Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಮಾಜಿ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ, ತಲೆಮರೆಸಿಕೊಂಡ ಪರಮೇಶ್ವರ್ ನಾಯ್ಕ್ ಮಗ

ಕೊಲೆಗೆ ಸಂಬಂಧಿಸಿದಂತೆ ಶ್ರೀಧರ್ ಪತ್ನಿ ಶಿಲ್ಪಾ ಹಾಲೇಶ್ ಮತ್ತು ಪಿ.ಟಿ. ಭರತ್ ವಿರುದ್ದ  ತನ್ನ ಪತಿಗೆ ಜೀವ ಬೆದರಿಕೆ ಇತ್ತು ಎಂದು ಈ ಮುನ್ನ ದೂರು ನೀಡಿದ್ದರು. 

ಆರ್​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಮಾಜಿ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಆಪ್ತನ ಬಂಧನ, ತಲೆಮರೆಸಿಕೊಂಡ ಪರಮೇಶ್ವರ್ ನಾಯ್ಕ್ ಮಗ
ಬಂಧಿತ ಹಾಲೇಶ್
Follow us
TV9 Web
| Updated By: guruganesh bhat

Updated on:Jul 18, 2021 | 4:59 PM

ವಿಜಯನಗರ: ಆರ್​ಟಿಐ ಕಾರ್ಯಕರ್ತ ಟಿ.ಶ್ರೀಧರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಪಿ ಟಿ ಪರಮೇಶ್ವರ್ ನಾಯ್ಕ್​ ಆಪ್ತ ಎಚ್​.ಕೆ ಹಾಲೇಶ್ ಎಂಬುವವರನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಹಾಲೇಶ್ ಬಂಧನವಾಗುತ್ತಿದ್ದಂತೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ಮಗ ಭರತ್ ನಾಯ್ಕ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಸಂಬಂಧಿಸಿದಂತೆ ಶ್ರೀಧರ್ ಪತ್ನಿ ಶಿಲ್ಪಾ ಹಾಲೇಶ್ ಮತ್ತು ಪಿ.ಟಿ. ಭರತ್ ವಿರುದ್ದ  ತನ್ನ ಪತಿಗೆ ಜೀವ ಬೆದರಿಕೆ ಇತ್ತು ಎಂದು ಈ ಮುನ್ನ ದೂರು ನೀಡಿದ್ದರು.

ಆರ್​ಟಿಐ ಕಾರ್ಯಕರ್ತ (RTI Activist) ಶ್ರೀಧರ್​ ಕೊಲೆ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕುವ ಸಾಧ್ಯತೆ ಇದ್ದು, ಶ್ರೀಧರ್ ಪತ್ನಿ ಹಾಗೂ ತಾಯಿಯ ಹೇಳಿಕೆ ಇದೀಗ ಸಂಚಲನ ಮೂಡಿಸಿತ್ತು. ಶ್ರೀಧರ್ ಕೊಲೆಯ (Murder) ಹಿಂದೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್​ (P T Parameshwar Naik) ಕೈವಾಡ ಇದೆ ಎಂದು ಟಿವಿ9ಗೆ ಶ್ರೀಧರ್​ ಪತ್ನಿ ಶಿಲ್ಪಾ, ತಾಯಿ ಲಕ್ಷ್ಮೀದೇವಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಹೇಳಿಕೆ ನೀಡಿದ್ದರು. ನ್ಯಾಯಕ್ಕಾಗಿ ಹೋರಾಡುತ್ತಿದ್ದ ಶ್ರೀಧರ್​ಗೆ ಪ್ರಾಣ ಬೆದರಿಕೆ ಇತ್ತು. ಇದೇ ಕಾರಣಕ್ಕಾಗಿ ಅವರು ಸುಮಾರು 4 ದಿನ ಮನೆಯಲ್ಲಿ ಬಾಗಿಲು ಹಾಕಿಕೊಂಡಿದ್ದರು. ಆದರೆ, ನಿನ್ನೆ ವಾಕಿಂಗ್​ಗೆ ಹೋದಾಗ ಹತ್ಯೆ ಮಾಡಲಾಗಿದೆ. ಇದರಲ್ಲಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್​ ಕೈವಾಡ ಇದೆ ಎಂದು ಶ್ರೀಧರ್ ಪತ್ನಿ ಹಾಗೂ ತಾಯಿ ಗಂಭೀರ ಆರೋಪ ಹೊರಿಸಿದ್ದರು.

ನನ್ನ ಮಗ ಯಾವಾಗಲೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ. ಸಚಿವ ಆನಂದ ಸಿಂಗ್, ಉಚ್ಚಂಗಿದುರ್ಗದ ಕಲ್ಲು ಕ್ವಾರೆ ಬಗ್ಗೆ ಹೋರಾಟ ಮಾಡಿದ್ದ. ಆದರೆ, ಮಾಜಿ ಸಚಿವ ಪಿಟಿ ಪರಮೇಶ್ವರ ನಾಯ್ಕ್ ವಿರುದ್ಧ ದೂರು ಸಲ್ಲಿಸಿದ್ದಕ್ಕಾಗಿಯೇ ನನ್ನ ಮಗನ ಕೊಲೆ ಆಗಿದೆ ಎಂದು ಶ್ರೀಧರ್ ತಾಯಿ ಲಕ್ಷ್ಮೀದೇವಿ ಆರೋಪಿಸಿದ್ದಾರೆ. ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ದೂರು ನೀಡಿದ ನಂತರ ಇದೇ ವಿಚಾರಕ್ಕೆ ಪ್ರಾಣ ಭಯ ಎಂದು ಶ್ರೀಧರ್ ಹೇಳಿದ್ದರು. ಸುಮಾರು 4 ದಿನ ಮನೆಯಲ್ಲಿ ಬಾಗಿಲು ಹಾಕಿಕೊಂಡಿದ್ದರು. ನಿನ್ನೆ ತಾನೇ ವಾಕಿಂಗ್​ಗೆ ಹೋಗಿದ್ದ ವೇಳೆ ಹತ್ಯೆ ಮಾಡಿದ್ದಾರೆ. ನಮ್ಮ ಮನೆಯಲ್ಲಿರುತ್ತಿದ್ದ ವಾಗೀಶ್ ಎಂಬಾತ ಇದರಲ್ಲಿ ಪಾಲ್ಗೊಂಡಿದ್ದಾನೆ ಎಂದು ಪತ್ನಿ ಶಿಲ್ಪಾ ಹೇಳಿದ್ದರು.

ನನ್ನ ಪತಿಗೆ ಪ್ರಾಣ ಭಯವಿತ್ತು. ಆದರೆ, ನಿನಗೆ ಎಲ್ಲವನ್ನೂ ಹೇಳುವುದು ಬೇಡ, ಹೆದರಿಕೊಳ್ಳುತ್ತಿ ಎನ್ನುತ್ತಿದ್ದರು. ನನಗೇನಾದರೂ ಆದರೆ ಮಕ್ಕಳನ್ನ ಸಲಹುವ ಕೆಲಸ ನಿನ್ನದೇ ಎನ್ನುತ್ತಿದ್ದರು. ಇದೀಗ ಹತ್ಯೆ ಮಾಡಿಬಿಟ್ಟಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿದ್ದ ಕಾರಣಕ್ಕೆ ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಪತ್ನಿ ಶಿಲ್ಪಾ ಕಣ್ಣೀರು ಹಾಕಿದ್ದರು.

ವಿಜಯನಗರ ಜಿಲ್ಲೆ ಹರಪನಹಳ್ಳಿ ಎಡಿಬಿ ಕಾಲೇಜು ಬಳಿ ದುಷ್ಕೃತ್ಯ ನಡೆದಿದ್ದು, ಆರ್​ಟಿಐ ಕಾರ್ಯಕರ್ತ ಶ್ರೀಧರ್​ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ನಿನ್ನೆ (ಜುಲೈ 16) ಈ ಘಟನೆ ಬಗ್ಗೆ ವರದಿಯಾಗಿದ್ದು, ಎಡಿಬಿ ಕಾಲೇಜು ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ದಾಳಿ ಮಾಡಿದ್ದ ದುಷ್ಕರ್ಮಿಗಳು ವಾಲ್ಮೀಕಿ ನಗರದ ನಿವಾಸಿ ಶ್ರೀಧರ್​ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದೀಗ ಈ ದುಷ್ಕೃತ್ಯದ ಹಿಂದೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಕುಮ್ಮಕ್ಕು ಇದೆ ಎನ್ನುವ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: 

ರಾಜ್ಯದಲ್ಲಿ ಬೆಚ್ಚಿಬೀಳಿಸುವ ಕೃತ್ಯ; ಆರ್​ಟಿಐ ಕಾರ್ಯಕರ್ತನ ಕೈ, ಕಾಲು ಕಟ್ ಮಾಡಿ ಕೌರ್ಯ ಮೆರೆದ ದುಷ್ಕರ್ಮಿಗಳು

 ಸಾರ್ವಜನಿಕವಾಗಿಯೇ ಬಾಯ್​ಫ್ರೆಂಡ್​ಗೆ ಕಿಸ್​ ಮಾಡಿದ ಶ್ರುತಿ ಹಾಸನ್​; ವೈರಲ್​ ಆಯ್ತು ಫೋಟೋ

(Murder case of RTI activist Sridhar Police Arrest former minister PT Parameshwar Naiks friend )

Published On - 4:42 pm, Sun, 18 July 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್