AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿ ನಿವೇಶನ ವಾಪಸ್ ನೀಡಲು ನಿರ್ಧರಿಸಿದ್ದಾರೆ. ಮುಡಾಕ್ಕೆ ಪತ್ರ ಬರೆದು ಪ್ರಸ್ತಾಪ ಮಾಡಿದ್ದಾರೆ. ಇದಾದ ನಂತರ ಸಿದ್ದರಾಮಯ್ಯ ಅವರಿಗೆ ಇಡಿ ತನಿಖೆಯಿಂದ ರಿಲೀಫ್ ಸಿಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಇಡಿ ಮಾಜಿ ಜಂಟಿ ನಿರ್ದೇಶಕ ಸತ್ಯೇಂದ್ರ ಸಿಂಗ್ ‘ಟಿವಿ9’ ಜತೆ ಮಾತನಾಡಿದ್ದಾರೆ. ವಿವರ ಇಲ್ಲಿದೆ.

ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು
ಮುಡಾ ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ?
Follow us
Ganapathi Sharma
|

Updated on:Oct 01, 2024 | 2:36 PM

ಬೆಂಗಳೂರು, ಅಕ್ಟೋಬರ್ 1: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಸೈಟ್ ಹಿಂದಿರುಗಿಸುವ ಕ್ರಮದಿಂದ ಪ್ರಯೋಜನವಾಗಲಿದೆಯೇ? ಈ ಪ್ರಶ್ನೆ ಸದ್ಯ ಉದ್ಭವಿಸಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಹಣಕಾಸು ಅವ್ಯವಹಾರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ. ಈ ನಡುವೆ 14 ಸೈಟ್​ಗಳನ್ನು ಮುಡಾಕ್ಕೆ ಹಿಂದಿರುಗಿಸಲು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಂದಾಗಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ. ಮುಡಾದಿಂದ ಪಡೆದಿರುವ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಪಾರ್ವತಿ ಹೇಳಿದ್ದಾರೆ. ನನಗೆ ಪತಿಯೇ ಹೆಚ್ಚು, ಹೀಗಾಗಿ ನನಗೆ ಮಂಜೂರು ಮಾಡಿರುವ 14 ನಿವೇಶನಗಳನ್ನು ವಾಪಸ್ ಕೊಡುತ್ತೇನೆ ಎಂದು ಪಾರ್ವತಿ ಮುಡಾಗೆ ತಿಳಿಸಿದ್ದಾರೆ.

ಪಾರ್ವತಿ ಅವರ ಈ ನಿರ್ಧಾರಕ್ಕೆ ಮುಡಾದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಪತ್ರದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಅವರ (ಪಾರ್ವತಿ) ನಿರ್ಧಾರ. ಆದರೆ ನಾನು ಕೂಡ ಸುದೀರ್ಘ ಕಾನೂನು ಹೋರಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ.

ಇಡಿ ತನಿಖೆಯಿಂದ ಸಿಗಲಿದೆಯೇ ರಿಲೀಫ್?

ಸೈಟ್ ವಾಪಸ್ ಕೊಡುವ ಪಾರ್ವತಿಯವರ ನಿರ್ಧಾರದಿಂದ ಸಿದ್ದರಾಮಯ್ಯನವರಿಗೆ ಮುಡಾ ಹಗರಣದಲ್ಲಿ ರಿಲೀಫ್ ಸಿಗುತ್ತಾ ಎಂಬುದೇ ದೊಡ್ಡ ಪ್ರಶ್ನೆ. ಮುಡಾದಲ್ಲಿ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ಪಿಎಂಎಲ್‌ಎ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.

ಈ ವಿಚಾರವಾಗಿ ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ಸತ್ಯೇಂದ್ರ ಸಿಂಗ್ ‘ಟಿವಿ-9 ಭಾರತ್ ವರ್ಷ್‌’ಗೆ ಪ್ರತಿಕ್ರಿಯಿಸಿದ್ದಾರೆ. ಸೈಟ್ ಹಿಂದಿರುಗಿಸುವುದು ಈ ಪ್ರಕರಣದಲ್ಲಿ ಇಡಿ ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ, ಸೈಟ್ ಹಿಂದಿರುಗಿಸುವುದರಿಂದ ಕೃತ್ಯ ನಡೆದಿಲ್ಲ ಎಂದು ಹೇಳಲಾಗುವುದಿಲ್ಲ. ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಸುಳ್ಳು ದಾಖಲೆ ನೀಡಿ ಭೂಸ್ವಾಧೀನ ಮಾಡಿಕೊಂಡಿದ್ದಾರೆ ಎಂಬ ಆರೋಪವಿದ್ದು, ತನಿಖೆ ಮುಂದುವರಿಯಲಿದೆ ಎಂದು ಸತ್ಯೇಂದ್ರ ಸಿಂಗ್ ಹೇಳಿದ್ದಾರೆ.

ಈ ಪ್ರಕರಣದಲ್ಲಿ ದಾಖಲಾಗಿರುವ ಮೂಲ ಎಫ್ಐಆರ್ ಅನ್ನು ಲೋಕಾಯುಕ್ತರು ದಾಖಲಿಸಿದ್ದಾರೆ. ಈಗ ಅದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲಿಸಿದ್ದು, ಸಂಪೂರ್ಣ ತನಿಖೆ ನಡೆಸಲಿದೆ. ಇಲ್ಲಿ, ಸೈಟ್ ವಾಪಸ್ ಕೊಡುವುದು ಮುಖ್ಯವಾದ ವಿಚಾರವೇ ಅಲ್ಲ ಎಂದು ಸತ್ಯೇಂದ್ರ ಸಿಂಗ್ ಹೇಳಿದ್ದಾರೆ.

ತನಿಖೆ ಪ್ರಾರಂಭವಾದ ನಂತರ, ಹೇಗಾದರೂ ಮುಡಾಗೆ ಸೇರಿದ ಭೂಮಿಯನ್ನು ಇಡಿ ವಶಪಡಿಸಿಕೊಳ್ಳುತ್ತದೆ. ಏಕೆಂದರೆ ಪ್ರಕರಣವು ಭೂಮಿಗೆ ಸಂಬಂಧಿಸಿದ್ದಾಗಿದೆ. ಈ ಕಾರಣದಿಂದ, ಸಿಎಂ ಕುಟುಂಬದವರು ಈಗಾಗಲೇ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವ ಸಾಧ್ಯತೆಯಿದೆ ಎಂದೂ ಸತ್ಯೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಮುಡಾ ಪ್ರಕರಣದಲ್ಲಿ ಮುಂದೇನಾಗಲಿದೆ?

ಸದ್ಯ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ಇಡಿ ಈ ಪ್ರಕರಣದಲ್ಲಿ ಸಂಬಂಧಪಟ್ಟ ಎಲ್ಲರನ್ನೂ ವಿಚಾರಣೆಗೆ ಕರೆಸಲಿದೆ. ಇದಾದ ನಂತರ ತನಿಖೆ ಮುಂದುವರಿಯಲಿದೆ ಎಂದು ಕುರಿತು ಸತ್ಯೇಂದ್ರ ಸಿಂಗ್ ಹೇಳಿದ್ದಾರೆ.

ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ ಎಂದು ಹೆಸರಿಸಲಾಗಿದೆ. ಹೀಗಿರುವಾಗ ತನಿಖಾ ಸಂಸ್ಥೆ ಮೊದಲು ಸಿದ್ದರಾಮಯ್ಯನವರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸಬಹುದು ಎನ್ನಲಾಗುತ್ತಿದೆ.

ಬಂಧನಕ್ಕೊಳಗಾಗುತ್ತಾರಾ ಸಿದ್ದರಾಮಯ್ಯ?

ಸಿದ್ದರಾಮಯ್ಯ ಅವರನ್ನು ಇಡಿ ಬಂಧಿಸಬಹುದೇ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಮೂಡಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಪಿಎಂಎಲ್‌ಎ ಅಡಿಯಲ್ಲಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕಾರಣ ಈ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ: ಮುಡಾ ಹಗರಣ: 14 ಸೈಟ್​ಗಿಂತ ಹಳೆ ದೊಡ್ಡ ಕೇಸ್ ಇದೆಯೆಂದು ದಾಖಲೆ ತೋರಿಸಿದ ಕುಮಾರಸ್ವಾಮಿ

ಇಡಿ ಎರಡು ಸಂದರ್ಭಗಳಲ್ಲಿ ಆರೋಪಿಗಳನ್ನು ಬಂಧಿಸುತ್ತದೆ. ಮೊದಲನೆಯದಾಗಿ, ಆರೋಪಿಯು ತನಿಖೆಗೆ ಸಹಕರಿಸುವುದಿಲ್ಲ ಎಂದಾಗ ಮತ್ತು ಎರಡನೆಯದಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದಾಗ. ಹಿಗಾಗಿ ಮುಡಾದಲ್ಲಿ ಸಿದ್ದರಾಮಯ್ಯ ಬಂಧನವಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:23 pm, Tue, 1 October 24

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ