AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಕರ್ನಾಟಕದ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್​​ಗೆ ಸಮನ್ಸ್ ನೀಡುವ ವಿಚಾರದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್​ನಲ್ಲಿ ಭಾರಿ ಹಿನ್ನಡೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ನಿರಾಳರಾದಂತಾಗಿದೆ. ಇಡಿ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಅಷ್ಟಕ್ಕೇ ಸುಮ್ಮನಾಗದೆ ಸಂಸ್ಥೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್
ಗಣಪತಿ ಶರ್ಮಾ
|

Updated on:Jul 21, 2025 | 12:37 PM

Share

ಬೆಂಗಳೂರು, ಜುಲೈ 21: ಮುಡಾ ಹಗರಣ (MUDA Scam) ಸಂಬಂಧ ಜಾರಿ ನಿರ್ದೇಶನಾಲಯ (ED) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ (Parvathi Siddaramaiah) ಹಾಗೂ ಸಚಿವ ಭೈರತಿ ಸುರೇಶ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮುರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅರ್ಜಿಯನ್ನು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು?

‘ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಹಾಗೆ ಮಾಡಿದರೆ, ನಾವು ಇಡಿ ಬಗ್ಗೆ ಕೆಲವು ಕಟು ಟೀಕೆಗಳನ್ನು ಮಾಡಬೇಕಾಗಬಹುದು. ದುರದೃಷ್ಟವಶಾತ್, ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವಿದೆ. ನೀವು ಈಗ ದೇಶಾದ್ಯಂತ ಈ ರೀತಿಯ ವರ್ತನೆ ಮುಂದುವರಿಸಬಾರದು. ರಾಜಕೀಯ ಪೈಪೋಟಿಯನ್ನು ಏನಿದ್ದರೂ ಮತದಾರರ ಎದುರು ಮಾಡಿಕೊಳ್ಳಲಿ. ಇಡಿಯನ್ನು ಏಕೆ ಎಂದು ಬಳಸಲಾಗುತ್ತಿದೆ’ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ಎಸ್​ವಿ ರಾಜಿ ಅವರನ್ನುದ್ದೇಶಿಸಿ ಸಿಜೆಐ ಬಿಆರ್ ಗವಾಯಿ ಪ್ರಶ್ನಿಸಿದರು.

ಮುಂದುವರಿದು, ಏಕಸದಸ್ಯ ಪೀಠದ ತೀರ್ಪಿನಲ್ಲಿ ನಮಗೆ ಲೋಪ ಕಂಡುಬಂದಿಲ್ಲ. ಹೀಗಾಗಿ ಇಡಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದರು. ಇದರೊಂದಿಗೆ ಇದೀಗ, ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ನಿರಾಳರಾದಂತಾಗಿದೆ.

ಇದನ್ನೂ ಓದಿ
Image
ಮುಡಾ: ಒಬ್ಬ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ತನಿಖೆಯಲ್ಲಿ ಪತ್ತೆ
Image
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ಸಿಎಂಗೆ ಟೆನ್ಷನ್​ ಟೆನ್ಷನ್​
Image
ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ
Image
ನಿಜವಾಯ್ತು Tv9 ಡಿಜಿಟಲ್​ ನುಡಿದಿದ್ದ ಭವಿಷ್ಯ; ಮುಡಾ ಕಚೇರಿ ಮೇಲೆ ಇಡಿ ದಾಳಿ

ಇದನ್ನೂ ಓದಿ: ಮುಡಾ ಹಗರಣದ ಮತ್ತಷ್ಟು ಕರ್ಮಕಾಂಡ ಬಯಲು: ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ಇಡಿ ತನಿಖೆಯಲ್ಲಿ ಪತ್ತೆ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್​ಗೆಗೆ ಇಡಿ ನೀದಿದ್ದ ಸಮನ್ಸ್‌ಗೆ ತಡೆಯಾಜ್ಞೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ ಅಂತಿಮವಾಗಿ 2025ರ ಮಾರ್ಚ್​​ನಲ್ಲಿ ಅದನ್ನು ರದ್ದುಗೊಳಿಸಿತ್ತು. ಇಡಿ ಜಾರಿಗೊಳಿಸಿದ್ದ ಸಮನ್ಸ್‌ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ಕುರಿತು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 21 July 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಮುಸ್ಲಿಮರಿಂದ ಪ್ರತಿಭಟನೆ
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಗುರು ಸಂಚಾರದಿಂದ ಈ ಒಂದು ರಾಶಿಗೆ ಡಬಲ್ ಧಮಾಕ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ಡಿಕೆಶಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್​​ ಸಭೆಯ ಕಾರಣ ಇನ್ನೂ ನಿಗೂಢ!
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ರಾಜ್ಯದ ಜನತೆಗೆ ಸುಪ್ರೀಂ ಕೋರ್ಟ್‌ನಿಂದ ಸಿಕ್ತು ಬಂಪರ್ ಗುಡ್ ನ್ಯೂಸ್
ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!
ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!
ಫ್ರಾನ್ಸ್​ನಲ್ಲಿ ಬಿಸಿಲ ತಾಪ ಹೆಚ್ಚಳ, ರೈಲಿನಲ್ಲಿ ಕೂರಲಾರದೆ ಹೊರ ಬಂದ ಜನ
ಫ್ರಾನ್ಸ್​ನಲ್ಲಿ ಬಿಸಿಲ ತಾಪ ಹೆಚ್ಚಳ, ರೈಲಿನಲ್ಲಿ ಕೂರಲಾರದೆ ಹೊರ ಬಂದ ಜನ
ಪರೀಕ್ಷೆಯಲ್ಲಿ ಮೊಬೈಲ್​, ಬುಕ್​​ ಇಟ್ಕೊಂಡು ನಕಲು ಮಾಡ್ತಿರೋ ವಿಡಿಯೋ ವೈರಲ್!
ಪರೀಕ್ಷೆಯಲ್ಲಿ ಮೊಬೈಲ್​, ಬುಕ್​​ ಇಟ್ಕೊಂಡು ನಕಲು ಮಾಡ್ತಿರೋ ವಿಡಿಯೋ ವೈರಲ್!