AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸರ್ವೆ ನಂಬರ್​ ಹುಡುಕಿಸಿ ನಾನೇ ಬಹಿರಂಗಪಡಿಸ್ತೇನೆ, ಸರ್ಕಾರಕ್ಕೆ ಸಾರಾ ಮಹೇಶ್ ಸವಾಲು

ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ ನಾಯಕರ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ನನ್ನ ಹೆಸರು ಹೇಗೆ ಬಂತು ಅನ್ನುವುದೇ ಗೊತ್ತಿಲ್ಲ. ನಾನು ಶಿಫಾರಸು ಪತ್ರ ಕೊಟ್ಟಿದ್ದೇ ನಿಜವಾದ್ರೆ ಬಹಿರಂಗಪಡಿಸಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಸವಾಲು ಹಾಕಿದ್ದಾರೆ.

ಮುಡಾ ಹಗರಣ: ಸರ್ವೆ ನಂಬರ್​ ಹುಡುಕಿಸಿ ನಾನೇ ಬಹಿರಂಗಪಡಿಸ್ತೇನೆ, ಸರ್ಕಾರಕ್ಕೆ ಸಾರಾ ಮಹೇಶ್ ಸವಾಲು
ಮುಡಾ ಹಗರಣ: ಸರ್ವೆ ನಂಬರ್​ ಹುಡುಕಿಸಿ ನಾನೇ ಬಹಿರಂಗಪಡಿಸ್ತೇನೆ, ಸರ್ಕಾರಕ್ಕೆ ಸಾರಾ ಮಹೇಶ್ ಸವಾಲು
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 27, 2024 | 6:07 PM

Share

ಮೈಸೂರು, ಜುಲೈ 27: ಮುಡಾಗೆ (muda) ನಾನು ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ. ಪಟ್ಟಿಯಲ್ಲಿ ನನ್ನ ಹೆಸರು ಹೇಗೆ ಬಂತು ಅನ್ನೋದೆ ಗೊತ್ತಿಲ್ಲ. ನಾನು ಶಿಫಾರಸು ಪತ್ರ ಕೊಟ್ಟಿದ್ದೇ ನಿಜವಾದರೆ ಬಹಿರಂಗಪಡಿಸಿ ಎಂದು ಜೆಡಿಎಸ್​ (JDS) ಮಾಜಿ ಶಾಸಕ ಸಾ.ರಾ.ಮಹೇಶ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಹೇಳಿರುವ ಸರ್ವೆ ನಂಬರ್ ನಾನೇ ಹುಡುಕಿಸುತ್ತೇನೆ. ಆರ್​ಟಿಐಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆದು ಬಹಿರಂಗಪಡಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ನಿನ್ನೆ ನಗರಾಭಿವೃದ್ಧಿ ಸಚಿವರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಾನೇ ಅಷ್ಟು ಜಮೀನು ಸ್ವಂತ ಹಣದಲ್ಲಿ ಖರೀದಿಸಿ ಪ್ರಾಧಿಕಾರಕ್ಕೆ ವಾಪಸ್ ಕೊಡುತ್ತೇನೆ. ಸುಮ್ಮನೇ ವಿಚಾರ ಡೈವರ್ಟ್ ಮಾಡಲು ಸುಳ್ಳು ಹೇಳಬೇಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಸೈಟ್​ ಪಡೆದ ಬಿಜೆಪಿ-ಜೆಡಿಎಸ್​ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಮುಡಾದಲ್ಲಿ ನಡೆದಿರುವ ಎಲ್ಲ ಅವ್ಯವಹಾರ ನನಗೆ ಗೊತ್ತು. ಯಾರು ಯಾರು ಎಷ್ಟು ಸೈಟ್​​ ಪಡೆದಿದ್ದಾರೆ ಎಲ್ಲವೂ ಗೊತ್ತಿದೆ. ಆದರೆ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ವಿಶ್ರಾಂತಿ ಪಡೆಯಿರಿ ಎಂದು ಜನರು ನನ್ನ ಸೋಲಿಸಿದ್ದಾರೆ. ವಿಶ್ರಾಂತಿ ಪಡೀತಿದ್ದೇನೆ, ಸುಮ್ಮನೆ ನನ್ನ ಹೆಸರು ತರ್ತೀರಾ? ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಜಿ.ಟಿ.ದೇವೇಗೌಡ ವಾಗ್ದಾಳಿ

ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿದ್ದು, ನನ್ನ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸರ್ಕಾರಕ್ಕೆ 2 ಪತ್ರ ಬರೆದಿದ್ದೆ. ಅದನ್ನೇ ನೆಪ ಮಾಡಿಕೊಂಡು ಸೈಟ್ ಕೊಟ್ಟಿದ್ದೇವೆಂದು ಹೇಳಿದ್ದಾರೆ. ಶಿವಮೂರ್ತಿ ಎಂಬುವರ ಜಾಗವನ್ನು ಮುಡಾ ಬಳಸಿಕೊಂಡಿತ್ತು. ವೀರನಗೆರೆ ಗ್ರಾಮದ ರೈತನಿಗೂ ಇದೇ ರೀತಿಯ ಸಮಸ್ಯೆ ಆಗಿತ್ತು. ಕಾನೂನಾತ್ಮಕವಾಗಿದ್ದರೆ ಪರಿಹಾರ ಕೊಡಿ ಅಂತ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನೆಕ್ಕಂಟಿ ನಾಗರಾಜ್, ವೆಂಕಟೇಶ್ವರ ರಾವ್ ನಂಬಿದವರಿಗೆ ಸಂಕಷ್ಟ, ಹಣ ವಾಪಾಸ್ ನೀಡುವಂತೆ SIT ಒತ್ತಡ

ಮಂತ್ರಿಗಳು ಯಾವುದನ್ನು ಕೂಡ ನೋಡದೇ ಹೇಳಿಕೆ ‌ನೀಡಿದ್ದೀರಿ. ಕಲೆಕ್ಷನ್ ಮಾಡಲು ಇಟ್ಟುಕೊಂಡವರ ಮಾತು ಕೇಳಿ ಹೇಳಿಕೆ ನೀಡಿದ್ದಾರೆ. ನಿಮ್ಮ ತಪ್ಪಿನಿಂದಾಗಿ ಈಗ ಮುಖ್ಯಮಂತ್ರಿಗಳ ತಲೆಗೆ ಬಂದಿದೆ. ಪ್ರಾಧಿಕಾರಗಳು ಸಂಬಳ ಕೊಡಲೂ ಕಾಸಿಲ್ಲದ ಸ್ಥಿತಿಗೆ ಬಂದಿವೆ. ಒಳಚರಂಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೂ ದುಡ್ಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ