AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣದಲ್ಲಿ ಅಧಿಕೃತವಾಗಿ ಇಡಿ ಎಂಟ್ರಿ: ಮೊದಲ ಸಮನ್ಸ್​ ಜಾರಿ, ಯಾರಿಗೆ ಗೊತ್ತಾ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಈ ಮುಡಾ ಕೇಸ್​​ನಲ್ಲಿ ಇಡಿ ಅಧಿಕೃತವಾಗಿ ಪ್ರವೇಶ ಮಾಡಿದ್ದು, ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ನೀಡಿದೆ.

ಮುಡಾ ಪ್ರಕರಣದಲ್ಲಿ ಅಧಿಕೃತವಾಗಿ ಇಡಿ ಎಂಟ್ರಿ: ಮೊದಲ ಸಮನ್ಸ್​ ಜಾರಿ, ಯಾರಿಗೆ ಗೊತ್ತಾ?
ದೂರುದಾರ ಸ್ನೇಹಮಯಿ ಕೃಷ್ಣ
ರಾಮ್​, ಮೈಸೂರು
| Edited By: |

Updated on: Oct 01, 2024 | 10:08 PM

Share

ಬೆಂಗಳೂರು/ಮೈಸೂರು, (ಅಕ್ಟೋಬರ್ 01): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿವೆ. ತಮ್ಮಗೆ ಮಂಜೂರಾಗಿದ್ದ 14 ಸೈಟ್​ಗಳನ್ನು ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ವಾಪಸ್ ಮುಡಾಗೆ ಹಿಂದುರಿಗಿಸಿದ್ದಾರೆ. ಆದರೂ ಸಹ ಜಾರಿ ನಿರ್ದೇಶನಾಲಯ(ಇಡಿ) ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲ ಬಾರಿಗೆ ಅಧಿಕೃತವಾಗಿ ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಮನ್ಸ್ ನೀಡಿದೆ.

ಅಕ್ಟೋಬರ್ 3ರ ಬೆಳಗ್ಗೆ 11 ಗಂಟೆಯೊಳಗೆ ಇ-ಮೇಲ್ ಮೂಲಕ ಮುಡಾ ಪ್ರಕರಣದ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಿಎಂ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಇಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.

ಇದನ್ನೂ ಓದಿ: ಮುಡಾ ಹಗರಣ ಕೇಸ್​: ಸಿಎಂ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು!

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿನ್ನೆ(ಸೆ.30) ಅಷ್ಟೇ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಇಡೀ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲಿಗೆ ದೂರಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ನೀಡಿದೆ.

PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

ಇನ್ನು ಯಾವ ಹಂತಗಳಲ್ಲಿ ಏನೇನು ಆಗಿದೆ. ಹಂತಗಳಲ್ಲಿ ಇದ್ದ ಅಧಿಕಾರಿಗಳು ಜನ ಪ್ರತಿನಿಧಿಯಾರು ಎಂಬ ಮಾಹಿತಿ ಕಲೆಹಾಕಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ವಿಚಾರಣೆ ನಡೆಸಲಿದೆ. ಅಲ್ಲದೇ ಪ್ರಕರಣದ ನಾಲ್ವರು ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ