AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಶ್ರೀರಾಮನ ಭಜನೆ ಮಾಡುತ್ತ ಅಹೋರಾತ್ರಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು

ಕಳೆದ ವಾರ ವಾಲ್ಮೀಕಿ ನಿಗಮ ಹಗರಣ ಬಾಣ ಬಿಟ್ಟಿದ್ದ ಬಿಜೆಪಿ, ಇಂದು (ಜುಲೈ 24) ಮುಡಾ ಸೈಟು ಹಂಚಿಕೆ ಹಗರಣದ ಭರ್ಜಿಯನ್ನ ಸರ್ಕಾರದ ಮೇಲೆ ಎಸೆದಿದೆ. ಮುಡಾ ಚರ್ಚೆಗೆ ಅವಕಾಶ ಕೋರಿ ಬಿಜೆಪಿ ನಿಲುವಳಿ ಸೂಚನೆ ಮಂಡಿಸಿತ್ತು. ಆದ್ರೆ, ಚರ್ಚೆಗೆ ಅವಕಾಶ ಕೊಡಬೇಕೋ ಬೇಡ್ವೋ ಅನ್ನೋ ವಿಚಾರವಾಗಿ ದೊಡ್ಡ ಕದನವೇ ನಡೆದು ಹೋಯ್ತು. ಅಂತಿಮವಾಗಿ ಇದು ಹಳೆಯ ವಿಚಾರ, ತನಿಖಾ ಆಯೋಗ ರಚನೆಯಾಗಿದೆ ಅಂತೇಳಿ, ನಿಲುವಳಿಯನ್ನ ಸ್ಪೀಕರ್ ಖಾದರ್ ತಿರಸ್ಕರಿಸಿದ್ದು, ಇದೀಗ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಶ್ರೀರಾಮನ ಭಜನೆ ಮಾಡುತ್ತ ಅಹೋರಾತ್ರಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು
ವಿಧಾನಸಭೆಯಲ್ಲಿ ಬಿಜೆಪಿ ಧರಣಿ
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Jul 24, 2024 | 7:59 PM

ಬೆಂಗಳೂರು, (ಜುಲೈ 24): ಸದನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣೆ ನಡೆಸಿದ್ದಾರೆ. ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರು ಜಂಟಿಯಾಗಿ ಅಹೋರಾತ್ರಿ ಧರಣಿ ಕುಳಿತ್ತಿದ್ದು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗುತ್ತಾ ರಾಮನ ಭಜನೆ ಮಾಡಿದರು. ಇನ್ನು ಕಡತ ಪರಿಶೀಲನೆ ಮಾಡುತ್ತ ಸದನದೊಳಗೆ ಕುಳಿತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್​ ಬಳಿ ಹೋಗಿ ನಿಮಗೆ ಬಹಳ ಖುಷಿ ಆಗುತ್ತಿದೆ ಅಲ್ವಾ? ಮುಖ ಶೈನಿಂಗ್ ನೋಡಿ, ಪಾರ್ಟಿ ಕೊಡಿಸಿ, ಹುಷಾರು ನಿಮಗೆ ಫೈಟ್ ಕೊಡಲು ಮತ್ತೊಬ್ಬರು ಬಂದು ಬಿಟ್ಟಾರು ಎಂದ ಬಿಜೆಪಿ ಶಾಸಕರು ಕಾಲೆಳೆದರು.

ಅಲ್ಲದೇ ಡಿಕೆ ಶಿವಕುಮಾರ್ ಅವರನ್ನು ನೋಡಿ ವಿಪಕ್ಷ ನಾಯಕ ಆರ್ ಅಶೋಕ್ ಅವರು, ನಿಮಗೆ ಬಹಳ ಖುಷಿ ಆಗುತ್ತಿದೆ ಅಲ್ವಾ? ಮುಖ ಶೈನಿಂಗ್ ನೋಡಿ, ಪಾರ್ಟಿ ಕೊಡಿಸಿ. ಹುಷಾರು ನಿಮಗೆ ಫೈಟ್ ಕೊಡಲು ಮತ್ತೊಬ್ಬರು ಬಂದಾರು ಎಂದು ಲೇವಡಿ ಮಾಡಿದರು. ಬಿಜೆಪಿ ಶಾಸಕರ ಈ ಮಾತು ಕೇಳಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಮುಸಿ ಮುಸಿ ನಕ್ಕರು. ಬಳಿಕ ಡಿಕೆ ಶಿವಕುಮಾರ್ ಅವರು ಸದನದಿಂದ ಹೊರ ಹೋಗಿದ್ದು, ಇತ್ತ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗುತ್ತಾ ಶ್ರೀರಾಮನ ಭಜನೆ ಮಾಡಲಾರಂಭಿಸಿದರು.

ಸರ್ಕಾರದ ಊಟ, ಹಾಸಿಗೆ ನಿರಾಕರಿಸಿದ ವಿಪಕ್ಷಗಳು

ಇನ್ನು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ ಕುಳಿತಿರುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಾನಸಭೆಯಲ್ಲಿ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಭೇಟಿ ನೀಡಿ ಶಾಸಕರಿಗೆ ರಾತ್ರಿ ಊಟದ ವ್ಯವಸ್ಥೆ ಬಗ್ಗೆ ವಿಚಾರಿಸಿದರು. ಆದ್ರೆ, ಸರ್ಕಾರದ ಊಟವನ್ನು ನಿರಾಕರಿಸಿದ್ದು, ಹಗರಣದ ಹಣದಿಂದ ನಮಗೆ ಊಟದ ವ್ಯವಸ್ಥೆ ಬೇಡ. ರಾತ್ರಿಯ ಊಟ, ಹಾಸಿಗೆ ವ್ಯವಸ್ಥೆ ತಾವೇ ಮಾಡಿಕೊಂಡಿಕೊಳ್ಳುವುದಾಗಿ ಹೇಳಿದರು. ಬಳಿಕ ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರಿಗೆ ಸದಸ್ಯರಿಗೆ ಊಟ ಹಾಗೂ ಹಾಸಿಗೆ ವ್ಯವಸ್ಥೆ ಮಾಡುವ ಹೊಣೆ ನೀಡಿದರು.

ಈ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಮೂಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಕೇಳಿದಿದ್ವಿ. ಆದ್ರೆ, ಸ್ಪೀಕರ್ ಚರ್ಚೆಗೆ ಅವಕಾಶ ಕೊಟ್ಟಿಲ್ಲ. ಅದ್ದರಿಂದಾಗಿ ಸರ್ಕಾರದ ವಿರುದ್ದವಾಗಿ ಅಹೊರಾತ್ರಿ ಪ್ರತಿಭಟನೆ ಮಾಡುತ್ತಿದ್ದೇವೆ. ಸ್ಪೀಕರ್ ಬಂದು ಊಟ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ರು. ದಲಿತರ ನಿಗಮದಲ್ಲಿ ಲೂಟಿ ಹೊಡೆದ ಹಣದಿಂದ ನಮಗೆ ಯಾವುದು ಬೇಡ ಎಂದು ತಿರಸ್ಕರಿಸಿದ್ದೇವೆ. ಲೂಟಿ ಹೊಡೆದಿರುವ ಹಣದಿಂದ ನಮಗೆ ಯಾವುದೆ ಸೌಲಭ್ಯ ಬೇಡ. ಅವರ ಹಣಕ್ಕಾಗಿ ನಾವು ಹೋರಾಟ ಮಾಡ್ತಿದ್ದೇವೆ ಎಂದು ಹೇಳಿದರು.

ಗೃಹ ಸಚಿವರ ಜೊತೆ ಶಾಸಕರ ಚರ್ಚೆ

ಇನ್ನು ವಿಧಾನಸೌಧದ ಪೂರ್ವ ದ್ವಾರದ ಬಳಿ ಗೃಹ ಸಚಿವ ಪರಮೇಶ್ವರ್ ಜೊತೆ ಕೆಲ ಬಿಜೆಪಿ ಶಾಸಕರು ಅನೌಪಚಾರಿಕ ಚರ್ಚೆ ನಡೆಸಿರುವುದು ಕಂಡುಬಂತು. ಬಿಜೆಪಿ ಶಾಸಕರಾದ ಅಶ್ವತ್ಥ ನಾರಾಯಣ, ಮುನಿರತ್ನ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಚರ್ಚೆಯಲ್ಲಿದ್ದರು. ಈ ವೇಳೆ ಬಿಜೆಪಿ ಶಾಸಕ ಮುನಿರತ್ನ ಅವರು ಚಾಪೆಯೋ ಅಥವಾ ಬೆಡ್ಡೋ ವ್ಯವಸ್ಥೆ ಮಾಡಿ ಸಾಹೇಬ್ರೆ ಎಂದು ಗೃಹ ಸಚಿವ ಪರಮೇಶ್ವರ್​ಗೆ ಕಿಚಾಯಿಸಿದರು.

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?