Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವು ಬೆಳೆಗಾರರ ಮೊಗದಲ್ಲಿ ಮಂದಹಾಸ: ಬೀದರ್ ಜಿಲ್ಲೆಯ ಮಾವಿನ ತೋಟದಲ್ಲಿ ಭರಪೂರ ಹೂವು

ಬೀದರ್ ಜಿಲ್ಲೆಯಲ್ಲಿ ಮಾವು ಬೆಳೆಗೆ ಉತ್ತಮವಾದ ಮಣ್ಣು ಹಾಗೂ ಉತ್ತಮ ಹವಾಮಾನ ಇರುವುದರಿಂದ ಇಲ್ಲಿ ಮಾವು ಬೆಳೆಯುವುದೇ ಉತ್ತಮ ಎಂದು ಇಲ್ಲಿನ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಮಾವು ಬೆಳೆಗಾರರ ಮೊಗದಲ್ಲಿ ಮಂದಹಾಸ: ಬೀದರ್ ಜಿಲ್ಲೆಯ ಮಾವಿನ ತೋಟದಲ್ಲಿ ಭರಪೂರ ಹೂವು
ಮಾವಿನ ಮಿಡಿಗಳು
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 16, 2021 | 10:14 PM

ಬೀದರ್: ಈ ವರ್ಷ ಎದುರಾದ ಅತಿವೃಷ್ಟಿ ಗಡಿ ಜಿಲ್ಲೆ ಬೀದರ್ ರೈತರನ್ನ ಹೈರಾಣು ಮಾಡಿದೆ. ಅಕಾಲಿಕವಾಗಿ ಸುರಿದ ಭಾರಿ ಮಳೆಯಿಂದಾಗಿ ಹೊಲದಲ್ಲಿ ಬಿತ್ತಿದ ಬೆಳೆಗಳೆಲ್ಲ ಕೊಚ್ಚುಕೊಂಡು ಹೋಗಿ ರೈತರ ಬದುಕನ್ನ ಬೀದಿಗೆ ತಳ್ಳಿದೆ. ಆದರೇ ಮಾವು ಬೆಳೆದ ರೈತರ ಮೊಗದಲ್ಲಿ ಮಾತ್ರ ಮಂದಹಾಸ ಮೂಡಿದ್ದು, ಮಾವಿನ ಮರದಲ್ಲಿ ಹೂವು, ಕಾಯಿಗಳು ತುಂಬಿವೆ. ಈ ಬಾರಿ ಅಕ್ಟೋಬರ್- ಸೆಪ್ಟಂಬರ್ ತಿಂಗಳಿನಲ್ಲಿ ವಾಡಿಕೆಗಿಂತಲೂ ಅಧಿಕ ಮಳೆಯಾಗಿದ್ದು, ಮಾವಿನ ಬೆಳೆಗೆ ಅನುಕೂಲವಾಗಿದ್ದರ ಪರಿಣಾಮ ಮಾವಿನ ಗಿಡಗಳು ಉತ್ತಮವಾಗಿ ಹೂ ಬಿಟ್ಟಿವೆ. ಈಗಿರುವ ಹೂವಿನ ಪ್ರಮಾಣದಷ್ಟೇ ಕಾಯಿ ಬಿಡುತ್ತದೆ ಎಂದು ಅಂದಾಜು ಮಾಡಲಾಗಿದ್ದು, ಈ ಬಾರಿ ಮಾವಿನ ಗಿಡಗಳಲ್ಲಿ ಯಥೇಚ್ಛ ಹೂವು ಬಿಟ್ಟಿರುವುದರಿಂದ ಉತ್ತಮ ಫಸಲು ಬರುವ ನಿರೀಕ್ಷೆ ಹುಟ್ಟಿಸಿದೆ.

ಹೌದು ಗಡಿ ಜಿಲ್ಲೆ ಬೀದರ್ ಎಂದರೆ ಸಾಕು ಮೊದಲಿಗೆ ನೆನಪಿಗೆ ಬರುವುದು ಬರ. ಸದಾ ಸಂಕಷ್ಟದಲ್ಲಿ ಬದುಕು ಸಾಗಿಸುವ ಇಲ್ಲಿನ ರೈತರ ಗೋಳು ಹೇಳತೀರದು. ಜೊತೆಗೆ ಆಗಾಗ ಸಾಲದ ಬಾಧೆಗೆ ನೇಣಿಗೆ ಕೊರಳು ಕೋಡುವ ಇಲ್ಲಿನ ರೈತರ ಕಷ್ಟ ಮಾತ್ರ ಜನಪ್ರತಿಧಿನಿಧಿಗಳಿಗೆ ಕೇಳಿಸುವುದೇ ಇಲ್ಲ. ಇನ್ನೂ ಈ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ ಹೊಲದಲ್ಲಿ ಬಿತ್ತಿದ ಬೆಳೆಗಳೆಲ್ಲ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿತ್ತಲಿಕ್ಕೆ ಮಾಡಿದ ಖರ್ಚು ಕೂಡ ರೈತರಿಗೆ ಬಾರದೆ ರೈತ ತಲೆಯ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇಂತಹ ಹತ್ತಾರು ಸಮಸ್ಯೆಯ ನಡುವೆಯೂ ಮಾವು ರೈತರನ್ನ ಕೈ ಹಿಡಿದಿದೆ. ಮಾವಿನ ಮರದಲ್ಲಿ ಹೂವು ಬಿಟ್ಟು ನಳನಳಿಸುತ್ತಿದ್ದು, ಮಾವಿನ ಮರದಲ್ಲೀಗ ಮಾವಿನ ಕಾಯಿಗಳು ಬಂದಿದೆ. ಒಂದು ಗಿಡದಲ್ಲಿ 200 ಕಾಯಿವರೆಗೂ ಮಾವು ಬಂದಿದ್ದು, ಇನ್ನೂ ಹೆಚ್ಚಿನ ರೈತರ ತೋಟದಲ್ಲಿನ ಮಾವಿನ ಮರಗಳಲ್ಲಿ ಸಾವಿರಾರು ಗಟ್ಟಲೇ ಮಾವು ಬಂದಿದ್ದು, ರೈತರು ಖುಷಿಯಾಗಿದ್ದಾರೆ.

mango

ಮಾವು ಬೆಳೆಗಾರರಲ್ಲಿ ಸಂತಸ ಮೂಡಿಸಿದ ಭರಪೂರ ಹೂವು

ಬರಕ್ಕೆ ಹೆಸರಾದ ಜಿಲ್ಲೆಯಲ್ಲಿ ಅಂದಾಜು 5000ಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶದಲ್ಲಿ ಮಾವಿನ ತೋಟಗಳಿದ್ದು, ಬಹುತೇಕರು ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿ ಮಾವಿನ ಗಿಡಗಳಲ್ಲಿ ಯಥೇಚ್ಛ ಹೂವು ಬಿಟ್ಟಿರುವುದರಿಂದ ಉತ್ತಮ ಫಸಲು ಬರುವ ನಿರೀಕ್ಷೆ ಹುಟ್ಟಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಜಿಲ್ಲೆಯ ಬಹುತೇಕ ಭಾಗದಲ್ಲಿ ರೈತರು ಒಂದು ಎಕರೆಯಷ್ಟಾದರೂ ಮಾವು ಬೆಳೆ ಬೆಳೆಯಲಾಗುತ್ತಿದ್ದು, ಈ ಬಾರಿ ಉತ್ತಮ ಮಾರುಕಟ್ಟೆ ಮತ್ತು ಬೆಲೆ ಸಿಗುವ ಲಕ್ಷಣಗಳು ಕಂಡುಬಂದಿವೆ.

mango

ಬೀದರ್​ನ ಮಾವಿನ ತೋಟದ ದೃಶ್ಯ

ರೋಗ ನಿಯಂತ್ರಣ ನಿರ್ವಹಣೆ ಅತಿ ಮುಖ್ಯ ಇನ್ನು ಹೂವು ಬಿಟ್ಟು ಕಾಯಿಯಾಗುವ ಸಮಯದಲ್ಲಿ ಮಾವಿನ ಮರಕ್ಕೆ ಬೂದಿ ರೋಗ ಬರುತ್ತದೆ. ದಿನ ಬಿಟ್ಟು ದಿನ ಗಿಡಗಳಿಗೆ ಔಷಧ ಸಿಂಪಡಿಸಿ ಸಮರ್ಪಕ ನಿರ್ವಹಣೆ ಮಾಡಿದರೆ ಬೂದಿ ರೋಗ ನಿಯಂತ್ರಿಸಿ, ಸಮೃದ್ಧ ಫಸಲು ಪಡೆಯಲು ಸಾಧ್ಯ. ಸಮರ್ಪಕ ನಿರ್ವಹಣೆಯಿಂದ ಅಧಿಕ ಮಾವಿನ ಇಳುವರಿ ಕಾಣಬಹುದು. ಕೆಲವರು ಸರಿಯಾಗಿ ಪೋಷಿಸದ ಕಾರಣ ತೋಟಗಳಲ್ಲಿ 8 ತಿಂಗಳಲ್ಲೇ ಉತ್ತಮ ಹೂವು ಬಿಟ್ಟಿದೆ. ಈ ಗಿಡಗಳಿಗೆ ಕಾಲಕಾಲಕ್ಕೆ ನೀರು, ಗೊಬ್ಬರ ಸೇರಿದಂತೆ ಸರಿಯಾದ ನಿರ್ವಹಣೆ ಮಾಡಿದ್ದರಿಂದ ಈ ವರ್ಷ ಉತ್ತಮ ಫಸಲಿನೊಂದಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ ಎಂಬುದು ರೈತರ ಲೆಕ್ಕಾಚಾರವಾಗಿದೆ.

mango

ಮಾವಿನಕಾಯಿ

ಬಾದಾಮಿ, ಸೇಂದೂರ, ನೀಲಂ, ಮಲ್ಲಿಕಾ, ಮಲಗೋಬ, ತೋತಾಪುರಿ ತಳಿಯ ಮಾವಿನ ತೋಟಗಳಲ್ಲಿ ಉತ್ತಮ ಹೂವಾಗಿದೆ. ಆದರೂ ಹೂ ಪೀಚಾಗುವವರೆಗೂ ಆತಂಕ ಇದ್ದೇ ಇರುತ್ತದೆ. ಕಳೆದ ಬಾರಿ ಉತ್ತಮವಾಗಿದ್ದ ಮಾವು ಫಸಲು ರೋಗ ಬಾಧೆ ಹಾಗೂ ಕೋವಿಡ್ ವೈರಸ್‌ನಿಂದ ಕನಿಷ್ಠ ಬೆಲೆಗೆ ಮಾವು ಮಾರಾಟ ಮಾಡಲಾಯಿತು. ಇದರಿಂದ ಬೇಸತ್ತ ವ್ಯಾಪಾರಸ್ಥರು ಮಾವಿನ ತೋಟದ ಕಡೆಗೆ ಸುಳಿಯಲಿಲ್ಲ. ಇನ್ನು ಮಾವು ಬೆಳೆಗಾರರು ಅನೇಕ ಕಡೆ ಫಸಲಿನ ಮರಗಳನ್ನು ಕಡಿದು ಹಾಕಿದ್ದು, ಕಳೆದ ಬಾರಿಯ ನಷ್ಟ ಊಹಿಸಿದರೆ ಮಾವಿನ ಬೆಳೆಯ ಸಹವಾಸವೇ ಬೇಡ ಎನ್ನುತ್ತಾರೆ ಮಾವು ಬೆಳೆಗಾರ ರೈತರು.

ನೈಸರ್ಗಿಕ ಮಾವಿನ ಮರದಲ್ಲಿಯೂ ಬರ್ಜರಿ ಹೂವು, ಕಾಯಿ! ಕೆಲವು ಹಳ್ಳಿಗಳಲ್ಲಿ ನೈಸರ್ಗಿಕವಾಗಿ ಮಾವಿನ ಮರಗಳು ಬೆಳೆದು ನಿಂತಿವೆ. ಗಿಡಗಳು ಜನವರಿ ಕೊನೆ ಹಾಗೂ ಫೆಬ್ರವರಿ ಆರಂಭದಲ್ಲಿ ಉತ್ತಮ ಹೂ ಬಿಟ್ಟಿದ್ದವೂ ಆದರೀಗ ಆ ಮಾವಿನ ಗಿಡದಲ್ಲಿ ಕಾಯಿ ಅಷ್ಟೇ ಪ್ರಮಾಣದಲ್ಲಿ ಬಂದಿದೆ. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಅನೇಕ ವರ್ಷಗಳ ಹಿಂದೆ ಹಿರಿಯರು ನೆಟ್ಟು ಬೆಳೆಸಿದ್ದ ಹಾಗೂ ನೀರು ನಿರ್ವಹಣೆ ಬಯಸದ ಮಾವಿನ ಮರಗಳು ಕಾಯಿ ಬಿಟ್ಟು ವಾರ್ಷಿಕ ಲಾಭ ಮಾಡಿಕೊಡಲು ಸಜ್ಜಾಗಿವೆ. ಮಾವಿನ ತೋಟಗಳಲ್ಲಿ ನೀರಿನ ಕೊರತೆ ಇದ್ದಾಗ ನೈಸರ್ಗಿಕ ಮರಗಳು ಕೈ ಹಿಡಿಯುತ್ತಿರುವುದು ವಿಶೇಷವಾಗಿದೆ.

ಜಿಲ್ಲೆಯಲ್ಲಿ ಮಾವು ಬೆಳೆಗೆ ಉತ್ತಮವಾದ ಮಣ್ಣು ಹಾಗೂ ಉತ್ತಮ ಹವಾಮಾನ ಇರುವುದರಿಂದ ಇಲ್ಲಿ ಮಾವು ಬೆಳೆಯುವುದೇ ಉತ್ತಮ ಎಂದು ಇಲ್ಲಿನ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ. ಪ್ರತಿವರ್ಷ ಕಾಡುತ್ತಿದ್ದ ಮ್ಯಾಂಗೋ ಹ್ಯಾಪರ್, ಹಾಗೂ ಬೂದಿರೋಗ ಈ ಬಾರಿ ಕಾಣಿಸಿಕೊಂಡಿಲ್ಲ. ಜಿಲ್ಲೆಯಲ್ಲಿ ಮಾವು ಬೆಳೆ ಬೆಳೆಯಲು ಸೂಕ್ತವಾದ ವಾತಾವರಣ ಅದಕ್ಕೆ ಬೇಕಾದ ಕೆಂಪು ಮಿಶ್ರಿತ ಮಣ್ಣು ಇಲ್ಲಿ ಇರುವುದರಿಂದ ರೈತರು ಮಾವು ಬೆಳೆದು ಬದುಕು ಹಸನಾಗಿಸಿಕೊಳ್ಳಬಹುದೆಂದು ತೋಟಗಾರಿಗೆ ಇಲಾಖೆಯ ಅಧಿಕಾರಿಗಳು ರೈತರಿಗೆ ಸಲಹೇ ನೀಡುತ್ತಿದ್ದಾರೆ.

ಎಕರೆಗೆ 30 ರಿಂದ 40 ಕ್ವಿಂಟಾಲ್ ಇಳುವರಿ ಬರುವ ನಿರೀಕ್ಷೆ ಇದ್ದು, ಸದ್ಯ ಭರಪೂರ ಲಾಭ ತಂದುಕೊಂಡುವ ಇಳುವರಿ ಬಂದರು ಸೂಕ್ತ ಮಾರುಕಟ್ಟೆ ಕೊರತೆಯೂ ಕೂಡ ರೈತರನ್ನ ಕಾಡುತ್ತಿದ್ದು, ಸ್ಥಳೀಯ ಮಾರುಕಟ್ಟೆಗಳಲ್ಲಿ ಮಾವಿನ ಮಾರಾಟ ವ್ಯವಸ್ಥೆ ಇಲ್ಲದೆ ಇರುವುದರಿಂದಾಗಿ ದುಬಾರಿ ಸಾಗಣೆಕೆ ವೆಚ್ಚ ಭರಿಸಬೇಕಾದ ಪ್ರಮೇಯ ರೈತರಿಗೆ ಎದುರಾಗಬಹುದು. ಸರ್ಕಾರ ಪ್ರತಿ ವರ್ಷ ತೋಟಗಾರಿಕೆ ಬೆಳೆಗಾರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಸ್ವಯಂ ಪ್ರೇರಣೆಯಿಂದ ಬರಡು ನೆಲದಲ್ಲಿಯೂ ಬಂಪರ್ ಬೆಳೆ ಬೆಳೆಯುತ್ತಿರುವ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುವುದು ಈ ಭಾಗದ ರೈತರ ಕೋರಿಕೆಯಾಗಿದೆ.

ಇದನ್ನೂ ಓದಿ: ಮಾವು ಬೆಳೆಗಾರರಲ್ಲಿ ಸಂತಸ: ಕಳೆದ ಬಾರಿಗಿಂತ ಈ ಬಾರಿ ಇಳುವರಿ ಹೆಚ್ಚಾಗುವ ಸಾಧ್ಯತೆ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು