AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿವಾದ: ಮುಖ್ಯಮಂತ್ರಿ ಚಂದ್ರು, ಬಿವಿ ಶ್ರೀನಿವಾಸ್ ಪ್ರತಿಕ್ರಿಯೆ

Indira Canteen: ಹಿಂದುತ್ವದ ನಶೆ ತಲೆಗೇರಿದ್ದರಿಂದ ಹುಕ್ಕಾ ಬಾರ್ ಅಂತಾರೆ. ಜವಾಹರಲಾಲ್ ನೆಹರು ಬಗ್ಗೆ ಮಾತನಾಡುವ ಯೋಗ್ಯತೆ ಸಿ.ಟಿ. ರವಿಗೆ ಇದೆಯಾ? ನಾವು ಇಂದಿರಾ ಕ್ಯಾಂಟೀನ್ ಹೋರಾಟ ಮುಂದುವರಿಸ್ತೇವೆ ಎಂದು ಬಿ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿವಾದ: ಮುಖ್ಯಮಂತ್ರಿ ಚಂದ್ರು, ಬಿವಿ ಶ್ರೀನಿವಾಸ್ ಪ್ರತಿಕ್ರಿಯೆ
ಮುಖ್ಯಮಂತ್ರಿ ಚಂದ್ರು ಹಾಗೂ ಬಿವಿ ಶ್ರೀನಿವಾಸ್
TV9 Web
| Edited By: |

Updated on: Aug 14, 2021 | 3:46 PM

Share

ಕೋಲಾರ: ಆ ಕಾಲದಲ್ಲಿ ಹೆಸರು ಇಡೋವಾಗ್ಲೇ ಆಕ್ಷೇಪ ಮಾಡಬೇಕಿತ್ತು. ಈಗ ಹೆಸರು ಇಟ್ಟಾಗಿದೆ. ಇಟ್ಟ ಹೆಸರು ಅವತ್ತು ತಿರಸ್ಕಾರವಾಗಿಲ್ಲ. ಹೆಸರು ಇಟ್ಟ ಮೇಲೂ ಕಾಂಗ್ರೇಸ್ ಪಕ್ಷ ಬಿಟ್ಟು ಎಷ್ಟೋ ಪರ್ಯಾಯ ಪಕ್ಷಗಳು ಅಧಿಕಾರಿಕ್ಕೆ ಬಂದಿವೆ. ಬಿಜೆಪಿ ಸರ್ಕಾರವೂ ಸಹ ಅಧಿಕಾರಕ್ಕೆ ಬಂದಿತ್ತು. ನಮಗೆ ಇಷ್ಟ ಇಲ್ಲ ತೆಗೆದು ಹಾಕ್ತಿವಿ ಅಂತ ತೆಗೆದು ಹಾಕಬೇಕು. ಅದು ಬಿಟ್ಟು ಮಾತನಾಡುವಾಗ ಹೊಲಸು ಮಾತಗಳನ್ನು ಮಾತನಾಡಬಾರ್ದು ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಕೊಲಾರದಲ್ಲಿ ಅವರು ಇಂದು (ಆಗಸ್ಟ್ 14) ಪ್ರತಿಕ್ರಿಯೆ ನೀಡಿದ್ದಾರೆ.

ಒಂದಕ್ಕೊಂದು ಹೆಸರು ಈಗ ತಳುಕುಹಾಕಿಕೊಂಡು ಕೇಳಿಬರುತ್ತಿದೆ. ಅಟಲ್ ಬಿಹಾರಿ ವಾಜಪೇಯಿ, ಉಪಾದ್ಯಾಯರ ಹೆಸರುವರೆಗೂ ವಿಚಾರ ಹೋಯ್ತು. ಹಿಂದೆ ನಾವುಗಳು ಇಟ್ಟಿರುವ ಹೆಸರುಗಳು ಪೂರಕವಾಗಿಲ್ಲವೇ ಎಂದು ಪ್ರಶ್ನೆ ಇದೆ. ರಾಜಕಿಯವಾಗಿ ಇದನ್ನ ದಾಳ ಮಾಡಿಕೊಂಡು ಸಾರ್ವಜನಿಕರು ಅಸಹ್ಯ ಪಟ್ಟಕೊಳ್ಳುವ ರೀತಿ ವರ್ತಿಸಬೇಡಿ. ತೆಗೆದು ಹಾಕಬೇಕು ಎಂದ್ರೆ ಬೈ ನೇಮ್ ಇರೋದೆಲ್ಲಾ ತೆಗೆದು ಹಾಕಿ ಅದಕ್ಕೆ ಸಾರ್ವತ್ರಿಕವಾಗಿ ಹೆಸರುಗಳನ್ನ ಇಡಿ. ಇಲ್ಲದೆ ಇದ್ರೆ ಇರೋದನ್ನ ಬಿಟ್ಟು, ಮುಂದೆ ಹಾಗೋದಕ್ಕೆ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಿ ಎಂದು ಕೋಲಾರ ಪತ್ರಕರ್ತರ ಭವನದ ಬಳಿ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿ.ಟಿ. ರವಿಗೆ ಲಂಡನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಿದ್ಧ: ಬಿ.ವಿ. ಶ್ರೀನಿವಾಸ್ ‘ಇಂದಿರಾ’ ಬದಲು ಅನ್ನಪೂರ್ಣ ಕ್ಯಾಂಟೀನ್ ಮಾಡಲಿ. ಆದ್ರೆ ಮೊದಲು ಇಂದಿರಾ ಕ್ಯಾಂಟೀನ್ ಸರಿಯಾಗಿ ನಡೆಸಲಿ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಈಗ ಸಿ.ಟಿ. ರವಿ ನೆಹರು ಬಗ್ಗೆ ಉಡಾಫೆ ಮಾತನಾಡುತ್ತಾರೆ. ಅವರಿಗೆ ಇತಿಹಾಸದ ಪುಸ್ತಕ ಬೇಕಾದರೆ ನಾವೇ ಕೊಡ್ತೇವೆ. ಈ ರೀತಿಯಾಗಿ ಹೇಳಿಕೆಗಳನ್ನು ನೀಡುವವರು ಅರೆ ಹುಚ್ಚರು. ಅವರಿಗೆ ಬೇಕಾದರೆ ಯುವ ಕಾಂಗ್ರೆಸ್​ನಿಂದ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತೇವೆ. ಲಂಡನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಿದ್ಧ ಎಂದು ಶ್ರೀನಿವಾಸ್ ಕುಟುಕಿದ್ದಾರೆ.

ಹಿಂದುತ್ವದ ನಶೆ ತಲೆಗೇರಿದ್ದರಿಂದ ಹುಕ್ಕಾ ಬಾರ್ ಅಂತಾರೆ. ಜವಾಹರಲಾಲ್ ನೆಹರು ಬಗ್ಗೆ ಮಾತನಾಡುವ ಯೋಗ್ಯತೆ ಸಿ.ಟಿ. ರವಿಗೆ ಇದೆಯಾ? ನಾವು ಇಂದಿರಾ ಕ್ಯಾಂಟೀನ್ ಹೋರಾಟ ಮುಂದುವರಿಸ್ತೇವೆ ಎಂದು ಬಿ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ: ಗೋವಿಂದ ಕಾರಜೋಳ

TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್