AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲೇ ಇದ್ದುಬಿಟ್ರೆ ಕೊರೊನಾದಿಂದ ಅಲ್ಲ, ಹಸಿವಿನಿಂದ ಸಾಯ್ತೇವೆ: ಮಂಡ್ಯ ಮಹಿಳೆ ಅಳಲು

ಮಂಡ್ಯ: ನಾವು ಇಲ್ಲಿ ಮುಂಬೈನಲ್ಲಿಯೇ ಇದ್ದುಬಿಟ್ರೆ ಕೊರೊನಾ ಸೋಂಕಿನಿಂದ ಅಲ್ಲ, ಬದಲಿಗೆ ಹಸಿವಿನಿಂದ ಸಾಯುತ್ತೇವೆ ಎಂದು ಮಂಡ್ಯ ಮೂಲದ ಮಹಿಳೆಯೊಬ್ಬರು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ತವರು ಜಿಲ್ಲೆಯಾದ ಮಂಡ್ಯ ಜಿಲ್ಲೆಯ ಜನತೆಯಲ್ಲೂ ಅವರು ಒಂದು ಮನವಿಯನ್ನ ಮುಂದಿಟ್ಟಿದ್ದಾರೆ. ನಮ್ಮನ್ನು ರಾಜ್ಯಕ್ಕೆ ಬರಬೇಡಿ ಎಂದು ಹೇಳಿದರೆ ಹೇಗೆ? ನಿಮ್ಮ ಕುಟುಂಬದವರು ಇಲ್ಲಿ ಇದ್ದಿದ್ದರೆ ಹೀಗೆ ಮಾಡ್ತಿದ್ರಾ? ದಯವಿಟ್ಟು ನಾವು ನಮ್ಮೂರಿಗೆ ಬರಲು ಅವಕಾಶ ನೀಡಿ ಎಂದು ಸೌಮ್ಯ ರಾಣಿ ಎಂಬ ಹೆಸರಿನ ಆ […]

ಮುಂಬೈನಲ್ಲೇ ಇದ್ದುಬಿಟ್ರೆ ಕೊರೊನಾದಿಂದ ಅಲ್ಲ, ಹಸಿವಿನಿಂದ ಸಾಯ್ತೇವೆ: ಮಂಡ್ಯ ಮಹಿಳೆ ಅಳಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 1:47 PM

Share

ಮಂಡ್ಯ: ನಾವು ಇಲ್ಲಿ ಮುಂಬೈನಲ್ಲಿಯೇ ಇದ್ದುಬಿಟ್ರೆ ಕೊರೊನಾ ಸೋಂಕಿನಿಂದ ಅಲ್ಲ, ಬದಲಿಗೆ ಹಸಿವಿನಿಂದ ಸಾಯುತ್ತೇವೆ ಎಂದು ಮಂಡ್ಯ ಮೂಲದ ಮಹಿಳೆಯೊಬ್ಬರು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ತವರು ಜಿಲ್ಲೆಯಾದ ಮಂಡ್ಯ ಜಿಲ್ಲೆಯ ಜನತೆಯಲ್ಲೂ ಅವರು ಒಂದು ಮನವಿಯನ್ನ ಮುಂದಿಟ್ಟಿದ್ದಾರೆ.

ನಮ್ಮನ್ನು ರಾಜ್ಯಕ್ಕೆ ಬರಬೇಡಿ ಎಂದು ಹೇಳಿದರೆ ಹೇಗೆ? ನಿಮ್ಮ ಕುಟುಂಬದವರು ಇಲ್ಲಿ ಇದ್ದಿದ್ದರೆ ಹೀಗೆ ಮಾಡ್ತಿದ್ರಾ? ದಯವಿಟ್ಟು ನಾವು ನಮ್ಮೂರಿಗೆ ಬರಲು ಅವಕಾಶ ನೀಡಿ ಎಂದು ಸೌಮ್ಯ ರಾಣಿ ಎಂಬ ಹೆಸರಿನ ಆ ಕನ್ನಡತಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ನಾವು ಕೊರೊನಾ ಟೆಸ್ಟ್ ಮಾಡಿಸಿಕೊಂಡೇ ನಮ್ಮೂರಿಗೆ ಬರ್ತೀವಿ, ದಯವಿಟ್ಟು ನಮ್ಮ ಪರವಾಗಿರಿ ಎಂದೂ ವಾಟ್ಸಪ್​ ಗ್ರೂಪ್​ಗಳಲ್ಲಿ ಈ ಮಹಿಳೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಾವೇನು ಪಾಕಿಸ್ತಾನದವರಾ? ಕನ್ನಡಿಗರು ಎಂದು ಎದೆ ತಟ್ಟಿಕಂಡು ಹೇಳುತ್ತೇವೆ! ನಾವೇನು ಪಾಕಿಸ್ತಾನದವರಾ? ಎಲ್ಲೇ ಹೋದರು ನಾವು ಕನ್ನಡಿಗರು ಎಂದು ಎದೆ ತಟ್ಟಿಕಂಡು ಹೇಳುತ್ತೇವೆ. ಆದ್ರೆ ಮುಂಬೈ ಕನ್ನಡಿಗರನ್ನ ಕರ್ನಾಟಕ ಸರ್ಕಾರ ಮರೆತಿದೆ. ಇನ್ನು, ನಮ್ಮ ಊರಿನವರೇ ನಮ್ಮನ್ನ ಬರಬೇಡಿ ಬರಬೇಡಿ ಅಂತಿದ್ದಾರೆ. ಯಾರೋ ಮೂವರಿಗೆ ಸೋಂಕು ಬಂದ ತಕ್ಷಣ ನಮಗೆಲ್ಲರಿಗೂ ಬಂದಿದೆ ಅಂತಲ್ಲ. ಇದೇ ಸ್ಥಾನದಲ್ಲಿ ನಿಮ್ಮ ಮನೆಯ ಸದಸ್ಯರಿದ್ರೂ ಹೀಗೆ ಮಾತಾಡ್ತಿದ್ರಾ ? ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸ್ವಂತ ವಾಹನದಲ್ಲಿ‌ ನಮ್ಮ ಊರು ಸೇರಲು ಅವಕಾಶ ಕೊಡಿ: ನಾವೂ ಕೊರೋನಾ ಬಂದು ಸಾಯೋದಕ್ಕಿಂದ ಹಸಿವಿನಿಂದ ಸಾಯುತ್ತೇವೆ. ದಯವಿಟ್ಟು ನಮಗೆ ಊರಿಗೆ ಬರಲು ಅವಕಾಶ ಕೊಡಬೇಕು. ಸರ್ಕಾರ ನಮ್ಮ ಸಹಾಯಕಕ್ಕೆ ಬರಬೇಕು. ಸರ್ಕಾರ ಬಸ್ ವ್ಯವಸ್ಥೆ ಮಾಡದಿದ್ದರೂ ಪರವಾಗಿಲ್ಲ. ನಮ್ಮ ಸ್ವಂತ ವಾಹನಗಳಲ್ಲಿ‌ ನಾವು ನಮ್ಮ ಊರು ಸೇರಲು ಅವಕಾಶ ಕೊಡಬೇಕು ಎಂದು ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು