ಮುಡಾ ಕೇಸ್ಗೆ ಸ್ಫೋಟಕ ಟ್ವಿಸ್ಟ್: ಆಡಿಯೋ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಮಾಜಿ ಆಯುಕ್ತ ಡಿ.ಬಿ. ನಟೇಶ್ ಮುಂಬಡ್ತಿಗಾಗಿ ಸಿ.ಎಸ್. ಶಾಲಿನಿ ರಜನೀಶ್ಗೆ 1.60 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ನಟೇಶ್ರಿಂದ ತಮ್ಮನ್ನು ಸಂಪರ್ಕಿಸುವ ಯತ್ನದ ಆಡಿಯೋ ಸಹ ಬಿಡುಗಡೆ ಮಾಡಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಮೈಸೂರು, ಫೆಬ್ರವರಿ 17: ಮುಡಾ ಸೈಟ್ ಹಂಚಿಕೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ತಮ್ಮ ಮುಂಬಡ್ತಿಗಾಗಿ ಶಾಲಿನಿ ರಜನೀಶ್ ಅವರಿಗೆ 1 ಕೋಟಿ 60 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಈ ಕುರಿತು ತಮಗೆ ಫೆಬ್ರವರಿ 9 ರಂದೇ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಪೂರಕವಾಗಿ ಸಾಕ್ಷಿಗಳೂ ಸಿಕ್ಕಿವೆ ಎಂದು ಹೇಳಿದ್ದಾರೆ. ಲಂಚದ ಬಗ್ಗೆ ಮಾಹಿತಿ ಬಂದ ಮರುದಿನವೇ ನಟೇಶ್ಗೆ ಮುಂಬಡ್ತಿ ನೀಡಿರುವುದು ಅನುಮಾನಕ್ಕೆ ಎಡೆಮಾಡಿದೆ. ಹೀಗಾಗಿ ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿರೋದಾಗಿ ಅವರು ತಿಳಿಸಿದ್ದಾರೆ. ಶಾಲಿನಿ ರಜನೀಶ್ ಅವರಿಂದ ಸ್ಪಷ್ಟೀಕರಣ ಕೋರಿ ಪತ್ರ ಬರೆದಿರುವ ಕೃಷ್ಣ, ಪ್ರಕರಣದಿಂದ ಹೊರಬರಲು ನಟೇಶ್ ತಮ್ಮನ್ನು ಸಂಪರ್ಕಿಸಲು ಯತ್ನಿಸಿದ್ದರು ಎನ್ನಲಾದ ಆಡಿಯೋ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
