AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ಮುಡಾ ಮಾಜಿ ಆಯುಕ್ತ ನಟೇಶ್ ಅವರ ಮನೆಯಲ್ಲಿ 33 ಗಂಟೆಗಳ ಕಾಲ ನಡೆದ ಇಡಿ ದಾಳಿ ಇದೀಗ ಅಂತ್ಯಗೊಂಡಿದೆ. ದಾಳಿಯ ನಂತರ ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆ ಮೂಲಕ ಮುಡಾ ಹಗರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಮುಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ
ಮುಡಾ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ
TV9 Web
| Edited By: |

Updated on:Oct 29, 2024 | 7:54 PM

Share

ಬೆಂಗಳೂರು, ಅಕ್ಟೋಬರ್​ 29: ಮುಡಾ ಸೈಟ್​ ಹಗರಣ (muda case) ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ನಡೆದ ಇಡಿ ದಾಳಿ ಇದೀಗ ಅಂತ್ಯವಾಗಿದೆ. ಸದ್ಯ ನಟೇಶ್​ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಲ್ಲೇಶ್ವರಂ ಮನೆಯಿಂದ ನಟೇಶ್​ಗೆ ಸೇರಿದ ಕೆಂಪು ಬಣ್ಣದ ಕಿಯಾ ಕಾರಲ್ಲೇ ಶಾಂತಿನಗರ ಇಡಿ ಕಚೇರಿಗೆ ಅಧಿಕಾರಿಗಳು ಕರೆತಂದಿದ್ದಾರೆ.

ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ‌ ನಟೇಶ್ ಮನೆಗೆ ನಿನ್ನೆ ಬೆಳಗ್ಗೆ 8 ಗಂಟೆಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿ10 ಗಂಟೆಯವರೆಗೂ ದಾಖಲೆಗಳನ್ನು ಜಾಲಾಡಿದ್ದು, 4 ಬ್ಯಾಗ್ ಕೊಂಡೊಯ್ದಿದ್ದರು. ಇಂದು ಕೂಡ ತಲಾಶ್​ ಮಾಡಿದ್ದು, ಸತತ 33 ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮುಗಿಸಿ ತೆರಳಿದ್ದಾರೆ.

ಇದನ್ನೂ ಓದಿ: ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಇನ್ನು ಸಿಎಂ ಸಿದ್ದರಾಮಯ್ಯ ಆಪ್ತ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಇಡಿ ವಿಚಾರಣೆ ಅಂತ್ಯವಾಗಿದೆ. ಮೈಸೂರಿನ ಹಿನಕಲ್​ನಲ್ಲಿರುವ ರಾಕೇಶ್ ಪಾಪಣ್ಣ ಮನೆ ಮೇಲೆ ನಿನ್ನೆ ಬೆಳಗ್ಗೆ 7 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಸತತ 35 ಗಂಟೆ ತನಿಖೆ, ವಿಚಾರಣೆ ನಡೆಸಿ ಇದೀಗ ನಿರ್ಗಮಿಸಿದ್ದಾರೆ.

ಮಂಡ್ಯ ಜಿಲ್ಲೆಯ 3 ಕಡೆ ಕೂಡ ಇಡಿ ಅಧಿಕಾರಿಗಳ ಪರಿಶೀಲನೆ ಅಂತ್ಯವಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿಯ ಕುರುಬರ ಬೀದಿಯಲ್ಲಿರುವ ಜಯರಾಮ್ ಸಂಬಂಧಿಕರು ಮತ್ತು ಪಾಲುದಾರರ ಮನೆ ಮೇಲೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಹಲವು ಮಹತ್ವದ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಸಂಬಂಧಿಕರ ಮನೆಯಲ್ಲಿ ಸಿಕ್ಕ ದಾಖಲೆ ಆಧಾರದಲ್ಲಿ ಜಯರಾಮ್​ಗೆ ಗ್ರಿಲ್ ಮಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

ದಿನೇಶ್ ಕುಮಾರ್ ಆಯುಕ್ತರಾಗಿ ಮೈಸೂರಿಗೆ ಬಂದ ಬಳಿಕವೇ ವಕ್ರತುಂಡ ಸೊಸೈಟಿ ಪ್ರಾರಂಭವಾಗಿತ್ತು. ಸಂಘಕ್ಕೆ ನಿರ್ದೇಶಕರಾದ ಇಬ್ಬರು ದಿನೇಶ್ ಕುಟುಂಬಸ್ಥರು ಎನ್ನುವ ಅನುಮಾನವಿದೆ. ಎಂಎಂಜಿ ಕಚೇರಿ ಕೆಳಗೆ ಈ ವಕ್ರತುಂಡ ಸೊಸೈಟಿ ಇದೆ. ಹೀಗಾಗಿ ಇಡಿ ಅಧಿಕಾರಿಗಳು ವಕ್ರತುಂಡ ಸೊಸೈಟಿಯಲ್ಲಿ ದಾಖಲೆ ಪರಿಶೀಲಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:32 pm, Tue, 29 October 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್