AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಮುಡಾ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದಾರೆ. ಇದಕ್ಕೆ ಕಾರಣವೇನು? ಸಿದ್ದರಾಮಯ್ಯ ಅಂಜಿಕೊಳ್ಳಲು ಕಾರಣವಾದ ಕಾರಣವಾದ ಪಿಎಂಎಲ್​ಎ ಅಡಿಯಲ್ಲಿ ಬರುವ ಆ ಸೆಕ್ಷನ್ ಯಾವುದು? ಇಲ್ಲಿದೆ ವಿವರ.

ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ
ಸಿದ್ದರಾಮಯ್ಯImage Credit source: PTI
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on: Oct 02, 2024 | 11:02 AM

Share

ಬೆಂಗಳೂರು, ಅಕ್ಟೋಬರ್ 2: ಮುಡಾ ಹಗರಣ ಸಂಬಂಧ ತಮಗೆ ಯಾವುದೇ ಭಯವಿಲ್ಲ. ಕಾನೂನು ಹೋರಾಟಕ್ಕೆ ಸದಾ ಸಿದ್ಧ. ಅದನ್ನೇ ಮಾಡಲುತ್ತೇನೆಯೇ ವಿಹಃ ರಾಜೀನಾಮೆ ಕೊಡುವುದೇ ಇಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ಮುಡಾ ನಿವೇಶನಗಳನ್ನು ವಾಪಸ್ ಮಾಡುವುದಾಗಿ ಪತ್ರ ಬರೆದಿದ್ದಾರೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿದೆ. ಪ್ರತಿಪಕ್ಷಗಳ (ಬಿಜೆಪಿ, ಜೆಡಿಎಸ್) ದ್ವೇಷದ ರಾಜಕಾರಣ, ಕೇಂದ್ರ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರಗಳ ಮೇಲೆ ಬಿಜೆಪಿ ನಡೆಸುತ್ತಿರುವ ದಾಳಿಯಿಂದ ಮನನೊಂದು ಅವರು ಸೈಟ್ ವಾಪಸ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿದ್ದಾರೆ.

ಆದರೆ, ಸಿದ್ದರಾಮಯ್ಯ ಪತ್ನಿ ಸೈಟ್​ಗಳನ್ನು ವಾಪಸ್ ನೀಡಲು ಮನ ಮಾಡಲು ಜಾರಿ ನಿರ್ದೇಶನಾಲಯ 2003ರ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಿರುವುದೇ ಕಾರಣ ಎನ್ನಲಾಗಿದೆ.

ಸಿಎಂ ವಿರುದ್ಧ ಇಡಿ ದಾಖಲಿಸುರುವ ಇಸಿಐಆರ್​ನಲ್ಲಿ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್​ಗೆ ಇರುವ ಮಹತ್ವ ಹಾಗೂ ಅದರ ಪರಿಣಾಮಗಳನ್ನು ಅರಿತೇ ಸಿಎಂ ಪತ್ನಿ ಸೈಟ್​​ ವಾಪಸ್ ಕೊಡಲು ಮನ ಮಾಡಿದ್ದು ಎನ್ನಲಾಗುತ್ತಿದೆ.

ಪಿಎಂಎಲ್​ಎ ಕಾಯ್ದೆ ಸೆಕ್ಷನ್​ 15 ರ ಮಹತ್ವ ಏನು?

ಈ ಸೆಕ್ಷನ್ ಅಡಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಇದಕ್ಕೆ ಯಾವುದೇ ನ್ಯಾಯಾಲಯದ ಅದೇಶ ಪಡೆಯಬೇಕು ಎಂಬ ನಿಯಮ ಕೂಡ ಇಲ್ಲ. ಸಂಬಂಧಪಟ್ಟ ಆಸ್ತಿಗಾಗಿ ಮನಿಲಾಂಡ್ರಿಂಗ್ (ಹಣಕಾಸು ಅಕ್ರಮ ವರ್ಗಾವಣೆ) ನಡೆದಿದೆ ಎಂದು ತನಿಖಾಧಿಕಾರಿಗೆ ಅನಿಸಿದರೆ 180 ದಿನಗಳವರೆಗೂ ಆಸ್ತಿಯನ್ನ ಮುಟ್ಟಗೋಲು ಹಾಕಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಹೀಗಾಗಿ, ಒಂದು ವೇಳೆ ಸಿಎಂ ಪತ್ನಿ ಈ ಸೈಟ್​ಗಳನ್ನು ವಾಪಸ್ ಕೊಡದೇ ಇದ್ದಲ್ಲಿ ಜಾರಿ ನಿರ್ದೇಶನಾಲಯ ಯಾವುದೇ ಕ್ಷಣದಲ್ಲಿ ಮುಟ್ಟಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಸೈಟ್​ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡರೆ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಇದಕ್ಕಾಗಿಯೇ ಕೂಡಲೆ ಸೈಟ್​​​ಗಳನ್ನು ವಾಪಸ್ ಕೊಡುವ ನಿರ್ಧಾರ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ