AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹತ್ವದ ಅಂಶ ಉಲ್ಲೇಖ

ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆಯ ಅಂತಿಮ ವರದಿ ಸಲ್ಲಿಕೆಯಾಗಿದ್ದು, ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಲೋಕಾಯುಕ್ತ ವರದಿಯನ್ನು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಐಜಿಯವರಿಗೆ ಸಲ್ಲಿಕೆ ಮಾಡಲಾಗಿದೆ. ಅಂತಿಮ ವರದಿಯಲ್ಲೇನಿದೆ? ಅದರಲ್ಲಿ ಉಲ್ಲೇಖವಾಗಿರುವ ಮಹತ್ವದ ಅಂಶಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಮುಡಾ ಹಗರಣ: ಲೋಕಾಯುಕ್ತ ತನಿಖಾ ವರದಿಯಲ್ಲಿ ಮಹತ್ವದ ಅಂಶ ಉಲ್ಲೇಖ
ಮುಡಾ, ಲೋಕಾಯುಕ್ತ
Kiran HV
| Edited By: |

Updated on: Feb 13, 2025 | 6:45 PM

Share

ಬೆಂಗಳೂರು, ಫೆಬ್ರವರಿ 13: ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದ್ದರೆ ಮತ್ತೊಂದೆಡೆ, ಲೋಕಾಯುಕ್ತ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಲಾಗಿದೆ. ಹಗರಣದ ಇಂಚಿಂಚೂ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು, ಐಜಿಪಿ ಸುಬ್ರಮಣ್ಯೇಶ್ವರ ರಾವ್​ಗೆ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​ ಸಲ್ಲಿಸಿರುವ ವರದಿಯಲ್ಲಿ ಕೆಲವು ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.

550 ಪುಟಗಳ ವರದಿ ಸಲ್ಲಿಕೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, 5 ಭಾಗಗಳಾಗಿ ವಿಂಗಡಣೆ ಮಾಡಿದ್ದಾರೆ.

ಲೋಕಾಯುಕ್ತ ರಿಪೋರ್ಟ್​ನಲ್ಲಿ ಏನಿದೆ?

ಕೆಲ ಅಧಿಕಾರಿಗಳು ನಿಯಮ ಗಾಳಿಗೆ ತೂರಿರುವುದು ಕಂಡು ಬಂದಿದೆ. ಮುಡಾದಲ್ಲಿ 14 ಸೈಟ್​ ನೀಡುವ ಅವಶ್ಯಕತೆ ಇರಲಿಲ್ಲವೆಂದು ಉಲ್ಲೇಖ ಮಾಡಲಾಗಿದೆ. ಸೈಟ್ ನೀಡುವ ಅವಶ್ಯಕತೆ ಇಲ್ಲದೇ ಇದ್ರೂ ಸೈಟ್ ನೀಡಿರುವುದು ಕಂಡುಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಹಗರಣದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವುದು ಕಂಡು ಬಂದಿಲ್ಲ, ಆದರೆ, ಕೆಲವೊಂದು ದಾಖಲೆಗಳು, 14 ಸೈಟ್​ಗಳನ್ನು ನೀಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಲೋಕಾಯುಕ್ತ ಪೊಲೀಸರು ಮಾಡಿರುವ ಐದು ವಿಭಾಗಗಳು ಯಾವುವು?

  1. ದೇವರಾಜು ಜಮೀನು ಹೇಗೆ ಬಂತು ಎಂಬ ಹಿನ್ನೆಲೆಗಳ ಬಗ್ಗೆ.
  2. ಡಿನೋಟಿಫಿಕೇಷನ್​ ಹೇಗೆ ಆಯಿತು ಎಂಬುದು.
  3. ಭೂ ಪರಿವರ್ತಣೆ ಹೇಗೆ ಆಯಿತು ಎಂಬ ವಿಚಾರ.
  4. ಪಾರ್ವತಿಗೆ ಜಮೀನು ನೀಡಿರುವ ಬಗ್ಗೆ.
  5. ಸೈಟ್​ ವಾಪಸ್​ ಕೊಟ್ಟಿರುವ ಬಗ್ಗೆ ಹಾಗೂ ನಂತರದ ಇತರೆ ಬೆಳವಣಿಗೆಗಳು.

ಇದನ್ನೂ ಓದಿ: ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿದ್ದರಾಮಯ್ಯ: ಸಿಎಂ ಹುದ್ದೆ ಚರ್ಚೆಗೆ ಮೆಗಾ ಟ್ವಿಸ್ಟ್

ತಾವೇ ವಾದ ಮಂಡನೆಗೆ ಸ್ನೇಹಮಯಿ ಕೃಷ್ಣ ನಿರ್ಧಾರ

ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನಡೆ ನಿಗೂಢವಾಗಿದೆ. ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ ಮಾಡಿದ್ದಾರೆ. ಮತ್ತೊಂದು ವಿಶೇಷ ಅಂದರೆ, ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ತಾವೇ ವಾದ ಮಂಡನೆಗೆ ಸ್ನೇಹಮಯಿ ಕೃಷ್ಣ ನಿರ್ಧಾರ ಮಾಡಿದ್ದಾರೆ. ವಕೀಲರನ್ನು ನೇಮಿಸಿಕೊಳ್ಳುವ ಬದಲು, ತಾವೇ ವಾದ ಮಂಡನೆ ಮಾಡಲಿದ್ದಾರೆ. ವಕೀಲರ ನೇಮಿಸಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ವಕೀಲರ ಸಹಕಾರ ಸಲಹೆಗಳೊಂದಿಗೆ ತಮ್ಮ ಆರೋಪಗಳ ಸಂಬಂಧ ಹೋರಾಟ ಮಾಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ