AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್, ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

ಮುಡಾ ಹಗರಣದ ಸಂಕಷ್ಟ ಸದ್ಯ ಸಿಎಂ ಸಿದ್ದರಾಮಯ್ಯ ಬೆನ್ನು ಬಿಡುವಂತೆ ಕಾಣಿಸುಲ್ಲ. ರಾಜ್ಯಪಾಲರ ಅಂಗಳ, ಮೈಸೂರು ಪಾದಯಾತ್ರೆ ಅಂತಾ ಬೀದಿಬೀದಿಯಲ್ಲಿ ಸದ್ದು ಮಾಡುತ್ತಿದ್ದ ಪ್ರಕರಣ, ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಕೋರ್ಟ್​ ಕಟಕಟೆವರೆಗೂ ಹೋಗಿದೆ. ಇಷ್ಟು ದಿನ ಒಂದು ಲೆಕ್ಕ, ಇನ್ಮೇಲೆ ಒಂದು ಲೆಕ್ಕ ಎಂಬಂತೆ ಆಗಿದೆ. ಹಾಗಾದರೆ ಸಿದ್ದರಾಮಯ್ಯಗೆ ಸಂಕಷ್ಟ ದುಪ್ಪಟಾಗಿದೆಯಾ? ಕೋರ್ಟ್​ನಲ್ಲಿ ನಡೆದ ವಿಚಾರಣೆ ಏನಾಯ್ತು? ಇಲ್ಲಿದೆ ವಿವರ.

ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್, ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ
ಸಿದ್ದರಾಮಯ್ಯImage Credit source: PTI
Ramesha M
| Edited By: |

Updated on: Aug 14, 2024 | 7:23 AM

Share

ಬೆಂಗಳೂರು, ಆಗಸ್ಟ್ 14: ಮುಡಾ ಜಮೀನು ಡಿನೋಟಿಫಿಕೇಷನ್ ಮಾಡಿಸಿ ಅಕ್ರಮ ಲಾಭ ಪಡೆದ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯರ ನಿದ್ದೆಗೆಡಿಸಿದೆ. ಸಿಎಂಗೆ ರಾಜ್ಯ ಪಾಲರ ನೋಟಿಸ್ ಬೆನ್ನಲ್ಲೇ, ಬಿಜೆಪಿ ಜೆಡಿಎಸ್ ಪಾದಯಾತ್ರೆ ನಡೆಸಿ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹಾಗೂ ಟಿಜೆ ಅಬ್ರಹಾಂ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದಾರೆ. ಎರಡು ದೂರುಗಳ ವಿಚಾರಣೆ ಮಂಗಳವಾರ ನಡೆದಿದ್ದು, ಒಂದು ಪ್ರಕರಣದಲ್ಲಿ ಆದೇಶ ಕಾಯ್ದಿರಿಸಲಾಗಿದೆ. ವಿಚಾರಣೆ ವೇಳೆ ಕೋರ್ಟ್​, ರಾಜ್ಯಪಾಲರ ಪೂರ್ವಾನುಮತಿ ಅಗತ್ಯತೆಯ ಪ್ರಶ್ನೆ ಎತ್ತಿದೆ. ಹೀಗಾಗಿ ಈಗ ಎಲ್ಲರ ಚಿತ್ತ ಈಗ ರಾಜ್ಯಪಾಲರ ಮುಂದಿನ ನಡೆಯತ್ತ ನೆಟ್ಟಿದೆ.

ಟಿಜೆ ಅಬ್ರಹಾಂ ಸಲ್ಲಿಸಿರುವ ದೂರಿನಲ್ಲಿ ಏನಿದೆ?

ಮುಡಾದಿಂದ ಸ್ವಾಧೀನಗೊಂಡ ಬಳಿಕ ಕೃಷಿ ಜಮೀನು ಅಸ್ತಿತ್ವದಲ್ಲೇ ಇರಲಿಲ್ಲ. ನಿವೇಶನಗಳಾಗಿ ಹಂಚಲಾಗಿದ್ದ ಜಮೀನನ್ನು ಖರೀದಿಸಿದ್ದಲ್ಲದೇ ಕೃಷಿ ಜಮೀನೆಂದು ಬಿಂಬಿಸಿ ಭೂ ಪರಿವರ್ತನೆ ಮಾಡಿಸಿದ್ದಾರೆ. ಹೀಗಾಗಿ ಸಿಎಂ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು 55.80 ಕೋಟಿ ರೂಪಾಯಿ ಬೆಲೆ ಬಾಳುವ ನಿವೇಶನಗಳ ಹಂಚಿಕೆ ಪಡೆದು ಅಕ್ರಮ ಲಾಭ ಗಳಿಸಿದ್ದಾರೆ. ಮುಡಾ, ಜಮೀನಿಗೆ ಬದಲಾಗಿ ನಿವೇಶನಗಳನ್ನು ಹಂಚಿದಾಗ ಸಿಎಂ ಪುತ್ರ ಯತೀಂದ್ರ ಶಾಸಕರಾಗಿದ್ದು ಮುಡಾದ ಭಾಗವಾಗಿದ್ದರು. ಅಲ್ಲದೇ ಸಿದ್ದರಾಮಯ್ಯ ಲೋಕಾಯುಕ್ತರಿಗೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಈ ಜಮೀನುಗಳ ವಿವರ ನೀಡಿದ್ದರು. ಆದರೆ 2013 ರ ಚುನಾವಣಾ ಪ್ರಮಾಣಪತ್ರದಲ್ಲಿ ಈ ಜಮೀನಿರುವುದನ್ನು ಘೋಷಿಸದೇ ಜನಸಾಮಾನ್ಯರಿಂದ ಮರೆಮಾಚಿದ್ದಾರೆಂದು ಟಿಜೆ ಅಬ್ರಹಾಂ ಆರೋಪಿಸಿದ್ದಾರೆ.

ಸದ್ಯ ಈ ಕೇಸ್​​ನ ಮುಂದಿನ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 21ಕ್ಕೆ ಮುಂದೂಡಿದೆ. ಇನ್ನು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜಡ್ಜ್ ಸಂತೋಷ್ ಗಜಾನನ ಭಟ್, ಪೂರ್ವಾನುಮತಿ ಪಡೆಯದೇ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬಹುದೇ ಎಂಬ ಪ್ರಶ್ನೆಯನ್ನು ಅರ್ಜಿದಾರರ ಮುಂದಿಟ್ಟಿದ್ದಾರೆ. ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲಾರದ ಲಕ್ಷ್ಮೀ ಅಯ್ಯಂಗಾರ್, ಈ ಹಂತದಲ್ಲಿ ಪೂರ್ವಾನುಮತಿ ಬೇಕಿಲ್ಲವೆಂದಿದ್ದಾರೆ. ಸ್ನೇಹಮಯಿ ಕೃಷ್ಣ ದೂರಿನ ವಿಚಾರವಾಗಿ, ಕೋರ್ಟ್ ಆಗಸ್ಟ್ 20 ರಂದು ಆದೇಶ ಪ್ರಕಟಿಸಲಿದೆ.

ಎಲ್ಲರ ಚಿತ್ತ ರಾಜ್ಯಪಾಲರ ಮುಂದಿನ ನಡೆಯತ್ತ

ಈ ಮಧ್ಯೆ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡದೇ ಸಿಎಂ ವಿರುದ್ಧ ಖಾಸಗಿ ದೂರನ್ನು ಸ್ವೀಕರಿಸಬಾರದೆಂದು ಅಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಪೂರ್ವಾನುಮತಿ ಪ್ರಶ್ನೆ ಇನ್ನೂ ಜೀವಂತವಿರುವುದರಿಂದ ಕೋರ್ಟ್ ಆಗಸ್ಟ್ 20 ರಂದು ನೀಡಬಹುದಾದ ಆದೇಶ ಮಹತ್ವ ಪಡೆದಿದೆ. ಅಷ್ಟರೊಳಗೆ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದರೆ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಶೋಕಾಸ್ ನೋಟಿಸ್ ಖಂಡಿಸಿ ಚಾಮರಾಜನಗರದಲ್ಲಿ ಮಂಗಳವಾರ ಶ್ರಮಿಕ ವರ್ಗಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಭುಗಿಲೆದ್ದಿರುವ ಮುಡಾ ಹಗರಣ ಸಮರ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!