AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಮುಡಾ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದಾರೆ. ಇದಕ್ಕೆ ಕಾರಣವೇನು? ಸಿದ್ದರಾಮಯ್ಯ ಅಂಜಿಕೊಳ್ಳಲು ಕಾರಣವಾದ ಕಾರಣವಾದ ಪಿಎಂಎಲ್​ಎ ಅಡಿಯಲ್ಲಿ ಬರುವ ಆ ಸೆಕ್ಷನ್ ಯಾವುದು? ಇಲ್ಲಿದೆ ವಿವರ.

ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ
ಸಿದ್ದರಾಮಯ್ಯImage Credit source: PTI
Follow us
Prajwal Kumar NY
| Updated By: Ganapathi Sharma

Updated on: Oct 02, 2024 | 11:02 AM

ಬೆಂಗಳೂರು, ಅಕ್ಟೋಬರ್ 2: ಮುಡಾ ಹಗರಣ ಸಂಬಂಧ ತಮಗೆ ಯಾವುದೇ ಭಯವಿಲ್ಲ. ಕಾನೂನು ಹೋರಾಟಕ್ಕೆ ಸದಾ ಸಿದ್ಧ. ಅದನ್ನೇ ಮಾಡಲುತ್ತೇನೆಯೇ ವಿಹಃ ರಾಜೀನಾಮೆ ಕೊಡುವುದೇ ಇಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ಮುಡಾ ನಿವೇಶನಗಳನ್ನು ವಾಪಸ್ ಮಾಡುವುದಾಗಿ ಪತ್ರ ಬರೆದಿದ್ದಾರೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿದೆ. ಪ್ರತಿಪಕ್ಷಗಳ (ಬಿಜೆಪಿ, ಜೆಡಿಎಸ್) ದ್ವೇಷದ ರಾಜಕಾರಣ, ಕೇಂದ್ರ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರಗಳ ಮೇಲೆ ಬಿಜೆಪಿ ನಡೆಸುತ್ತಿರುವ ದಾಳಿಯಿಂದ ಮನನೊಂದು ಅವರು ಸೈಟ್ ವಾಪಸ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿದ್ದಾರೆ.

ಆದರೆ, ಸಿದ್ದರಾಮಯ್ಯ ಪತ್ನಿ ಸೈಟ್​ಗಳನ್ನು ವಾಪಸ್ ನೀಡಲು ಮನ ಮಾಡಲು ಜಾರಿ ನಿರ್ದೇಶನಾಲಯ 2003ರ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಿರುವುದೇ ಕಾರಣ ಎನ್ನಲಾಗಿದೆ.

ಸಿಎಂ ವಿರುದ್ಧ ಇಡಿ ದಾಖಲಿಸುರುವ ಇಸಿಐಆರ್​ನಲ್ಲಿ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್​ಗೆ ಇರುವ ಮಹತ್ವ ಹಾಗೂ ಅದರ ಪರಿಣಾಮಗಳನ್ನು ಅರಿತೇ ಸಿಎಂ ಪತ್ನಿ ಸೈಟ್​​ ವಾಪಸ್ ಕೊಡಲು ಮನ ಮಾಡಿದ್ದು ಎನ್ನಲಾಗುತ್ತಿದೆ.

ಪಿಎಂಎಲ್​ಎ ಕಾಯ್ದೆ ಸೆಕ್ಷನ್​ 15 ರ ಮಹತ್ವ ಏನು?

ಈ ಸೆಕ್ಷನ್ ಅಡಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಇದಕ್ಕೆ ಯಾವುದೇ ನ್ಯಾಯಾಲಯದ ಅದೇಶ ಪಡೆಯಬೇಕು ಎಂಬ ನಿಯಮ ಕೂಡ ಇಲ್ಲ. ಸಂಬಂಧಪಟ್ಟ ಆಸ್ತಿಗಾಗಿ ಮನಿಲಾಂಡ್ರಿಂಗ್ (ಹಣಕಾಸು ಅಕ್ರಮ ವರ್ಗಾವಣೆ) ನಡೆದಿದೆ ಎಂದು ತನಿಖಾಧಿಕಾರಿಗೆ ಅನಿಸಿದರೆ 180 ದಿನಗಳವರೆಗೂ ಆಸ್ತಿಯನ್ನ ಮುಟ್ಟಗೋಲು ಹಾಕಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಹೀಗಾಗಿ, ಒಂದು ವೇಳೆ ಸಿಎಂ ಪತ್ನಿ ಈ ಸೈಟ್​ಗಳನ್ನು ವಾಪಸ್ ಕೊಡದೇ ಇದ್ದಲ್ಲಿ ಜಾರಿ ನಿರ್ದೇಶನಾಲಯ ಯಾವುದೇ ಕ್ಷಣದಲ್ಲಿ ಮುಟ್ಟಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಸೈಟ್​ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡರೆ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಇದಕ್ಕಾಗಿಯೇ ಕೂಡಲೆ ಸೈಟ್​​​ಗಳನ್ನು ವಾಪಸ್ ಕೊಡುವ ನಿರ್ಧಾರ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?