Kannada News Karnataka MUDA Scam: BJP Leaders Bengaluru Mysuru Padayatra route map to be finalised on suday, here is the details in Kannada
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್ಮ್ಯಾಪ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಬೆಂಗಳೂರು ಮೈಸೂರು ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಇದೀಗ ಕರಡು ರೂಟ್ಮ್ಯಾಪ್ ಸಿದ್ಧವಾಗಿದ್ದು, ಭಾನುವಾರದ ಎನ್ಡಿಎ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ರೂಟ್ಮ್ಯಾಪ್ ವಿವರ ಇಲ್ಲಿದೆ.
ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ
ಬೆಂಗಳೂರು, ಜುಲೈ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಗೆ ಬಿಜೆಪಿ ಸಿದ್ಧತೆ ಮಾಡುತ್ತಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಒಟ್ಟು 8 ದಿನಗಳ ರೂಪುರೇಷೆಯನ್ನು ಪಕ್ಷದ ನಾಯಕರು ತಯಾರಿಸಿದ್ದಾರೆ.
ಪಾದಯಾತ್ರೆ ಎಲ್ಲಿಂದ ಶುರು?
ನೈಸ್ ರಸ್ತೆ ಜಂಕ್ಷನ್ನಲ್ಲಿರುವ ಕೆಂಪಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ನಾಯಕರ ಪಾದಯಾತ್ರೆ ಆರಂಭವಾಗಲಿದೆ.
ಮೊದಲ ದಿನ 12 ಕಿಮೀ ಪಾದಯಾತ್ರೆ ನಡೆಸಲಿರುವ ಬಿಜೆಪಿ ನಾಯಕರು ಅಂದು ರಾತ್ರಿ ಮಂಜುನಾಥ್ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
2ನೇ ದಿನ 20.5 ಕಿಮೀ ಪಾದಯಾತ್ರೆ ನಡೆಸಲಿರುವ ನಾಯಕರು ಬಳಿಕ ಕೆಂಗಲ್ ಆಂಜನೇಯ ದೇಗುಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
3ನೇ ದಿನ 19 ಕಿಮೀ ಪಾದಯಾತ್ರೆ ನಡೆಸುವ ಬಿಜೆಪಿ ನಾಯಕರು, ನಿಡಗಟ್ಟದ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
4ನೇ ದಿನ 21.5 ಕಿಮೀ ಪಾದಯಾತ್ರೆ ನಡೆಸಿ ಶಶಿಕಿರಣ್ ಸಭಾಂಗಣದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
5ನೇ ದಿನ 16.5 ಕಿಮೀ ಪಾದಯಾತ್ರೆ ನಡೆಸಿ ಮಂಡ್ಯ ಜಿಲ್ಲೆಗೆ ತಲುಪಲಿದ್ದಾರೆ. ಅಂದು ರಾತ್ರಿ ಇಂಡವಾಳ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
6ನೇ ದಿನ 17 ಕಿಮೀ ಪಾದಯಾತ್ರೆ ನಡೆಸಿ ಮಂಜುನಾಥ ಚೌಲ್ಟ್ರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
7ನೇ ದಿನ 9 ಕಿಮೀ ಮತ್ತು 8ನೇ ದಿನ 17 ಕಿಮೀ ಪಾದಯಾತ್ರೆ ಮಾಡಿ ಮೈಸೂರು ತಲುಪಲಿದ್ದಾರೆ.