AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಬೆಂಗಳೂರು ಮೈಸೂರು ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಇದೀಗ ಕರಡು ರೂಟ್​ಮ್ಯಾಪ್ ಸಿದ್ಧವಾಗಿದ್ದು, ಭಾನುವಾರದ ಎನ್​ಡಿಎ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ರೂಟ್​​ಮ್ಯಾಪ್ ವಿವರ ಇಲ್ಲಿದೆ.

ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ
ಕಿರಣ್​ ಹನಿಯಡ್ಕ
| Edited By: |

Updated on: Jul 26, 2024 | 2:52 PM

Share

ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಗೆ ಬಿಜೆಪಿ ಸಿದ್ಧತೆ ಮಾಡುತ್ತಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಒಟ್ಟು 8 ದಿನಗಳ ರೂಪುರೇಷೆಯನ್ನು ಪಕ್ಷದ ನಾಯಕರು ತಯಾರಿಸಿದ್ದಾರೆ.

ಪಾದಯಾತ್ರೆ ಎಲ್ಲಿಂದ ಶುರು?

  1. ನೈಸ್​ ರಸ್ತೆ ಜಂಕ್ಷನ್​ನಲ್ಲಿರುವ ಕೆಂಪಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ನಾಯಕರ ಪಾದಯಾತ್ರೆ ಆರಂಭವಾಗಲಿದೆ.
  2. ಮೊದಲ ದಿನ 12 ಕಿಮೀ ಪಾದಯಾತ್ರೆ ನಡೆಸಲಿರುವ ಬಿಜೆಪಿ ನಾಯಕರು ಅಂದು ರಾತ್ರಿ ಮಂಜುನಾಥ್ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  3. 2ನೇ ದಿನ 20.5 ಕಿಮೀ ಪಾದಯಾತ್ರೆ ನಡೆಸಲಿರುವ ನಾಯಕರು ಬಳಿಕ ಕೆಂಗಲ್ ಆಂಜನೇಯ ದೇಗುಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  4. 3ನೇ ದಿನ 19 ಕಿಮೀ ಪಾದಯಾತ್ರೆ ನಡೆಸುವ ಬಿಜೆಪಿ ನಾಯಕರು, ನಿಡಗಟ್ಟದ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  5. 4ನೇ ದಿನ 21.5 ಕಿಮೀ ಪಾದಯಾತ್ರೆ ನಡೆಸಿ ಶಶಿಕಿರಣ್ ಸಭಾಂಗಣದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  6. 5ನೇ ದಿನ 16.5 ಕಿಮೀ ಪಾದಯಾತ್ರೆ ನಡೆಸಿ ಮಂಡ್ಯ ಜಿಲ್ಲೆಗೆ ತಲುಪಲಿದ್ದಾರೆ. ಅಂದು ರಾತ್ರಿ ಇಂಡವಾಳ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  7. 6ನೇ ದಿನ 17 ಕಿಮೀ ಪಾದಯಾತ್ರೆ ನಡೆಸಿ ಮಂಜುನಾಥ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
  8. 7ನೇ ದಿನ 9 ಕಿಮೀ ಮತ್ತು 8ನೇ ದಿನ 17 ಕಿಮೀ ಪಾದಯಾತ್ರೆ ಮಾಡಿ ಮೈಸೂರು ತಲುಪಲಿದ್ದಾರೆ.

ಇದನ್ನೂ ಓದಿ: ಕೊನೆಗೂ ಆ ತಪ್ಪನ್ನು ಒಪ್ಪಿಕೊಂಡ ಸಿದ್ದರಾಮಯ್ಯ: ಆದರೆ…

ಬಿಜೆಪಿ ನಾಯಕರ ಪಾದಯಾತ್ರೆಯ ರೂಟ್​​ಮ್ಯಾಪ್​ಗೆ ಭಾನುವಾರ ಅಂತಿಮ ಮುದ್ರೆ ಬೀಳಲಿದೆ. ಅಂದು ನಡೆಯಲಿರುವ ಎನ್​​ಡಿಎ ಸಭೆಯಲ್ಲಿ ರೂಟ್ ಮ್ಯಾಪ್‌ ಅಂತಿಮಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು