AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?

ಮುಡಾ ಹಗರಣ ತೀವ್ರ ಸ್ವರೂಪ ಪಡೆದುಕೊಂಡ ಸಂದರ್ಭದಲ್ಲೇ ಮುಡಾ ಸೈಟ್​​ ಹಂಚಿಕೆಗೆ ಸಂಬಂಧಿಸಿದ್ದು ಎನ್ನಲಾದ ದಾಖಲೆಯೊಂದಕ್ಕೆ ವೈಟ್ನರ್ ಹಾಕಿ ಅಳಿಸಿರುವುದು ಬೆಳಕಿಗೆ ಬಂದಿತ್ತು. ನಂತರ ಆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟನೆ ನೀಡಿದ್ದರು. ಆದರೆ, ಇದೀಗ ಆ ದಾಖಲೆಯೇ ಅವರಿಗೆ ಮುಳುವಾಗಲಿದೆಯೇ ಎಂಬ ಅನುಮಾನ ಮೂಡಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?
ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?
ರಾಮ್​, ಮೈಸೂರು
| Edited By: |

Updated on: Oct 19, 2024 | 11:28 AM

Share

ಮೈಸೂರು, ಅಕ್ಟೋಬರ್ 19: ಮುಡಾ ಹಗರಣ ಸಂಬಂಧ ಮೈಸೂರಿನ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವಾದ ಶನಿವಾರವೂ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮುಡಾ ಸಂಬಂಧ ದಾಖಲೆಯೊಂದಕ್ಕೆ ವೈಟ್ನರ್ ಹಾಕಿರುವುದು ಬೆಳಕಿಗೆ ಬಂದಿತ್ತು. ಇದೀಗ ಇಡಿ ಅಧಿಕಾರಿಗಳ ಗಮನ ಅತ್ತ ಸೆಳೆದಿದೆ. ಪರಿಣಾಮವಾಗಿ ವೈಟ್ನರ್ ವಿಚಾರ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆಯೇ ಎಂಬ ಅನುಮಾನ ಹೆಚ್ಚಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮುಡಾ ಕಚೇರಿಗೆ ಆಗಮಿಸಿದ ಇಡಿ ಅಧಿಕಾರಿಗಳ ಜತೆ ಎಫ್ಎಸ್‌ಎಲ್ ಅಧಿಕಾರಿ ಕೂಡ ಆಗಮಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾವರ್ತಿ ಮುಡಾಗೆ ನೀಡಿದ್ದ ಮನವಿ ಪತ್ರದಲ್ಲಿದ್ದ ವೈಟ್ನರ್ ವಿಚಾರವಾಗಿ ಅವರು ಪರಿಶೀಲನೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಮನವಿ ಪತ್ರದ ಎರಡನೇ ಪುಟದಲ್ಲಿದ್ದ ಖಾಲಿ ಜಾಗಕ್ಕೆ ವೈಟ್ನರ್ ಹಾಕಲಾಗಿತ್ತು. ಆ ಬಗ್ಗೆ ಚರ್ಚೆ ಆದಾಗ ಬಿಡುಗಡೆ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ಟಾರ್ಚ್ ಬಿಟ್ಟು ವೈಟ್ನರ್ ಹಿಂದೆ ಏನಿತ್ತು ಎಂಬುದನ್ನು ತೋರಿಸಲು ಯತ್ನಿಸಿದ್ದರು. ಈಗ ಅದೇ ದಾಖಲೆಯ ಅಸಲಿಯತ್ತು ಪತ್ತೆಗೆ ಇಡಿ ಮುಂದಾಗಿದೆ.

ವೈಟ್ನರ್ ಹಾಕಿದ್ದ ದಾಖಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಸಿಎಂ ಬಿಡುಗಡೆ ಮಾಡಿದ್ದ ದಾಖಲೆ, ಆರ್​​ಟಿಐ ಅಡಿ ಮುಡಾ ನೀಡಿದ್ದ ದಾಖಲೆ ಬೇರೆ ಬೇರೆಯಾಗಿರುವುದು ನಂತರ ಬೆಳಕಿಗೆ ಬಂದಿತ್ತು. 2 ದಾಖಲೆಗಳಲ್ಲಿ ಸಿಎಂ ಪತ್ನಿಯ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಷ್ಟೇ ಅಲ್ಲದೆ 2 ದಾಖಲೆಗಳಲ್ಲಿ ಹಲವು ವ್ಯತ್ಯಾಸಗಳು ಕಂಡು ಬಂದಿದ್ದವು. ಈ ಬಗ್ಗೆ ಮುಡಾ ಅಧಿಕಾರಿಗಳಿಗೆ ಹಲವು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಈಗಾಗಲೇ ಕೇಳಿದ್ದಾರೆ.

ಏನಿದು ವೈಟ್ನರ್ ಪ್ರಕರಣ?

ಸಿಎಂ ಸಿದ್ದರಾಮಯ್ಯ ಪತ್ನಿ ತಮ್ಮ ಭೂಮಿಗೆ 50:50 ಅನುಪಾತದಲ್ಲಿ ಪರ್ಯಾಯ ನಿವೇಶನ ಕೊಡುವಂತೆ ಮನವಿ ಮಾಡಿ ಮುಡಾಗೆ ಸಲ್ಲಿಸಿರುವ ಪತ್ರಕ್ಕೆ ವೈಟ್ನರ್ ಹಾಕಿರುವುದು ಕೆಲವು ಸಮಯ ಹಿಂದೆ ಬೆಳಕಿಗೆ ಬಂದಿತ್ತು. ಇದರಿಂದಾಗಿ, ಹಗರಣದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ಅಧಿಕಾರಿಗಳು ದಾಖಲೆಯನ್ನು ತಿರುಚಿದ್ದಾರೆಯೇ ಎಂಬ ಅನುಮಾನ ಮೂಡಿತ್ತು. ವಿಜಯನಗರದ 2 ಮತ್ತು ಮೂರನೇ ಹಂತದಲ್ಲೇ ನಿವೇಶನ ಕೊಡುವಂತೆ ಸಿದ್ದರಾಮಯ್ಯ ಪತ್ನಿ ಕೇಳಿದ್ದರೇ ಎಂಬ ಪ್ರಶ್ನೆಯೂ ಈಗ ಉದ್ಭವಿಸಿದೆ. ವೈಟ್ನರ್ ಹಾಕಿ ಅಳಿಸಿರುವುದರಿಂದ ಈ ಪ್ರಶ್ನೆ ಮೂಡಿತ್ತು.

ನಂತರ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಇದನ್ನೇ ಮುಂದಿಟ್ಟುಕೊಂಡು ಸಿಎಂ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದವು. ನಂತರ ನಕಲಿ ಸಹಿ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿತ್ತು.

ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಬದಲಿ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಿದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಲಾಗಿತ್ತು ಎಂದಿದ್ದರು.

ಇದನ್ನೂ ಓದಿ: ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

ಇದೀಗ ವೈಟ್ನರ್ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಆ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ. ಇದಕ್ಕಾಗಿ ವಿಧಿವಿಜ್ಞಾನ ಪ್ರಯೋಗಾಯಲಯ ಅಧಿಕಾರಿಯ ನೆರವನ್ನೂ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!