AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

ಸಿಎಂ ಸಿದ್ದರಾಮಯ್ಯರ ಬುಡಕ್ಕೆ ಸುತ್ತಿಕೊಂಡಿರುವ ಮುಡಾ ಹಗರಣದ ತನಿಖೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮುಡಾ ಮಾಜಿ ಆಯುಕ್ತರು ಮತ್ತು ಮುಖ್ಯಮಂತ್ರಿ ಆಪ್ತರಿಗೆ ಇಡಿ ಶಾಕ್ ಕೊಟ್ಟಿದೆ. ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!
ಜಾರಿ ನಿರ್ದೇಶನಾಲಯ & ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್
ಗಣಪತಿ ಶರ್ಮಾ
|

Updated on: Oct 29, 2024 | 8:02 AM

Share

ಬೆಂಗಳೂರು, ಅಕ್ಟೋಬರ್ 29: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಒಂದು ಕಡೆ ಇಡಿ ಕಚೇರಿಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಮತ್ತೊಂದು ಕಡೆ ಬೆಂಗಳೂರಿನಲ್ಲಿ ವಾಸವಿರುವ ಮುಡಾದ ಮಾಜಿ ಆಯುಕ್ತರು, ಬಿಲ್ಡರ್ ಒಬ್ಬರ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಅಷ್ಟಲ್ಲದೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತನ ಮೇಲೂ ದಾಳಿ ನಡೆಸಿದ್ದು, ಸೋಮವಾರ ತಡರಾತ್ರಿ ವರೆಗೂ ಪರಿಶೀಲನೆ ನಡೆಸಲಾಗಿದೆ.

ಈ ಮಧ್ಯೆ, ಮುಡಾ ಮಾಜಿ ಆಯುಕ್ತರಾದ ನಟೇಶ್ ಮತ್ತು ದಿನೇಶ್ ಕುಮಾರ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇಡಿ ದಾಳಿ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ವಾಕಿಂಗ್​ ಮಾಡುತ್ತಿದ್ದಲ್ಲಿಂದಲೇ ಪರಾರಿ!

ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ, ಬೆಂಗಳೂರಿನ ಬಾಣಸವಾಡಿಯಲ್ಲಿರುವ ದೀಪಿಕಾ ರಾಯಲ್ ಅಪಾರ್ಟ್​​ಮೆಂಟ್ ಮೇಲೂ ಇಡಿ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ದಿನೇಶ್ ಕುಮಾರ್ ವಾಕಿಂಗ್ ತೆರಳಿದ್ದರು. ವಾಕಿಂಗ್ ಮಾಡುತ್ತಿದ್ದಾಗಲೇ ಅವರಿಗೆ ಇಡಿ ದಾಳಿಯ ಸುದ್ದಿ ಗೊತ್ತಾಗಿದೆ. ತಕ್ಷಣವೇ ಅವರು ಅಲ್ಲಿಂದಲೇ ರನ್ನಿಂಗ್ ಶುರು ಮಾಡಿದ್ದಾರೆ! ಅಂದರೆ, ಅಲ್ಲಿಂದಲೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಸದ್ಯ ಅವರು ನಾಪತ್ತೆಯಾಗಿದ್ದಾರೆ.

ಮಲ್ಲೇಶ್ವರಂನಲ್ಲಿರುವ ನಟೇಶ್ ನಿವಾಸದ ಮೇಲೂ ಸೋಮವಾರ ಇಡಿ ದಾಳಿ ನಡೆಸಿದೆ. ಅವರೂ ಸಹ ನಾಪತ್ತೆಯಾಗಿದ್ದಾರೆ. ಇಡಿ ವಿಚಾರಣೆಗೂ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ಮೇಲೆ ದಾಳಿ ಮಾಡಿ ದಾಖಲೆಗಳನ್ನು ಜಾಲಾಡಿರುವ ಇಡಿ, ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯಲ್ಲೂ ನಟೇಶ್ ಮನೆಗೆ ಬೆಳಗ್ಗೆ 8ಗಂಟೆಗೆ ಎಂಟ್ರಿಯಾಗಿ, ರಾತ್ರಿ10 ಗಂಟೆಯವರೆಗೂ ದಾಖಲೆಗಳನ್ನು ಜಾಲಾಡಿದೆ. ನಟೇಶ್ ಮನೆಯಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 4 ಬ್ಯಾಗ್ ಕೊಂಡೊಯ್ದಿದ್ದಾರೆ.

ಇದನ್ನೂ ಓದಿ: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯಗೆ ಆತಂಕ

ಅತ್ತ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರ ಆಪ್ತ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣಗೂ ಇಡಿ ಶಾಕ್ ಕೊಟ್ಟಿದೆ. ಇಡಿಯ ಐದು ಅಧಿಕಾರಿಗಳ ತಂಡ ಮೈಸೂರಿನ ರಾಕೇಶ್ ನಿವಾಸದ ಮೇಲೆ ಸೋಮವಾರ ಬೆಳಗ್ಗೆ 8 ಗಂಟೆಗೆ ದಾಳಿ ಮಾಡಿತು. ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆದಿತ್ತು. ರಾಕೇಶ್ ಪಾಪಣ್ಣ ಅವರು ಮೈಸೂರಿನಲ್ಲಿ ಮುಡಾ ವ್ಯಾಪ್ತಿಯಲ್ಲಿ 50:50 ನಿಯಮದಲ್ಲಿ ನಿವೇಶನ ಪಡೆದಿದ್ದರು. ಇದರಲ್ಲಿ ಅಕ್ರಮದ ವಾಸನೆ ಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಲ ಹೊತ್ತು ಪಾಪಣ್ಣರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ