AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವರಂತೆ ವಿಶಿಷ್ಟ ರೀತಿಯಲ್ಲಿ ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿ, ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!

ರೈತರಿಗೆ ಸಾಕು ಪ್ರಾಣಿಗಳು ಮನೆಯ ಸದಸ್ಯರಿದ್ದಂತೆ. ಅವುಗಳನ್ನು ಚೆನ್ನಾಗಿ ನೋಡಿಕೊಂಡರೆ ನಾವು ಸಮೃದ್ಧವಾಗಿರುತ್ತೇವೆ, ಬದುಕು ಬಂಗಾರವಾಗುತ್ತದೆ. ನಮ್ಮ ಮನೆಯಲ್ಲಿ ಸಾಕುವ ಪ್ರಾಣಿಗಳನ್ನು ನಮ್ಮ ಮನೆಯ ಸದಸ್ಯರಂತೆ ನಾವು ಭಾವಿಸಿದ್ದೇವೆ. ನಮ್ಮ ಮನೆಯಲ್ಲಿ ಸೀಮಂತ ಮಾಡುತ್ತಿರುವುದರಿಂದ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ - ಮುದ್ದಗೆರೆ ಗ್ರಾಮಸ್ಥರ ಮೆಚ್ಚುಗೆ

ಮಾನವರಂತೆ ವಿಶಿಷ್ಟ ರೀತಿಯಲ್ಲಿ ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿ, ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!
ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿದ ಮುದ್ದುಗೆರೆದ ಮುದ್ದಗೆರೆ ಗ್ರಾಮಸ್ಥರು!
ಪ್ರಶಾಂತ್​ ಬಿ.
| Edited By: |

Updated on:Aug 14, 2023 | 12:30 PM

Share

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮುದ್ದಗೆರೆ ಗ್ರಾಮದ ಕುಟುಂಬವೊಂದು (muddagere villagers) ಗರ್ಭಿಣಿಗೆ (pregnant) ಸೀಮಂತ (seemantha) ಮಾಡುವ ರೀತಿ ಹಸುವಿಗೆ ವಿಶಿಷ್ಟ ರೀತಿಯಲ್ಲಿ ಸೀಮಂತ ನೆರವೇರಿಸಿ ಗಮನ ಸೆಳೆದಿದೆ. ಗ್ರಾಮದ ರಾಜಪ್ಪ ಎಂಬುವವರ ಮನೆಯಲ್ಲಿ ಈ ಸಂಭ್ರಮದ ಕಾರ್ಯ ನಡೆದಿದೆ. ಮಲೆನಾಡು ಗಿಡ್ಡ ಹಸುವಿಗೆ ಸೀಮಂತ ಮಾಡಿದ ಕುಟುಂಬಸ್ಥರು ಕೊಬ್ಬರಿ, ಬೆಲ್ಲ, ಹೂವು, ಹಣ್ಣು, ಕಲ್ಲುಸಕ್ಕರೆ, ಕರ್ಜೂರ, ದ್ರಾಕ್ಷಿ, ಗೋಡಂಬಿ, ಬಳೆ, ಅರಿಶಿಣ-ಕುಂಕುಮ, ಸೀರೆ ಇಟ್ಟು ವಿಶೇಷ ಪೂಜೆ‌ ನೆರವೇರಿಸಿತು. ಸದರಿ ಕುಟುಂಬಸ್ಥರು ಬಂಧು ಬಾಂದವರನ್ನ ಕರೆಸಿ ಗ್ರಾಮಸ್ಥರೆಲ್ಲರಿಗೂ ಅಡುಗೆ ಮಾಡಿಸಿ ಉಣಬಡಿಸಿದರು.

ರೈತರಿಗೆ ಸಾಕು ಪ್ರಾಣಿಗಳು ಮನೆಯ ಸದಸ್ಯರಿದ್ದಂತೆ. ಅವುಗಳನ್ನು ಚೆನ್ನಾಗಿ ನೋಡಿಕೊಂಡರೆ ನಾವು ಸಮೃದ್ಧವಾಗಿರುತ್ತೇವೆ, ಬದುಕು ಬಂಗಾರವಾಗುತ್ತದೆ. ನಮ್ಮ ಮನೆಯಲ್ಲಿ ಸಾಕುವ ಪ್ರಾಣಿಗಳನ್ನು ನಮ್ಮ ಮನೆಯ ಸದಸ್ಯರಂತೆ ನಾವು ಭಾವಿಸಿದ್ದೇವೆ. ನಮ್ಮ ಮನೆಯಲ್ಲಿ ಸೀಮಂತ ಮಾಡುತ್ತಿರುವುದರಿಂದ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

Also Read: ಚಿಕ್ಕಮಗಳೂರು: ವರ್ಷದಿಂದ ಗದ್ದೆಯಲ್ಲಿ ಮನೆ ಮಾಡಿ, ಬೆಚ್ಚಗೆ ಮಲಗಿದ್ದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ

ಹಸುವಿನ ಸೀಮಂತ ಮಾಡುತ್ತಿರುವುದು ವಿಶೇಷ ಮತ್ತು ವಿಶಿಷ್ಟವಾಗಿದೆ. ಇದೊಂದು ಮಾದರಿ ಕಾರ್ಯವಾಗಿದೆ. ಹೆಣ್ಣುಮಕ್ಕಳಿಗೆ ಮಾಡುವ ಸೀಮಂತ ಕಾರ್ಯದ ರೀತಿ ಮಾಡಿದ್ದೇವೆ. ಸಾಕು ಪ್ರಾಣಿಗಳನ್ನು ನಾವು ಗೌರವ ಮತ್ತು ಭಕ್ತಿಯಿಂದ ಕಾಣಬೇಕಾದದ್ದು ನಮ್ಮ ಧರ್ಮ ಎಂದು ಕುಟುಂಬಸ್ಥರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Mon, 14 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್