ಮುಡಾ ಅಕ್ರಮ: ಸಿದ್ದರಾಮಯ್ಯ ಪತ್ನಿಗೆ ನೀಡಿದ್ದೆನ್ನಲಾದ ಜಮೀನಿನ ವಿವರ, ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ನೀಡುವ ವಿಚಾರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಆ ಜಮೀನಿನ ಸಂಪೂರ್ಣ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಆ ವಿವರ ಹಾಗೂ ಇಡೀ ಪ್ರಕರಣದ ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ.

ಮುಡಾ ಅಕ್ರಮ: ಸಿದ್ದರಾಮಯ್ಯ ಪತ್ನಿಗೆ ನೀಡಿದ್ದೆನ್ನಲಾದ ಜಮೀನಿನ ವಿವರ, ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ
ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on:Jul 06, 2024 | 11:02 AM

ಬೆಂಗಳೂರು, ಜುಲೈ 6: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಪ್ರತಿಪಕ್ಷ ಬಿಜೆಪಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುತ್ತಿದೆ. ಮತ್ತೊಂದೆಡೆ ಸಿದ್ದರಾಮಯ್ಯ ರಾಜೀನಾಮೆಗೂ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದವರೇ ಹಗರಣವನ್ನು ಬಯಲಿಗೆಳೆದಿದ್ದಾರೆ. ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಿಂದಲೇ ಈ ಕೃತ್ಯ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ, ಸಿಎಂ ಪತ್ನಿಗೆ ಹಂಚಿಕೆ ಮಾಡಲಾಗಿದೆ ಎಂಬ ನಿವೇಶನದ ಕುರಿತ ಸಂಪೂರ್ಣ ಮಾಹಿತಿ ‘ಟಿವಿ9’ಗೆ ದೊರೆತಿದೆ.

ಪ್ರಕರಣದ ಸಂಪೂರ್ಣ ಮಾಹಿತಿ ಮತ್ತು ಟೈಮ್ ಲೈನ್ ಇಲ್ಲಿದೆ.

  1. ಕೆಸರೆ ಸರ್ವೇ ನಂ 462ನಲ್ಲಿ 3.16 ಎಕರೆ ಜಮೀನು
  2. 1992ರಲ್ಲಿ ಮುಡಾದಿಂದ ಜಮೀನು ವಶದ ಪ್ರಕ್ರಿಯೆ ಆರಂಭ
  3. 1997 ರಲ್ಲಿ ಜಮೀನು ಸ್ವಾಧೀನಕ್ಕೆ ಪಡೆದು ವಶಪಡಿಸಿಕೊಂಡ ಮುಡಾ
  4. 1998ರಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟ ಮುಡಾ
  5. 2003ರಲ್ಲಿ ಮೂಲ ಖಾತೆದಾರನ ಹೆಸರಿಗೆ ಜಮೀನು
  6. 2004ರಲ್ಲಿ ಜಮೀನು ಖರೀದಿ‌ ಮಾಡಿದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ
  7. 2005ರಲ್ಲಿ ಕೃಷಿ ಭೂಮಿಯಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆ
  8. 2010ಕ್ಕೆ ಮಲ್ಲಿಕಾರ್ಜುನ ಸ್ವಾಮಿಯಿಂದ ಸಿದ್ದರಾಮಯ್ಯ ಪತ್ನಿಗೆ ದಾನದ ಮೂಲಕ ಜಮೀನು
  9. 2014ರಲ್ಲಿ ನಮ್ಮ ಜಮೀನು ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿಯಿಂದ ಮುಡಾಗೆ ದೂರು
  10. 2014ರಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ವಿಚಾರ ಮಂಡನೆ
  11. ‌2017ರಲ್ಲಿ ಈ ಸಂಬಂಧ ತನಿಖೆಗೆ ಆದೇಶ
  12. 2017ರಲ್ಲಿ 15 ದಿನದ ತನಿಖೆ ನಡೆಸಿ‌ ಪರಿಹಾರದ ಭೂಮಿ ನೀಡಲು‌ ನಿರ್ಧಾರ
  13. 2018ರಲ್ಲಿ ಈ‌ ಬಗ್ಗೆ ಪ್ರಕ್ರಿಯೆ ಆರಂಭ
  14. 2018ರಲ್ಲಿ ಪ್ರಕ್ರಿಯೆ ಪೂರ್ಣ
  15. 2020ರಲ್ಲಿ ವಿಜಯನಗರ ಮೂರನೇ ಹಂತದಲ್ಲಿ ಬದಲಿ‌ ನಿವೇಶನ ನೀಡಲು ತೀರ್ಮಾನ
  16. 2021ಕ್ಕೆ ಪಾರ್ವತಿ ಅವರಿಗೆ ಬದಲಿ‌ ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ

ಇದನ್ನೂ ಓದಿ: ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಅಷ್ಟು ಹಣವನ್ನು ಮುಡಾ ನಮಗೆ ಕೊಡಲಿ, ಸೈಟು ಬೇಡ: ಸಿದ್ದರಾಮಯ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Sat, 6 July 24

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ