಂದುಕೊಂಡಿದ್ದ ಎಂಟಿಬಿ ನಾಗರಾಜ್ ಅವರು ಮತ್ತೆ ಸಚಿವರಾಗುತ್ತಿರುವುದು ಅಚ್ಚರಿ ಹುಟ್ಟಿಸಿದೆ. ಕಡೆಗಳಿಗೆಯಲ್ಲಿ ಎಂಟಿಬಿ ನಾಗರಾಜ್ ಗೆ ಮಂತ್ರಿಗಿರಿ ಸಿಕ್ಕಿದ್ದೇಗೆ ಅನ್ನೋದು ರೋಚಕವಾಗಿದೆ.

ಹೈಕಮಾಂಡ್ ಮೇಲೆ ಒತ್ತಡ ಹಾಕಿ ಮಂತ್ರಿ ಸ್ಥಾನ ಪಡೆದ ಎಂಟಿಬಿ ನಾಗರಾಜ್

ಕೈತಪ್ಪಿ ಹೋಗುತ್ತಿದ್ದ ಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಎಂಟಿಬಿ ನಾಗರಾಜ್ ನೇರವಾಗಿ ಹೈಕಮಾಂಡ್ ನಾಯಕರನ್ನು ಟಚ್ ಮಾಡಿದ್ದಾರೆ. ಜೆ.ಪಿ ನಡ್ಡಾ ಮೇಲೆ ಒತ್ತಡ ಹಾಕಿದ ಎಂಟಿಬಿ ನಾಗರಾಜ್ ಮತ್ತೆ ಸಚಿವಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮಂತ್ರಿಸ್ಥಾನ ಕೊಡದಿದ್ದರೇ 16 ಮಂದಿ ಶಾಸಕರೊಂದಿಗೆ ಪಕ್ಷ ತೊರೆಯುವ ಎಚ್ಚರಿಕೆ ಜತೆಗೆ ಸುದೀರ್ಘ ಪತ್ರದ ಮೂಲಕ ಅರುಣ್ ಸಿಂಗ್ ಮೂಲಕ ನಡ್ಡಾ ಅವರಿಗೆ ಒತ್ತಡ ಹೇರಿದ್ದರು ಎಂದು ಮೂಲಗಳು ತಿಳಿಸಿವೆ.

ಬಿ.ಎಸ್ ಯಡಿಯೂರಪ್ಪ ನೀಡಿದ ಮಾತು ಮರೆಯುತ್ತಿದ್ದೀರಿ ಎಂದು ಎಚ್ಚರಿಸಿದ ನಾಗರಾಜ್ : ಬಿಜೆಪಿ ಸರ್ಕಾರ ರಚನೆಗೆಂದು ನಾನು ಮಂತ್ರಿಗಿರಿ ತ್ಯಾಗ ಮಾಡಿ ಕಾಂಗ್ರೆಸ್ ತೊರೆದು ಬಂದಿದ್ದೆ.ಈ ಹಂತದಲ್ಲಿ ನೀವೂ ನಮ್ಮನ್ನು ಮರೆಯುವುದು ದುರದೃಷ್ಟಕರ.ನನ್ನನ್ನು ನಿರ್ಲಕ್ಷ್ಯಿಸಿದರೇ ಪರಿಣಾಮ ಎದುರಿಬೇಕಾಗಬಹುದು.16 ಮಂದಿಯೊಂದಿಗೆ ಬಿಜೆಪಿ ತೊರೆಯುತ್ತೇನೆ ಎಂದು ಎಂಟಿಬಿ ಎಚ್ಚರಿಕೆ ನೀಡಿದ್ದರು.‌ ಎಚ್ಚರಿಕೆ ನೀಡದ ಪರಿಣಾಮವಾಗಿಯೇ ಎಂಟಿಬಿ ನಾಗರಾಜ್ ಅವರಿಗೆ ಕಡೆ ಘಳಿಗೆಯಲ್ಲಿ ಮಂತ್ರಿ ಸ್ಥಾನ ನೀಡಿದೆ.

– ಹರೀಶ್, ಟಿವಿ ನೈನ್, ನವದೆಹಲಿ

(MTB Nagaraj got minister berth in Basavaraj Bommai Cabinet)

Published On - 11:50 am, Wed, 4 August 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ