ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಆದೇಶದ ವೇಳೆ ಗಾಂಧೀಜಿಯ ರಾಮರಾಜ್ಯ ಪಾಠ ಹೇಳಿದ ಕೋರ್ಟ್​!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ತೀರ್ಪು ಪ್ರಕಟಿಸುವ ವೇಳೆ ಆಡಳಿತಗಾರರಿಗೆ ಗಾಂಧೀಜಿಯವರ ರಾಮ ರಾಜ್ಯ ಪರಿಕಲ್ಪನೆ ಬಗ್ಗೆ ಪಾಠ ಹೇಳಿದ್ದ ವಿಚಾರ ಬೆಳಕಿಗೆ ಬಂದಿದೆ. ಜಡ್ಜ್ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಆದೇಶದ ವೇಳೆ ಗಾಂಧೀಜಿಯ ರಾಮರಾಜ್ಯ ಪಾಠ ಹೇಳಿದ ಕೋರ್ಟ್​!
ಸಿದ್ದರಾಮಯ್ಯ ವಿರುದ್ಧ ಆದೇಶದ ವೇಳೆ ಗಾಂಧೀಜಿಯ ರಾಮರಾಜ್ಯ ಪಾಠ ಹೇಳಿದ ಕೋರ್ಟ್ (ಸಾಂದರ್ಭಿಕ ಚಿತ್ರ)
Follow us
| Updated By: ಗಣಪತಿ ಶರ್ಮ

Updated on:Sep 27, 2024 | 2:09 PM

ಬೆಂಗಳೂರು, ಸೆಪ್ಟೆಂಬರ್ 27: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಅದರಂತೆ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತರು ಎಫ್ಐಆರ್ ದಾಖಲಿಸುವ ಸಾಧ್ಯತೆ ಇದೆ. ಆದರೆ, ತನಿಖೆಗೆ ಆದೇಶಿಸಿ ತೀರ್ಪು ಪ್ರಕಟಿಸಿದ್ದ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಡಳಿತಗಾರರಿಗೆ ಗಾಂಧೀಜಿ ತತ್ವಗಳ ಬಗ್ಗೆ ಪಾಠ ಮಾಡಿದ ವಿಚಾರ ಬಹಿರಂಗವಾಗಿದೆ.

ತೀರ್ಪು ನೀಡುವ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್, ಡಾ. ಎಂ ರಾಮಾ ಜೋಯಿಸ್ ಅವರ ಪುಸ್ತಕದಲ್ಲಿನ ಆಡಳಿತದ ಕಲ್ಪನೆಯನ್ನು ಉಲ್ಲೇಖಿಸಿದ್ದಾರೆ. ‘ರಾಜ ಧರ್ಮದೊಂದಿಗೆ ರಾಜನೀತಿಯ ಪಾಠಗಳು’ ಪುಸ್ತಕದ ಅಂಶಗಳನ್ನು ಉಲ್ಲೇಖಿಸಿರುವುದು ತಿಳಿದುಬಂದಿದೆ.

ಗಾಂಧೀಜಿ ರಾಮ ರಾಜ್ಯದ ಪಾಠ ಮಾಡಿದ ಜಡ್ಜ್

ಗಾಂಧೀಜಿಯವರ ಆದರ್ಶ, ರಾಮರಾಜ್ಯದ ಆಡಳಿತವಾಗಿತ್ತು. ಉನ್ನತ ನೈತಿಕ ಜೀವನದ ಸಮಾಜದ ನಿರ್ಮಾಣದ ಪರವಾಗಿತ್ತು. ದಕ್ಷ ಹಾಗೂ ಪ್ರಾಮಾಣಿಕ ಆಡಳಿತವಿದ್ದರೆ ಮಾತ್ರ ಆದರ್ಶ ಸಮಾಜ ನೆಲೆಗೊಳ್ಳಲು ಸಾಧ್ಯ. ಇಂಥ ಸಮಾಜದಲ್ಲಿ ಮಾತ್ರ ಧರ್ಮ, ಅರ್ಥ, ಕಾಮ, ಮೋಕ್ಷಗಳಿಗೆ ಅವಕಾಶವಿದೆ ಎಂದು ಜಡ್ಜ್ ನೈತಿಕತೆಯ ಪಾಠ ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ರಾಜ ಧರ್ಮ ಬೋಧನೆ

ಹಿಂದೆ ರಾಜನಾದವನು ಆಡಳಿತದ ಧರ್ಮ (ರಾಜ ಧರ್ಮ) ಪಾಲಿಸಬೇಕಿತ್ತು. ಮಹಾತ್ಮ ಗಾಂಧೀಜಿಯವರ ಪ್ರಕಾರ ಇದುವೇ ಆದರ್ಶ ರಾಮರಾಜ್ಯ. ಈಗ ಜನಪ್ರತಿನಿಧಿಗಳಿಂದ ಕೂಡಿದ ಜವಾಬ್ದಾರಿಯುತ ಸರ್ಕಾರವಿದೆ. ಆಡಳಿತದಲ್ಲಿರುವವರು ರಾಜ ಧರ್ಮವನ್ನು ಪಾಲಿಸದಿದ್ದರೆ ಆಗ ಅದು ರಾವಣ ರಾಜ್ಯವಾಗಲಿದೆ. ರಾಮ ರಾಜ್ಯವಾಗಬೇಕೋ ರಾವಣ ರಾಜ್ಯವಾಗಬೇಕೋ ಎಂಬುದನ್ನು ನಾವೇ ಆರಿಸಿಕೊಳ್ಳಬೇಕಿದೆ ಎಂದು ಆಡಳಿತಗಾರರಿಗೆ, ಸರ್ಕಾರಕ್ಕೆ ಜಡ್ಜ್ ಪಾಠ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:06 pm, Fri, 27 September 24

‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ