ಮುಡಾ ಹಗರಣ: ಸಿದ್ದರಾಮಯ್ಯ ಪರಮಾಪ್ತನ ಮನೆ ಮೇಲೂ ಇಡಿ ದಾಳಿ, ಮುಂದಿನ ಟಾರ್ಗೆಟ್ ಯಾರು?

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆಗೆ ಚುರುಕುಗೊಳಿಸಿದ್ದಾರೆ. ಮುಡಾ ಮಾಜಿ ಅಯುಕ್ತರ ಮನೆಗಳ ಮೇಲೆ ಇಡಿ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತನ ಮನೆ ಮೇಲೆ ದಾಳಿ ಮಾಡಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಪರಮಾಪ್ತನ ಮನೆ ಮೇಲೂ ಇಡಿ ದಾಳಿ, ಮುಂದಿನ ಟಾರ್ಗೆಟ್ ಯಾರು?
ರಾಕೇಶ್ ಪಾಪಣ್ಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 28, 2024 | 6:27 PM

ಮೈಸೂರು/ಬೆಂಗಳೂರು, (ಅಕ್ಟೋಬರ್ 28): ಮುಡಾ ಹಗರಣ ಪ್ರಕರಣಕ್ಕೆ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತರ ಮನೆಗಳ ಮೇಲೆ ದಾಳಿ ನಡೆಸಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ಸಹ ದಾಳಿಯಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ  ರಾಕೇಶ್ ಪಾಪಣ್ಣ ಅವರ ಮೈಸೂರಿನ ಹಿನ್‌ಕಲ್ ಗ್ರಾಮದಲ್ಲಿನ ಮನೆ ಮೇಲೆ ಇಡಿ ದಾಳಿ ಮಾಡಿದೆ. 50-50 ನಿಯಮದಲ್ಲಿ 20ಕ್ಕೂ ಹೆಚ್ಚು ಮುಡಾ ಸೈಟ್​ ಪಡೆದಿದ್ದ ಆರೋಪ ರಾಕೇಶ್ ಪಾಪಣ್ಣ ಅವರ ವಿರುದ್ಧ ಕೇಳಿಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ರಾಕೇಶ್ ಪಾಪಣ್ಣ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಮುಡಾ 50-50 ಹಗರಣದಲ್ಲಿ ಕೇಳಿ ಬಂದಿದ್ದ ರಾಕೇಶ್ ಪಾಪಣ್ಣ ಹೆಸರು ಕೇಳಿಬಂದಿತ್ತು. 50-50 ನಿಯಮದಲ್ಲಿ 20ಕ್ಕೂ ಹೆಚ್ಚು ನಿವೇಶನಗಳನ್ನು ಪಡೆದಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಅಲ್ಲದೇ ವಿಜಯನಗರ ಎರಡನೇ ಹಂತದಲ್ಲಿ ಸಿದ್ದರಾಮಯ್ಯ ಪಡೆದ ನಿವೇಶದ ವಿಚಾರದಲ್ಲೂ ಪಾಪಣ್ಣ ಕುಟುಂಬದ ಹೆಸರು ಕೇಳಿ ಬಂದಿತ್ತು. ಸಿದ್ದರಾಮಯ್ಯ ಅವರು ಪಾಪಣ್ಣ ಕುಟುಂಬದಿಂದ 10 ಗುಂಟೆ ಜಾಗ ಪಡೆದು ಮನೆ ಕಟ್ಟಿದ್ದರು. ಈ ವಿಚಾರದಲ್ಲಿ ಅಕ್ರಮ ಆರೋಪ ಕೇಳಿ ಬಂದಿತ್ತು. ನಂತರ ಸಿದ್ದರಾಮಯ್ಯನವರು ಆ ಮನೆ ಮಾರಾಟ ಮಾಡಿದ್ದು, ಸದ್ಯ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದೆ.

ಇದನ್ನೂ ಓದಿ: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯಗೆ ಆತಂಕ

ಈ ಎಲ್ಲಾ ಆರೋಪಗಳು ಕೇಳಿಬಂದಿದ್ದರಿಂದ ಇಂದು (ಅಕ್ಟೋಬರ್ 28) ಇಡಿ ಅಧಿಕಾರಿಗಳು ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಬಗ್ಗೆ ರಾಕೇಶ್ ಪಾಪಣ್ಣ ಅವರ ಬಳಿಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

ಮುಡಾ ಮಾಜಿ ಆಯುಕ್ತರುಗಳ ಮನೆ ಮೇಲೆ ದಾಳಿ

ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ಇಡಿ ಅಧಿಕಾರಿಗಗಳು ದಾಳಿ ಮಾಡುವ ಮುನ್ನ ಮುಡಾದ ಮಾಜಿ ಆಯುಕ್ತರುಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.  ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ದಾಳಿ ಮಾಡಿದೆ. ಬಳಿಕ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇದೀಗ ಮತ್ತೋರ್ವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಮನೆ ಮೇಲೂ ದಾಳಿಯಾಗಿದೆ.

ಜಿ.ಟಿ.ದಿನೇಶ್ ಕುಮಾರ್ ಅವರ ಹೆಬ್ಬಾಳದ ಬಾಣಸವಾಡಿ ರಸ್ತೆಯಲ್ಲಿರುವ ದೀಪಿಕಾ ರಾಯಲ್ ಅಪಾರ್ಟ್​ಮೆಂಟ್​ ಮೇಲೆ ದಾಳಿ ಮಾಡಲಾಗಿದೆ. ಬೆಳಗ್ಗೆ ದಾಳಿ ಮಾಡಿದಾಗ ದಿನೇಶ್ ಕುಮಾರ್ ಎಸ್ಕೇಪ್ ಆಗಿದ್ದರು. ಬೆಳಗ್ಗೆ ವಾಕಿಂಗ್ ಹೋಗಿದ್ದಾಗ ದಾಳಿ ಮಾಡಿದ್ದರು. ಆದ್ರೆ, ಇಡಿ ದಾಳಿಯ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಹಾಗೇ ದಿನೇಶ್​​ ಗಯಾಬ್ ಆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ