ದೇವನಹಳ್ಳಿ: ಮಾಧ್ಯಮಗಳ ಮುಂದೆ ಬರುವಂತೆ ಸಿದ್ದರಾಮಯ್ಯಗೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ. ಸಿದ್ದರಾಮಯ್ಯ 40 ವರ್ಷದ ರಾಜಕೀಯದಲ್ಲಿ ಸಮಾಜಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಎಂಟಿಬಿ ನಾಗರಾಜ್ ಗುಡುಗಿದ್ದಾರೆ.
ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತ ಚುನಾವಣೆ ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತೆ. ಚುನಾವಣೆ ಫಲಿತಾಂಶ ಸಿದ್ದರಾಮಯ್ಯ ಮಾಡುವಂತ ಸುಳ್ಳು ಅರೋಪಗಳಿಗೆ ಉತ್ತರ ನೀಡುತ್ತೆ ಎಂದು ಹೇಳಿದ್ದಾರೆ.
Published On - 10:21 am, Mon, 18 November 19