AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R.R.ನಗರದ ಬಹುಕೋಟಿ ನಕಲಿ ಕಡತ ಸೃಷ್ಟಿ ಪ್ರಕರಣ; ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌

ಶಾಸಕ ಮುನಿರತ್ನ ಪತ್ನಿ ಮಂಜುಳಾರ ಮನೆಯಲ್ಲಿ ಕಡತ ಪತ್ತೆಯಾಗಿತ್ತು. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಆದರೆ ಚಾರ್ಜ್ ಶೀಟ್ ವೇಳೆ ಮುನಿರತ್ನ, ಪತ್ನಿ ಹೆಸರು ಕೈಬಿಟ್ಟಿದ್ದರು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ದಾಖಲಾಗಿತ್ತು. ಸದ್ಯ ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ.

R.R.ನಗರದ ಬಹುಕೋಟಿ ನಕಲಿ ಕಡತ ಸೃಷ್ಟಿ ಪ್ರಕರಣ; ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌
ಮುನಿರತ್ನ
ಆಯೇಷಾ ಬಾನು
|

Updated on: Mar 10, 2021 | 3:42 PM

Share

ಬೆಂಗಳೂರು: R.R.ನಗರದ ಬಹುಕೋಟಿ ನಕಲಿ ಕಡತ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿ ಆರ್‌.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ. ಶಾಸಕ ಮುನಿರತ್ನ ಹೆಸರು ಕೈಬಿಟ್ಟಿದ್ದನ್ನು ಪ್ರಶ್ನಿಸಿ ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಶಾಸಕ ಮುನಿರತ್ನ ಪತ್ನಿ ಮಂಜುಳಾರ ಮನೆಯಲ್ಲಿ ಕಡತ ಪತ್ತೆಯಾಗಿತ್ತು. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಆದರೆ ಚಾರ್ಜ್ ಶೀಟ್ ವೇಳೆ ಮುನಿರತ್ನ, ಪತ್ನಿ ಹೆಸರು ಕೈಬಿಟ್ಟಿದ್ದರು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ದಾಖಲಾಗಿತ್ತು. ಸದ್ಯ ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ.

ಏನಿದು ಪ್ರಕರಣ? ಶಾಸಕ ಮುನಿರತ್ನ ಅವರ ಪತ್ನಿ ಹೆಸರಲ್ಲಿರುವ ಎಂದು ಹೇಳಲಾದ ವೈಯಾಲಿಕಾವಲ್​ನಲ್ಲಿರುವ ಖಾಸಗಿ ಕಟ್ಟಡದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಟ್ಟಡದಲ್ಲಿ ಬಿಬಿಎಂಪಿಗೆ ಸೇರಿದ ಹಲವು ಕಡತಗಳು ಪತ್ತೆಯಾಗಿದ್ದವು. ಈ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮುನಿರತ್ನ ಮತ್ತು ಅವರ ಪತ್ನಿ ವಿರುದ್ಧ FIR ದಾಖಲಿಸಿದ್ದರು. ಆದ್ರೆ ಚಾರ್ಜ್ ಶೀಟ್​ನಲ್ಲಿ ಮುನಿರತ್ನ ಮತ್ತು ಪತ್ನಿ ಮಂಜುಳಾರ ಹೆಸರು ಕೈಬಿಡಲಾಗಿತ್ತು. ಈ ರೀತಿ ಹೆಸರು ಕೈಬಿಟ್ಟಿದ್ದನ್ನು ಪ್ರಶ್ನಿಸಿ ವಕೀಲ ಎನ್.ಪಿ. ಅಮೃತೇಶ್ ಅರ್ಜಿ ಸಲ್ಲಿಸಿದ್ದರು. ಇದೀಗ ಅಮೃತೇಶ್​ರ ಅರ್ಜಿ ವಜಾಗೊಂಡಿದ್ದು ಮುನಿರತ್ನಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ.

ಇನ್ನು ಈ ಘಟನೆ ವೇಳೆ ಬಿಜೆಪಿ ಸದಸ್ಯರಾಗಿದ್ದ ರವೀಂದ್ರ, ನಾಗರಾಜು ಇನ್ನಿತರರು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಎಂದು ಆಗ್ರಹಿಸಿದ್ದರು. ಅಲ್ಲದೆ ಬಿಬಿಎಂಪಿ ಕಡತಗಳು ಸಿಕ್ಕ ಕಾರಣ ಅವರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂಬ ಕೂಗು ಕೇಳಿ ಬಂದಿತ್ತು.

ಇದನ್ನೂ ಓದಿ: ಮುನಿರತ್ನ ವೋಟರ್ ಐಡಿ ಸಂಗ್ರಹ ಆರೋಪ; ತನಿಖಾ ಲೋಪ ಪರಿಗಣಿಸಿ, ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸರಿಗೆ ಕೋರ್ಟ್ ಸೂಚನೆ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ