AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಸಜ್ಜಾಗುತ್ತಿದ್ದಾರೆ. ಇತ್ತ ಪ್ರಕರಣದಿಂದ ಪಾರಾಗಲು ಸಿಎಂ ಕಾನೂನು ತಜ್ಞರ ಜತೆ ಚರ್ಚಿಸುತ್ತಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂ ಮತ್ತೊಂದು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ.

ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ
ಮುಡಾ ಕೇಸ್​: ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 28, 2024 | 7:53 PM

Share

ಮೈಸೂರು, ಸೆಪ್ಟೆಂಬರ್ 28: ಸಿಎಂ ಸಿದ್ದರಾಮಯ್ಯಗೆ (Siddaramaiah) ದೊಡ್ಡ ಸಂಕಷ್ಟ ತಂದಿರುವ ಮುಡಾ ಹಗರಣದ ವಿಚಾರಣೆಗೆ, ಲೋಕಾಯುಕ್ತ ಪೊಲೀಸರು ಸಜ್ಜಾಗಿದ್ದಾರೆ. ತನಿಖೆಗೆ ನಾಲ್ಕು ತಂಡ ಸಜ್ಜಾಗಿದ್ದು, ಸೋಮವಾರದಿಂದಲೇ ಫೀಲ್ಡ್‌ಗೆ ಇಳಿಯಲಿವೆ. ಈ ಮಧ್ಯೆ ದೂರುದಾರ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ. ಆ ಮೂಲಕ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೆನ್ನು ಬಿಡದ ಸ್ನೇಹಮಯಿ‌ ಕೃಷ್ಣ: ಸಾಮಾಜಿಕ ಜಾಲತಾಣದಲ್ಲಿ ಹಳೆ ವಿಡಿಯೋ ಹಂಚಿಕೊಂಡು ಟಾಂಗ್​

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಪತ್ನಿಗೆ ಅಕ್ರಮವಾಗಿ ಸೈಟ್‌ ಹಂಚಿಕೆ ಮಾಡಿದ್ದಾರೆ ಅನ್ನೋ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣ ಸಂಬಂಧ ನಿನ್ನೆಯಷ್ಟೇ ಸಿಎಂ ಹಾಗೂ ಪತ್ನಿ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಇಂದು ಹಾಗೂ ನಾಳೆ ರಜೆ ಇರೋದ್ರಿಂದ ಸೋಮವಾರದಿಂದ ತನಿಖೆ ಆರಂಭ ಆಗೋ ಸಾಧ್ಯತೆ ಇದೆ.

ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಬ್ಬಂದಿ ಸಭೆ ನಡೆಸಿದ ಎಸ್‌ಪಿ ಉದೇಶ್‌, ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​​​, ಡಿವೈಎಸ್​ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್​ಪಿ ಮ್ಯಾಥ್ಯೂ ಥಾಮಸ್​​​ ಹಾಗೂ ಇನ್ಸ್​ಪೆಕ್ಟರ್​​ ಒಳಗೊಂಡ ನಾಲ್ಕು ತನಿಖಾ ತಂಡಗಳ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ನಿನ್ನೆಯಿಂದಲೂ ಮೈಸೂರು ಪ್ರವಾಸದಲ್ಲಿರುವ ಸಿಎಂ, ನಿನ್ನೆ ಕೆಡಿಪಿ ಸಭೆ ನಡೆಸಿದ್ದರು. ಪ್ರತೀ ಸಭೆಯಲ್ಲೂ ಅಧಿಕಾರಿಗಳ ಚಳಿ ಬಿಡಿಸುತ್ತಿದ್ದ ಸಿಎಂ, ನಿನ್ನೆ ಮಾತ್ರ ಸೈಲೆಂಟ್ ಆಗಿ ಇದ್ರಂತೆ. ಎಫ್‌ಐಆರ್‌ ಎಫೆಕ್ಟ್‌ನಿಂದ ಸಿಎಂ ಮಂಕಾದ್ರಾ ಅನ್ನೋ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು