AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವರಂತೆ ವಿಶಿಷ್ಟ ರೀತಿಯಲ್ಲಿ ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿ, ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!

ರೈತರಿಗೆ ಸಾಕು ಪ್ರಾಣಿಗಳು ಮನೆಯ ಸದಸ್ಯರಿದ್ದಂತೆ. ಅವುಗಳನ್ನು ಚೆನ್ನಾಗಿ ನೋಡಿಕೊಂಡರೆ ನಾವು ಸಮೃದ್ಧವಾಗಿರುತ್ತೇವೆ, ಬದುಕು ಬಂಗಾರವಾಗುತ್ತದೆ. ನಮ್ಮ ಮನೆಯಲ್ಲಿ ಸಾಕುವ ಪ್ರಾಣಿಗಳನ್ನು ನಮ್ಮ ಮನೆಯ ಸದಸ್ಯರಂತೆ ನಾವು ಭಾವಿಸಿದ್ದೇವೆ. ನಮ್ಮ ಮನೆಯಲ್ಲಿ ಸೀಮಂತ ಮಾಡುತ್ತಿರುವುದರಿಂದ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ - ಮುದ್ದಗೆರೆ ಗ್ರಾಮಸ್ಥರ ಮೆಚ್ಚುಗೆ

ಮಾನವರಂತೆ ವಿಶಿಷ್ಟ ರೀತಿಯಲ್ಲಿ ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿ, ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!
ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿದ ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!
ಪ್ರಶಾಂತ್​ ಬಿ.
| Edited By: ಸಾಧು ಶ್ರೀನಾಥ್​|

Updated on:Aug 14, 2023 | 12:30 PM

Share

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮುದ್ದಗೆರೆ ಗ್ರಾಮದ ಕುಟುಂಬವೊಂದು (muddagere villagers) ಗರ್ಭಿಣಿಗೆ (pregnant) ಸೀಮಂತ (seemantha) ಮಾಡುವ ರೀತಿ ಹಸುವಿಗೆ ವಿಶಿಷ್ಟ ರೀತಿಯಲ್ಲಿ ಸೀಮಂತ ನೆರವೇರಿಸಿ ಗಮನ ಸೆಳೆದಿದೆ. ಗ್ರಾಮದ ರಾಜಪ್ಪ ಎಂಬುವವರ ಮನೆಯಲ್ಲಿ ಈ ಸಂಭ್ರಮದ ಕಾರ್ಯ ನಡೆದಿದೆ. ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿದ ಕುಟುಂಬಸ್ಥರು ಕೊಬ್ಬರಿ, ಬೆಲ್ಲ, ಹೂವು, ಹಣ್ಣು, ಕಲ್ಲುಸಕ್ಕರೆ, ಕರ್ಜೂರ, ದ್ರಾಕ್ಷಿ, ಗೋಡಂಬಿ, ಬಳೆ, ಅರಿಶಿಣ-ಕುಂಕುಮ, ಸೀರೆ ಇಟ್ಟು ವಿಶೇಷ ಪೂಜೆ‌ ನೆರವೇರಿಸಿತು. ಸದರಿ ಕುಟುಂಬಸ್ಥರು ಬಂಧು ಬಾಂದವರನ್ನ ಕರೆಸಿ ಗ್ರಾಮಸ್ಥರೆಲ್ಲರಿಗೂ ಅಡುಗೆ ಮಾಡಿಸಿ ಉಣಬಡಿಸಿದರು.

ರೈತರಿಗೆ ಸಾಕು ಪ್ರಾಣಿಗಳು ಮನೆಯ ಸದಸ್ಯರಿದ್ದಂತೆ. ಅವುಗಳನ್ನು ಚೆನ್ನಾಗಿ ನೋಡಿಕೊಂಡರೆ ನಾವು ಸಮೃದ್ಧವಾಗಿರುತ್ತೇವೆ, ಬದುಕು ಬಂಗಾರವಾಗುತ್ತದೆ. ನಮ್ಮ ಮನೆಯಲ್ಲಿ ಸಾಕುವ ಪ್ರಾಣಿಗಳನ್ನು ನಮ್ಮ ಮನೆಯ ಸದಸ್ಯರಂತೆ ನಾವು ಭಾವಿಸಿದ್ದೇವೆ. ನಮ್ಮ ಮನೆಯಲ್ಲಿ ಸೀಮಂತ ಮಾಡುತ್ತಿರುವುದರಿಂದ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

Also Read: ಚಿಕ್ಕಮಗಳೂರು: ವರ್ಷದಿಂದ ಗದ್ದೆಯಲ್ಲಿ ಮನೆ ಮಾಡಿ, ಬೆಚ್ಚಗೆ ಮಲಗಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ

ಹಸುವಿನ ಸೀಮಂತ ಮಾಡುತ್ತಿರುವುದು ವಿಶೇಷ ಮತ್ತು ವಿಶಿಷ್ಟವಾಗಿದೆ. ಇದೊಂದು ಮಾದರಿ ಕಾರ್ಯವಾಗಿದೆ. ಹೆಣ್ಣುಮಕ್ಕಳಿಗೆ ಮಾಡುವ ಸೀಮಂತ ಕಾರ್ಯದ ರೀತಿ ಮಾಡಿದ್ದೇವೆ. ಸಾಕು ಪ್ರಾಣಿಗಳನ್ನು ನಾವು ಗೌರವ ಮತ್ತು ಭಕ್ತಿಯಿಂದ ಕಾಣಬೇಕಾದದ್ದು ನಮ್ಮ ಧರ್ಮ ಎಂದು ಕುಟುಂಬಸ್ಥರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Mon, 14 August 23

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು