AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ಕೇಸಿನಲ್ಲಿ ಮಹತ್ವದ ಬೆಳವಣಿಗೆ: 440 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಮುಡಾ ಹಗರಣದಲ್ಲಿ 440 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. 252 ಅಕ್ರಮ ನಿವೇಶನಗಳು ಹಾಗೂ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಹೆಸರಿನಲ್ಲಿರುವ 32 ನಿವೇಶನಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ.

ಮುಡಾ ಹಗರಣ ಕೇಸಿನಲ್ಲಿ ಮಹತ್ವದ ಬೆಳವಣಿಗೆ: 440 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು
ಮುಡಾ ಹಗರಣ
ಗಂಗಾಧರ​ ಬ. ಸಾಬೋಜಿ
|

Updated on:Oct 06, 2025 | 3:16 PM

Share

ಬೆಂಗಳೂರು, ಅಕ್ಟೋಬರ್​​​ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮುಡಾ (muda scam case) ಇದರಲ್ಲಿನ  ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿತ್ತು. ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಕ್ರಮವಾಗಿ ನೀಡಿದ್ದ 440 ಕೋಟಿ ರೂ ಮೌಲ್ಯದ 252 ನಿವೇಶನಗಳನ್ನು ಜಾರಿ ನಿರ್ದೇಶನಾಲಯ (E.D) ಮುಟ್ಟುಗೋಲು ಹಾಕಿಕೊಂಡಿದೆ.

40.8 ಕೋಟಿ ರೂ. ಮೌಲ್ಯದ 32 ಸೈಟ್​ಗಳು​​​ ವಶಕ್ಕೆ

ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಇ.ಡಿ ಅಧಿಕಾರಿಗಳು, 252 ಸೈಟ್​ಗಳನ್ನು ಅಧಿಕಾರಿಗಳು ಅಕ್ರಮವಾಗಿ ಅಲಾಟ್ ಮಾಡಿದ್ದು ಪತ್ತೆ ಆಗಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿಯ 40.8 ಕೋಟಿ ರೂ. ಮೌಲ್ಯದ 32 ಸೈಟ್​​ಗಳನ್ನು​ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ ದಿನೇಶ್ ಕುಮಾರ್​ ಆಸ್ತಿ ಮಾಡಿದ್ದರು.

ಇದನ್ನೂ ಓದಿ: ಮುಡಾ ಹಗರಣದ ಮತ್ತಷ್ಟು ಕರ್ಮಕಾಂಡ ಬಯಲು: ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ಇಡಿ ತನಿಖೆಯಲ್ಲಿ ಪತ್ತೆ

ಇತ್ತೀಚೆಗೆ ಇ.ಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್​​ ನನ್ನು ಬಂಧಿಸಿದ್ದರು. ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಆ ಮೂಲಕ ಸೈಟ್​​ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿಕೊಂಡಿದ್ದರು. ಇದಕ್ಕೆ ಸಾಕ್ಷ್ಯ ಎಂಬಂತೆ ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿತ್ತು.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?

ಇನ್ನು 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು.

92 ಸೈಟ್‌ಗಳು ಜಪ್ತಿ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳ ಹಿಂದೆ ಇ.ಡಿ ಅಧಿಕಾರಿಗಳು 100 ಕೋಟಿ ರೂ. ಮೌಲ್ಯದ 92 ಸೈಟ್‌ಗಳನ್ನು ಜಪ್ತಿ ಮಾಡಿದ್ದರು. ಪಿಎಂಎಲ್ಎ- ಅಂದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿತ್ತು. ಇದರೊಂದಿಗೆ ಒಟ್ಟು 400 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಂತೆ ಆಗಿತ್ತು.

ವರದಿ: ವಿಕಾಸ್​ ಟಿವಿ9 ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Mon, 6 October 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ