AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ ಬದಲಾವಣೆಯ ಹೊಗೆ: ಹೈಕಮಾಂಡ್ ಅಲರ್ಟ್​

ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ ನಡೆಯುತ್ತಿರುವ ಪ್ರತಿ ಚಟುವಟಿಕೆಗಳು ಬೆಂಕಿಯಷ್ಟೇ ಧಗಧಗಿಸುತ್ತಿದೆ. ಇದರ ಶಾಖ ದೂರದ ದೆಹಲಿಗೆ ಹೋಗಿ ಮುಟ್ಟುತ್ತಿದೆ. ಯಾಕಂದ್ರೆ ಸಚಿವರ ಸೀಕ್ರೆಟ್ ಸಭೆಗಳು ಅಷ್ಟೊಂದು ಕುತೂಹಲದ ಜೊತೆ ಡಿಕೆ ಬ್ರದರ್ ಆತಂಕಕ್ಕೂ ಕಾರಣವಾಗಿದೆ. ಅಷ್ಟಕ್ಕೂ ಆಗಿದ್ದೇನು? ಕಾಂಗ್ರೆಸ್ ಕೋಟೆಯಲ್ಲಿ ಆಗ್ತಿರೋ‌ ಮಿಂಚಿನ ಚಟುವಟಿಕೆ ಏನು ಎನ್ನುವ ಒಂದು ವರದಿ ಇಲ್ಲಿದೆ ನೋಡಿ.

ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ ಬದಲಾವಣೆಯ ಹೊಗೆ: ಹೈಕಮಾಂಡ್ ಅಲರ್ಟ್​
ಕರ್ನಾಟಕ ಕಾಂಗ್ರೆಸ್
ಪ್ರಸನ್ನ ಗಾಂವ್ಕರ್​
| Edited By: |

Updated on: Oct 09, 2024 | 9:36 PM

Share

ಬೆಂಗಳೂರು, (ಅಕ್ಟೋಬರ್ 09): ಮುಡಾ ಹಗರಣದಲ್ಲಿ ಇಡಿ ಪ್ರವೇಶದ ಬಳಿಕ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಭೆ ಮೇಲೆ ಸಭೆಗಳು.. ಗುಪ್ತ್ ಗುಪ್ತ್ ಚರ್ಚೆಗಳು.. ರಾಜ್ಯ ರಾಜಕಾರಣದಲ್ಲಿ ಈಗ ನಡೆಯುತ್ತಿರುವ ಒಂದೊಂದೇ ಸಭೆಗಳು ಹಲವು ಚರ್ಚೆಗೆ ಗ್ರಾಸವಾಗುವ ಜೊತೆ ಜೊತೆಗೆ ಕುತೂಹಲ ಹುಟ್ಟಿಸುತ್ತಿವೆ. ಅವರ ಮನೆಗೆ ಇವರು, ಇವರ ಮನೆಗೆ ಅವರು ಹೋದ್ರು. ಯಾಕೆ ಹೋದ್ರೂ ಎನ್ನುವುದೇ ಚರ್ಚೆಯ ಕೇಂದ್ರ ಬಿಂದುವಾಗಿದೆ. ಹೆಚ್ಚು ಕಡಿಮೆ ಕಳೆದೊಂದು ವಾರದಿಂದ ನಡೆಯುತ್ತಿರುವ ರಹಸ್ಯ ಸಭೆಗಳ ಜಂಜಾಟಕ್ಕೆ ದೂರದ ದೆಹಲಿ ಹೈಕಮಾಂಡ್ ನಾಯಕರು ಕೂಡ ತಲೆಕೆಡಿಸಿಕೊಂಡಿದ್ದಾರೆ.

ಕುತೂಹಲ ಹೆಚ್ಚಿಸಿದ ದಲಿತ ಸಚಿವರ‌ ಸೀಕ್ರೇಟ್ ಮೀಟಿಂಗ್

ರಾಜ್ಯ ರಾಜಕೀಯದಲ್ಲೀಗ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೋರ್ಟ್​ನಲ್ಲಿ ಹೋರಾಡುತ್ತಿರುವಾಗ ಬದಲಾವಣೆ ಎಂಬ ಬೆಂಕಿ ಚೆಂಡು ಎಲ್ಲರ ಮನೆ ಬಾಗಿಲಿಗೆ ಹೋಗಿ ಬರುತ್ತಿದೆ. ಇದೇ ವಿಚಾರವಾಗಿ ಸಚಿವರು, ಶಾಸಕರು ಸೀಕ್ರೆಟ್ ಸಭೆಗಳನ್ನ ನಡೆಸ್ತಿದ್ದಾರೆ‌. ನಿನ್ನೆಯಷ್ಟೇ ಮೈಸೂರಿನಲ್ಲಿ ಮೂವರು ದಲಿತ ಸಚಿವರು ಸಭೆ ನಡೆಸಿದ್ದು ಕುತೂಹಲ ಮತ್ತಷ್ಟು ಹೆಚ್ಚಿಸಿದೆ.. ದಸರಾ ಪ್ರಯುಕ್ತ ಮೈಸೂರಿಗೆ ತೆರಳಿದ್ದ ಸಚಿವ ಡಾ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ‌ ಹಾಗೂ ಹೆಚ್ ಸಿ ಮಹಾದೇವಪ್ಪ ಸಭೆ ಮಾಡಿದ್ದರು. ಸಂಸದ ಸುನೀಲ್ ಬೋಸ್ ನಿವಾಸದಲ್ಲಿ ನಡೆದಿದ್ದ ರಹಸ್ಯ ಮೀಟಿಂಗ್ ಬದಲಾವಣೆ ಎಂಬ ಚರ್ಚೆಗೆ ಕಾರಣವಾಗಿದೆ. ಇದೇ ಸಭೆ ಕುರಿತ ಪ್ರಶ್ನೆಗೆ ಸಚಿವರು ಕಾಫಿಗೆ ಟಚ್ ಕೊಟ್ಟಿದ್ದಾರೆ.‌‌ನಾವು ಕಾಫಿ ಪೇ ಚರ್ಚಾ ನಡೆಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಚಿವರು ಅದೇನೇ ಹೇಳಿದ್ರೂ ಸಭೆ ಮಾತ್ರ ಕುತೂಹಲ ಇನ್ನಷ್ಟು ಹೆಚ್ಚಿಸಿದೆ. ಯಾಕಂದ್ರೆ ಸಿದ್ದರಾಮಯ್ಯ ಅವರ ಅತ್ಯಾಪ್ತ ಸಚಿವರು ಹಾಗೂ ದಲಿತರು ಸಚಿವರು ಎನಿಸಿಕೊಂಡುವರು ಸೀಕ್ರೆಟ್ ಮೀಟಿಂಗ್ ಮಾಡಿದ್ದು ಡಿಕೆ ಬ್ರದರ್ ಅಲರ್ಟ್ ಆಗುವಂತೆ ಮಾಡಿದೆ.. ಇದೇ ಕಾರಣಕ್ಕೆ ಡಿಕೆ ಸಹೋದರರು ಬೇರೆಯದ್ದೇ ರೀತಿಯಲ್ಲಿ ದಾಳ‌ ಉರುಳಿಸುತ್ತಿದ್ದಾರೆ..

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ದೂರದ ದೆಹಲಿ ಹೈಕಮಾಂಡ್ ನಾಯಕರು ಅಲರ್ಟ್ ಆಗಿದ್ದಾರೆ. ಸೀಕ್ರೆಟ್ ಮೀಟಿಂಗ್ ಗಳಿಗೆ ಬ್ರೇಕ್ ಹಾಕುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಟಾಸ್ಕ್ ನೀಡಿದಂತಿದೆ. ಕೆಲ ಸಚಿವರ ಹೇಳಿಕೆಗಳು, ಪ್ರತ್ಯೇಕ ಸಭೆಗಳು ನಡೀತಿರೋದು ಹೈಕಮಾಂಡ್ ಗೆ ಗೊತ್ತಾಗಿದೆ. ಅಲ್ಲದೇ ಒಳ ಜಗಳದಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸೋಲಾದಕ್ಕೆ ಎಚ್ಚೆತ್ತ ಕಾಂಗ್ರೆಸ್ ಹೈಕಮಾಂಡ್, ಸಚಿವರು, ಶಾಸಕರ ವಿರುದ್ದ ಕ್ರಮಕ್ಕೆ ಮುಂದಾಗಿದೆ.

​ಸಿಎಂ-ಡಿಸಿಎಂಗೆ ಹೈಕಮಾಂಡ್ ಖಡಕ್ ಸೂಚನೆ

ಈ ಬಗ್ಗೆ ದೂರವಾಣಿ ಮೂಲಕ ಸಿಎಂ, ಡಿಸಿಎಂ ಜೊತೆ ಕೆ ಸಿ ವೇಣುಗೋಪಾಲ ಮಾತುಕತೆ ನಡೆಸಿದ್ದು,. ಇಂತಹ ಬೆಳವಣಿಗೆಗಳನ್ನು ಸಹಿಸಲಾಗದು‌. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಗೆ ಲಾಭ ಎಂಬ ಅಭಿಪ್ರಾಯವನ್ನ ವೇಣುಗೋಪಾಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇದಕ್ಕೆಲ್ಲಾ ಬ್ರೇಕ್ ಹಾಕಬೇಕು ಎನ್ನುವ ಕಾರಣಕ್ಕೆ ಇವತ್ತು ಸಿಎಂ ಹಾಗೂ ಡಿಸಿಎಂ ಸಭೆ ನಡೆಸಿದ್ರು.. ಈ ವೇಳೆ ಶಾಸಕರು, ಸಚಿವರ ‌ಮೀಟಿಂಗ್ ಗಳಿಗೆ ಕಡಿವಾಣ ಹಾಕೋದರ ಕುರಿತು ಚರ್ಚೆ ನಡೆಸಲಾಗಿದೆಯಂತೆ..ಆದ್ರೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್, ಬೇರೆಯದ್ದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ..

ಅದೇನೇ ಹೇಳಿ, ಬೆಂಕಿ ಇಲ್ಲದೇ ಹೊಗೆಯಾಡಲ್ಲ, ಪೆಟ್ರೋಲ್ ಡೀಸೆಲ್ ಇಲ್ಲದೇ ಗಾಡಿ ಓಡಲ್ಲ. ಅದೇ ರೀತಿ ಈ ರಹಸ್ಯ ಸಭೆಗಳು. ಬದಲಾವಣೆ, ಅದು ಇದು ಎಂಬ ಬೆಂಕಿ ಕಾಂಗ್ರೆಸ್ ಮನೆಯಲ್ಲಿ ಹೊಗೆಯಾಡುತ್ತಿದೆ. ಇದು ಮುಂದೆ ಯಾವ್ಯಾವ ಹಾದಿ‌ ಹಿಡಿಯುತ್ತದೆ ಎನ್ನುವುದನ್ನು ಕಾದುನೋಡಬೇಕಷ್ಟೇ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು