AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಅಕ್ರಮ ಎಸಗಿದ ಅಧಿಕಾರಿಗಳ ರಕ್ಷಣೆ ವಿರುದ್ಧ ಬಿಜೆಪಿ ಒಬಿಸಿ ಮೋರ್ಚಾ ಕಾನೂನು ಹೋರಾಟದ ಎಚ್ಚರಿಕೆ

ಮುಡಾದಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಇತರ ಮೂವರು ಅಧಿಕಾರಿಗಳಿಗೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್ ರಘು ಕೌಟಿಲ್ಯ ಪತ್ರ ಬರೆದಿದ್ದಾರೆ.

ಮುಡಾ ಹಗರಣ: ಅಕ್ರಮ ಎಸಗಿದ ಅಧಿಕಾರಿಗಳ ರಕ್ಷಣೆ ವಿರುದ್ಧ ಬಿಜೆಪಿ ಒಬಿಸಿ ಮೋರ್ಚಾ ಕಾನೂನು ಹೋರಾಟದ ಎಚ್ಚರಿಕೆ
ಮುಡಾ ಹಗರಣ: ಅಕ್ರಮ ಎಸಗಿದ ಅಧಿಕಾರಿಗಳ ರಕ್ಷಣೆ ವಿರುದ್ಧ ಬಿಜೆಪಿ ಒಬಿಸಿ ಮೋರ್ಚಾ ಕಾನೂನು ಹೋರಾಟದ ಎಚ್ಚರಿಕೆ
Follow us
Ganapathi Sharma
|

Updated on: Sep 05, 2024 | 2:52 PM

ಬೆಂಗಳೂರು, ಸೆಪ್ಟೆಂಬರ್ 5: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿರುವ ಹಗರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದೆ. ನಿಯಮಬಾಹಿರವಾಗಿ ಮುಖ್ಯಮಂತ್ರಿಗಳಿಗೆ 14 ನಿವೇಶನಗಳನ್ನು ಬಳುವಳಿಯಾಗಿ ನೀಡಿದ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡಲಿದ್ದೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್ ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐಎಎಸ್ ಉಮಾಶಂಕರ್ ಹಾಗೂ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಎಂ ಅವರಿಗೆ ರಘು ಕೌಟಿಲ್ಯ ಪತ್ರ ಬರೆದಿದ್ದಾರೆ.

ರಘು ಕೌಟಿಲ್ಯ ಪತ್ರದಲ್ಲೇನಿದೆ?

ಮುಡಾ ಹಗರಣದ ಸೂತ್ರಧಾರಿಯಾದ ಹಿಂದಿನ ಆಯುಕ್ತ ಡಿಬಿ ನಟೇಶ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಈ ಪತ್ರ ಬರೆಯಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈ ಹಿಂದೆ ನಡೆದಿರುವ ಅನೇಕ ಅವ್ಯವಹಾರಗಳು ಹಾಗೂ ನಿಯಮ ಬಾಹಿರ ನಿರ್ಧಾರಗಳ ವಿರುದ್ಧ ಸಲ್ಲಿಕೆಯಾದ ದೂರುಗಳ ಹಿನ್ನೆಲೆಯಲ್ಲಿ ಮೇಲ್ಕಂಡ ಉಲ್ಲೇಖದಂತೆ ರಚಿಸಲಾಗಿದ್ದ ತಾಂತ್ರಿಕ ಸಮಿತಿ ಸರ್ಕಾರಕ್ಕೆ ದಿ: 3.11.2023ರಂದು ಸರ್ಕಾರಕ್ಕೆ ಸುಧೀರ್ಘ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿ ಮುಡಾದಲ್ಲಿ ನಡೆದಿರುವ ಹಗರಣಗಳ ಕುರಿತು ಮಾಹಿತಿ ಒದಗಿಸಲಾಗಿತ್ತು. ಅದರಲ್ಲೂ ಶೇ 50:50 ಅನುಪಾತದ ಹೆಸರಿನಲ್ಲಿ ನಿಯಮ ಬಾಹಿರವಾಗಿ ಸಾವಿರಾರು ನಿವೇಶವನ್ನು ವಿತರಿಸಿ ಅಕ್ರಮವಾಗಿ ಕ್ರಯ ಮಾಡಿಕೊಟ್ಟು ಪ್ರಾಧಿಕಾರದ ಆಸ್ತಿ ಹಾಗೂ ಸಾವಿರಾರು ಕೋಟಿ ರೂಪಾಯಿಯಗಳ ಆರ್ಥಿಕ ನಷ್ಟ ಉಂಟಾಗಿರುವುದರ ಕುರಿತು ಆಧಾರಸಹಿತವಾಗಿ ವರದಿ ಸಲ್ಲಿಸಿತ್ತು. ಮೇಲಿನ ಕಾರಣದ ಹಿನ್ನೆಲೆಯಲ್ಲಿ ಸುಧೀರ್ಘ ವಿಳಂಬಧೋರಣೆ ಅನುಸರಿಸಿ ದಿನಾಂಕ 31.8.2024 ರಂದು ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವ ಆದೇಶ ಹೊರಡಿಸಲಾಗಿದೆ. ಆದರೆ, ಸದ್ಯ ಈಗಾಗಲೇ ಪ್ರಚಲಿತದಲ್ಲಿರುವ ರಾಜ್ಯದ ಇತಿಹಾಸದಲ್ಲಿ ಕಂಡು ಕೇಳರಿಯದ ಅಂದಾಜು 10 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 10 ಸಾವಿರ ನಿವೇಶನಗಳ ಅಕ್ರಮ ವಿತರಣೆಯ ನಿಯಮಬಾಹಿರ ಲೂಟಿಕೊರತನದ ಪ್ರಕರಣದ ಮೂಲ ರೂವಾರಿ ಎಂದು ಸಾಕ್ಷಿಕರಿಸಲಾಗಿರುವ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಹಗರಣದ ಭಾಗಿದಾರಸ್ವ ಇತರ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮವನ್ನು ಜರಗಿಸಿರುವುದಿಲ್ಲ. ದಿನಾಂಕ 20.11.2020 ರಂದು ಮುಡಾದಲ್ಲಿ ನಿರ್ಣಯ ಕೈಗೊಳ್ಳದೇ ಮುಂದೂಡಲಾಗುವ ಶೇ 50:50ರ ಅನುಪಾತದ ನಿವೇಶನ ವಿತರಣೆಯ ವಿಷಯವನ್ನು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆಯ ನಡಾವಳಿ ದಾಖಲಿಸಿ ಇದೇ ಆಧಾರದ ಮೇಲೆ ಸಾವಿರಾರು ನಿವೇಶನಗಳನ್ನು ನಿಯಮಬಾಹಿರಿವಾಗಿ ಹಂಚುವ ಕುಕೃತ್ಯದ ಕಾರಣಕರ್ತರಾದ ಡಿಬಿ ನಟೇಶ್ ಅವರ ವಿರುದ್ಧ ಈವರೆಗೂ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ಆಶ್ಚರ್ಯ ರಾಜ್ಯದ ಜನತೆಯನ್ನು ಕಾಡುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಡಿಬಿ ನಟೇಶ್ ಮುಖ್ಯಮಂತ್ರಿಗಳ ಧರ್ಮಪತ್ನಿ ಅವರ ಹೆಸರಿನಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿಕೊಡುವ ವಿಷಯವನ್ನು ಪ್ರಾಧಿಕಾರದ ಸಭೆಗೂ ತಾರದೇ ಸರ್ಕಾರದ ಅನುಮೊದನೆಯನ್ನು ಪಡೆಯದೇ ಏಕಪಕ್ಷಿಯವಾಗಿ ಅಧಿಕೃತ ಜ್ಞಾಪನಾ ಪತ್ರವನ್ನು ಹೊರಡಿಸುತ್ತಾರೆ. ನಿಯಮ ಬಾಹಿರವಾಗಿ ಮಂಜೂರಾತಿ ಪತ್ರ ಹಾಗೂ ಕ್ರಯ ಪತ್ರವನ್ನು ಮಾಡಿಕೊಟ್ಟು ಅತ್ಯಂತ ಪ್ರತಿಷ್ಠಿತ (ವಿಜಯನಗರ) ಬಡಾವಣೆಯ 14 ನಿವೇಶನಗಳು ಧಾರೆ ಎರೆದು ಕೊಡುತ್ತಾರೆ. ಇಲ್ಲಿಂದ ಆರಂಭವಾಗುವ ಇವರ ಅಕ್ರಮ ನಿವೇಶನಗಳ ಲೂಟಿಕೊರತನ ಕಳೆದ ಜೂನ್ ತಿಂಗಳ ಕೊನೆಯವರೆಗೂ ಎಗ್ಗಿಲ್ಲದೇ ಸಾಗುತ್ತದೆ. ಸಾಮಾಜಿಕ ಕಾರ್ಯಕರ್ತರು ನಮ್ಮ ಪಕ್ಷ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ನಡೆಸಿದ ಪರಿಣಾಮವಾಗಿ ಮುಡಾ ಹಗರಣ ಬಗೆದಷ್ಟು ಈ ಕ್ಷಣಕ್ಕೂ ಹೊರಬರುತ್ತಲೇ ಇದೆ ಎಂದು ರಘು ಕೌಟಿಲ್ಯ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಿಲ್ಲಾಧಿಕಾರಿಗಳು ನೀಡುವ ನಿರ್ದೇಶನವನ್ನು ಮೂಲೆಗೆ ತಳ್ಳಿ ಮೈಸೂರಿನ ಮುಡಾದಲ್ಲಿ ವಸತಿ ರಹಿತ ಜನರಿಗೆ ಸಲ್ಲಬೇಕಾದ ಸಾವಿರಾರು ನಿವೇಶನಗಳನ್ನು ಮುಡಾದ ಅಧಿಕಾರಿಗಳು ಹಾಗೂ ನೆಲಬಾಕ ಮಾಫಿಯಾಗಳು ಈಗಾಗಲೇ ನುಂಗಿಹಾಕಿವೆ. ಇದು ಸರ್ಕಾರದ ಆಸ್ತಿ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ಪ್ರಶ್ನೆಯಾಗಿದ್ದು ಈಗಾಗಲೇ ಈ ನಿಟ್ಟಿನಲ್ಲಿ ಉದ್ದೇಶಪೂರ್ವಕ ವಿಳಂಬ ನೀತಿ ಅನುಸರಿಸಿ ನಗರಾಭಿವೃದ್ಧಿ ಇಲಾಖೆ ಹಾಗೂ ತಾವು ಈ ಹಗರಣ ಹುತ್ತದಂತೆ ಬೆಳೆದು ನಿಲ್ಲಲು ಕಾರಣರಾಗಿದ್ದೀರಿ. ಈ ಕೂಡಲೇ ಹಿಂದೆ ನಾವು ಒತ್ತಾಯಿಸಿದಂತೆ ಅಕ್ರಮ ವಿತರಣೆಯ ಶೇ 50:50ರ ಅನುಪಾತದಲ್ಲಿ ಕ್ರಯವಾಗಿರುವ ಹಾಗೂ ನಿಯಮಬಾಹಿರವಾಗಿ ಮಂಜೂರು ಮಾಡಿರುವ ಬದಲಿ ನಿವೇಶನಗಳನ್ನು ಈ ಕೂಡಲೇ ಅಧಿಸೂಚನೆ ಹೊರಡಿಸಿ ರದ್ದುಪಡಿಸಬೇಕು. ಅದರ ಜೊತೆಗೇ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿದಂತೆ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಹಾಗೂ ಈ ಇಬ್ಬರೊಂದಿಗೆ ಸೇವೆ ಸಲ್ಲಿಸಿ ಹಗರಣ ನಿರ್ಮಾಣದ ಕೂಟದಲ್ಲಿ ಕೈ ಜೋಡಿಸಿರುವ ಕಾರ್ಯದರ್ಶಿಗಳು, ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಹಶೀಲ್ದಾರರು ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತುಗೊಳಿಸಿ ಇವರೆಲ್ಲರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸುತ್ತೇವೆ. ಇನ್ನೂ ವಿಳಂಬ ನೀತಿ ಅನುಸರಿಸಿದರೆ ಮುಖ್ಯಮಂತ್ರಿಗಳಿಗೆ 14 ನಿವೇಶನಗಳನ್ನು ಬಳುವಳಿಯಾಗಿ ನೀಡಿದ ಅಧಿಕಾರಿಗಳನ್ನು ರಕ್ಷಿಸುತ್ತಿದ್ದೀರಿ ಎಂಬ ನಿರ್ಣಯಕ್ಕೆ ಬಂದು ನಾವು ಮುಂದಿನ ಕಾನೂನು ಹೋರಾಟ ನಡೆಸಬೇಕಾದಿತು ಎಂದು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಪತ್ರದಲ್ಲಿ ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ