AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣದಲ್ಲಿ ಅಧಿಕೃತವಾಗಿ ಇಡಿ ಎಂಟ್ರಿ: ಮೊದಲ ಸಮನ್ಸ್​ ಜಾರಿ, ಯಾರಿಗೆ ಗೊತ್ತಾ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ಈ ಮುಡಾ ಕೇಸ್​​ನಲ್ಲಿ ಇಡಿ ಅಧಿಕೃತವಾಗಿ ಪ್ರವೇಶ ಮಾಡಿದ್ದು, ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ನೀಡಿದೆ.

ಮುಡಾ ಪ್ರಕರಣದಲ್ಲಿ ಅಧಿಕೃತವಾಗಿ ಇಡಿ ಎಂಟ್ರಿ: ಮೊದಲ ಸಮನ್ಸ್​ ಜಾರಿ, ಯಾರಿಗೆ ಗೊತ್ತಾ?
ದೂರುದಾರ ಸ್ನೇಹಮಯಿ ಕೃಷ್ಣ
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on: Oct 01, 2024 | 10:08 PM

Share

ಬೆಂಗಳೂರು/ಮೈಸೂರು, (ಅಕ್ಟೋಬರ್ 01): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗಳು ನಡೆಯುತ್ತಿವೆ. ತಮ್ಮಗೆ ಮಂಜೂರಾಗಿದ್ದ 14 ಸೈಟ್​ಗಳನ್ನು ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ವಾಪಸ್ ಮುಡಾಗೆ ಹಿಂದುರಿಗಿಸಿದ್ದಾರೆ. ಆದರೂ ಸಹ ಜಾರಿ ನಿರ್ದೇಶನಾಲಯ(ಇಡಿ) ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲ ಬಾರಿಗೆ ಅಧಿಕೃತವಾಗಿ ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಮನ್ಸ್ ನೀಡಿದೆ.

ಅಕ್ಟೋಬರ್ 3ರ ಬೆಳಗ್ಗೆ 11 ಗಂಟೆಯೊಳಗೆ ಇ-ಮೇಲ್ ಮೂಲಕ ಮುಡಾ ಪ್ರಕರಣದ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಿಎಂ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಇಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.

ಇದನ್ನೂ ಓದಿ: ಮುಡಾ ಹಗರಣ ಕೇಸ್​: ಸಿಎಂ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು!

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿನ್ನೆ(ಸೆ.30) ಅಷ್ಟೇ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಇಡೀ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲಿಗೆ ದೂರಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ನೀಡಿದೆ.

PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

ಇನ್ನು ಯಾವ ಹಂತಗಳಲ್ಲಿ ಏನೇನು ಆಗಿದೆ. ಹಂತಗಳಲ್ಲಿ ಇದ್ದ ಅಧಿಕಾರಿಗಳು ಜನ ಪ್ರತಿನಿಧಿಯಾರು ಎಂಬ ಮಾಹಿತಿ ಕಲೆಹಾಕಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ವಿಚಾರಣೆ ನಡೆಸಲಿದೆ. ಅಲ್ಲದೇ ಪ್ರಕರಣದ ನಾಲ್ವರು ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ