AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ತನಿಖೆ ಆಗಬೇಕು. ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು. ಅರೆಸ್ಟ್ ಕೂಡ ಮಾಡಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ
ಸಿದ್ದರಾಮಯ್ಯನವರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ
ಗಂಗಾಧರ​ ಬ. ಸಾಬೋಜಿ
|

Updated on:Sep 25, 2024 | 3:44 PM

Share

ಬೆಂಗಳೂರು, ಸೆಪ್ಟೆಂಬರ್​ 25: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಸಿದ್ದರಾಮಯ್ಯ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ ನಡೆ ಬಗ್ಗೆ ಕಾನೂನು ಪರಿಣಿತರ ಸಲಹೆ ಪಡೆಯುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್​ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್​ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂಗೆ ಮಹತ್ವದ ಸಲಹೆ ನೀಡಿದ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ

ಹೈಕೋರ್ಟ್​ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ ಬಂದಲ್ಲಿ ಅವರ ಮೇಲೆ ಎಫ್​ಐಆರ್​ ಆದರೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಸಿಎಂ ರಾಜೀನಾಮೆ ಕೊಡಬೇಕಿದೆ. ತನಿಖಾಧಿಕಾರಿ ಯಾವ ರೀತಿ ಇರುತ್ತೆ ಅಂತ ನೋಡಬೇಕು ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಮಾಡುವ ಅವಮಾನ: ಸ್ನೇಹಮಹಿ ಕೃಷ್ಣ

ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು, ನ್ಯಾಯಾಲಯ ತಮ್ಮ ವ್ಯಾಪ್ತಿ ಪ್ರಕಾರ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಎಫ್​ಐಆರ್​ ದಾಖಲಾದ ನಂತರ ಸಿಬಿಐಗೆ ನೀಡುವಂತೆ ಹೈಕೋರ್ಟಿನಲ್ಲಿ ಅರ್ಜಿ ಹಾಕುವುದಕ್ಕೆ ನಿರ್ಧರಿಸಿದ್ದೇವೆ. ಅಪರಾಧ ಕೃತ್ಯಗಳಲ್ಲಿ ಆರೋಪಿ ನೇರ ಪಾತ್ರ ವಹಿಸಿರಬೇಕು ಅಂತೇನಿಲ್ಲ. ಪರೋಕ್ಷವಾಗಿ ಭಾಗಿಯಾದ್ದರೂ ಅಪರಾಧ ಕೃತ್ಯ ಆಗುತ್ತೆ. ಸಿದ್ದರಾಮಯ್ಯ ಪರೋಕ್ಷವಾಗಿ ಭಾಗಿಯಾಗಿರೋದಕ್ಕೆ ಸಾಕಷ್ಟು ಸಾಕ್ಷ್ಯ ಕೊಟ್ಟಿದ್ದೇವೆ. ಇದನ್ನೆಲ್ಲ ಪರಿಗಣಿಸಿ ನ್ಯಾಯಾಲಯವು ಈ ಆದೇಶ ಕೊಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ: ತಮ್ಮ ವಿರುದ್ಧ ಕೋರ್ಟ್​ ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯ ಮಾಡಲ್ಲ, ನೈತಿಕ ಹೊಣೆ ಹೊತ್ತು ಕೊಡಬೇಕಾಗುತ್ತೆ. ಆರೋಪಿ ಹೊತ್ತ ವ್ಯಕ್ತಿ ಸಿಎಂ ಸ್ಥಾನದಲ್ಲಿ ಮುಂದುವರಿಯುವುದು ಕರ್ನಾಟಕಕ್ಕೆ ಮಾಡುವ ಅವಮಾನ ಎಂದು ವಾಗ್ದಾಳಿ ಮಾಡಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:43 pm, Wed, 25 September 24

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ