AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಇಡಿ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ ಈ ಮೂರು ಅಂಶಗಳು

ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಅತ್ತ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಈ ಮಧ್ಯೆ, ಮುಡಾ ತನಿಖೆ ವಿಚಾರದಲ್ಲಿ ಇಡಿಗೆ ಕೆಲವು ಅಂಶಗಳು ಮಹತ್ವದ್ದಾಗಲಿವೆ. ಆ ಅಂಶಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿ.

ಮುಡಾ ಹಗರಣ: ಇಡಿ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ ಈ ಮೂರು ಅಂಶಗಳು
ಮುಡಾ ಹಗರಣ
Kiran HV
| Edited By: |

Updated on: Oct 01, 2024 | 11:52 AM

Share

ಬೆಂಗಳೂರು, ಅಕ್ಟೋಬರ್ 1: ಮುಡಾ ಹಗರಣ ಸಂಬಂಧ ಒಂದೆಡೆ ಮೈಸೂರು ಲೋಕಾಯಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಡಾ ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ ಬರೆದಿದ್ದಾರೆ. ಇದೀಗ ಇಡಿ ತನಿಖೆಯಲ್ಲಿ ಮೂರು ಅಂಶಗಳು ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗಿದೆ.

ಮೊದಲನೆಯ ಅಂಶವೆಂದರೆ, ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದ ಅಡಿಯಲ್ಲಿ ತನಿಖೆ ನಡೆಸುವ ಸಾಧ್ಯತೆ ಇದೆ.

ಹಣಕಾಸು ಅವ್ಯವಹಾರ ಆರೋಪ

ಎರಡನೇ ಅಂಶವೆಂದರೆ, ಮುಡಾದಲ್ಲಿದ್ದ 387 ಕೋಟಿ ರೂಪಾಯಿ ಹಣ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಕಾನೂನು ಬಾಹಿರವಾಗಿ ಮುಡಾ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇದ್ದು, ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ.

ಐಟಿ ದಾಳಿ ವೇಳೆ ಸಿಕ್ಕಿದ್ದು ಮುಡಾ ಹಣವೇ?

2023ರ ಅಕ್ಟೋಬರ್​​ನಲ್ಲಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಐಟಿ ದಾಳಿಯಾಗಿತ್ತು. ಆಗ ಉದ್ಯಮಿ ಹಾಗೂ ಗುತ್ತಿಗೆದಾರರ ಮನೆಗಳಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಸಿಕ್ಕಿತ್ತು. ಅದು ಸಚಿವರೊಬ್ಬರಿಗೆ ಸೇರಿದ್ದು ಎನ್ನಲಾಗಿತ್ತು. ಮುಡಾಗೆ ಸಂಬಂಧಿಸಿದ ಹಣ ಎಂಬ ಗುಮಾನಿಯೂ ಇತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಮುಡಾ ಸೈಟ್ ವಾಪಸ್: ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್

ಒಟ್ಟಿನಲ್ಲಿ ಈ ಎಲ್ಲ ಅಂಶಗಳು ಮುಡಾ ವಿಚಾರದಲ್ಲಿ ತನಿಖೆ ನಡೆಸಲಿರುವ ಇಡಿಗೆ ಮಹತ್ವದ್ದಾಗಲಿವೆ. ಸದ್ಯ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಇಡಿ ಸಹ ತನಿಖೆ ಆರಂಭಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!