AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಮುಡಾ ಹಗರಣದಲ್ಲಿ ಗಂಡಾಂತರಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ಒಂದು ಹಂತಕ್ಕೆ ನಿರಾಳರಾಗುವಂತಾಗಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೊನೆಗೂ ವರದಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೆ ಕ್ಲೀನ್​ಚಿಟ್ ನೀಡಿದೆ. ವರದಿಯನ್ನು ಸೋಮವಾರ ಕೋರ್ಟ್​ಗೆ ಸಲ್ಲಿಸಲಾಗುತ್ತದೆ. ಆದಾಗ್ಯೂ, ಮುಡಾ ಹಗರಣ ಸಂಬಂಧ ಇಡಿ ತನಿಖೆ ಜಾರಿಯಲ್ಲಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್
ಸಿದ್ದರಾಮಯ್ಯ
Kiran HV
| Edited By: |

Updated on:Jan 23, 2025 | 10:05 AM

Share

ಬೆಂಗಳೂರು, ಜನವರಿ 23: ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಹಗಿದೆ.

ಸೋಮವಾರ ಕೋರ್ಟ್​ಗೆ ಸಲ್ಲಿಕೆ

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಸಿಎಂ ಪ್ರಭಾವ ಇಲ್ಲದೆ ಸಾಧ್ಯವೇ ಇಲ್ಲ: ಸ್ನೇಹಮಯಿ ಕೃಷ್ಣ

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ, ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ‘ಟಿವಿ9’ ಜತೆ ಮಾತನಾಡಿದ ಅವರು, ಲೋಕಾಯುಕ್ತ ವರದಿಯಲ್ಲಿ ಸಿಎಂ ಹಾಗೂ ಅವರ ಪತ್ನಿಗೆ ಕ್ಲೀನ್​ಚಿಟ್‌ ನೀಡಿರುವ ಬಗ್ಗೆ ಅಧಿಕೃತ ಮಾಹಿತಿ ನಮಗೆ ಬಂದಿಲ್ಲ. ಆದಾಗ್ಯೂ ಅದು ನಿರೀಕ್ಷಿತ. ಇದರಿಂದ ನನ್ನ ಹೋರಾಟಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಪರಾಧವೆಸಗಲು ಸಾಧ್ಯವೇ ಇಲ್ಲ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ, ಇಡಿ ತನಿಖೆಯಲ್ಲಿ ಬಯಲು

ಮುಡಾ ಹಗರಣ ಸಂಬಂಧ ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ಪ್ರಕರಣದ ಕುರಿತ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 am, Thu, 23 January 25

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ