AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಬೆಂಗಳೂರು ಮೈಸೂರು ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಇದೀಗ ಕರಡು ರೂಟ್​ಮ್ಯಾಪ್ ಸಿದ್ಧವಾಗಿದ್ದು, ಭಾನುವಾರದ ಎನ್​ಡಿಎ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ರೂಟ್​​ಮ್ಯಾಪ್ ವಿವರ ಇಲ್ಲಿದೆ.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ
ಕಿರಣ್​ ಹನಿಯಡ್ಕ
| Edited By: |

Updated on: Jul 26, 2024 | 2:52 PM

Share

ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಗೆ ಬಿಜೆಪಿ ಸಿದ್ಧತೆ ಮಾಡುತ್ತಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಒಟ್ಟು 8 ದಿನಗಳ ರೂಪುರೇಷೆಯನ್ನು ಪಕ್ಷದ ನಾಯಕರು ತಯಾರಿಸಿದ್ದಾರೆ.

ಪಾದಯಾತ್ರೆ ಎಲ್ಲಿಂದ ಶುರು?

  1. ನೈಸ್​ ರಸ್ತೆ ಜಂಕ್ಷನ್​ನಲ್ಲಿರುವ ಕೆಂಪಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ನಾಯಕರ ಪಾದಯಾತ್ರೆ ಆರಂಭವಾಗಲಿದೆ.
  2. ಮೊದಲ ದಿನ 12 ಕಿಮೀ ಪಾದಯಾತ್ರೆ ನಡೆಸಲಿರುವ ಬಿಜೆಪಿ ನಾಯಕರು ಅಂದು ರಾತ್ರಿ ಮಂಜುನಾಥ್ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  3. 2ನೇ ದಿನ 20.5 ಕಿಮೀ ಪಾದಯಾತ್ರೆ ನಡೆಸಲಿರುವ ನಾಯಕರು ಬಳಿಕ ಕೆಂಗಲ್ ಆಂಜನೇಯ ದೇಗುಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  4. 3ನೇ ದಿನ 19 ಕಿಮೀ ಪಾದಯಾತ್ರೆ ನಡೆಸುವ ಬಿಜೆಪಿ ನಾಯಕರು, ನಿಡಗಟ್ಟದ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  5. 4ನೇ ದಿನ 21.5 ಕಿಮೀ ಪಾದಯಾತ್ರೆ ನಡೆಸಿ ಶಶಿಕಿರಣ್ ಸಭಾಂಗಣದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  6. 5ನೇ ದಿನ 16.5 ಕಿಮೀ ಪಾದಯಾತ್ರೆ ನಡೆಸಿ ಮಂಡ್ಯ ಜಿಲ್ಲೆಗೆ ತಲುಪಲಿದ್ದಾರೆ. ಅಂದು ರಾತ್ರಿ ಇಂಡವಾಳ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  7. 6ನೇ ದಿನ 17 ಕಿಮೀ ಪಾದಯಾತ್ರೆ ನಡೆಸಿ ಮಂಜುನಾಥ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  8. 7ನೇ ದಿನ 9 ಕಿಮೀ ಮತ್ತು 8ನೇ ದಿನ 17 ಕಿಮೀ ಪಾದಯಾತ್ರೆ ಮಾಡಿ ಮೈಸೂರು ತಲುಪಲಿದ್ದಾರೆ.

ಇದನ್ನೂ ಓದಿ: ಕೊನೆಗೂ ಆ ತಪ್ಪನ್ನು ಒಪ್ಪಿಕೊಂಡ ಸಿದ್ದರಾಮಯ್ಯ: ಆದರೆ…

ಬಿಜೆಪಿ ನಾಯಕರ ಪಾದಯಾತ್ರೆಯ ರೂಟ್​​ಮ್ಯಾಪ್​ಗೆ ಭಾನುವಾರ ಅಂತಿಮ ಮುದ್ರೆ ಬೀಳಲಿದೆ. ಅಂದು ನಡೆಯಲಿರುವ ಎನ್​​ಡಿಎ ಸಭೆಯಲ್ಲಿ ರೂಟ್ ಮ್ಯಾಪ್‌ ಅಂತಿಮಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ