AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಶಾಸಕರ ಕಚೇರಿ ಬಳಿ ವೃದ್ಧನ ಹತ್ಯೆ, ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಹಂತಕ!

ಚಾಮರಾಜಪೇಟೆ 4ನೇ ಕ್ರಾಸ್​ ಬಳಿಯ ಶಾಸಕರ ಕಚೇರಿ ಸಮೀಪವಿರುವ ಕಿಂಗ್ಸ್​ ಎನ್​ಕ್ಲೇವ್​ ಅಪಾರ್ಟ್​​ಮೆಂಟ್​​ನಲ್ಲಿ ನಿನ್ನೆ ರಾತ್ರಿ ವೃದ್ಧರೊಬ್ಬರ ಕೊಲೆ ನಡೆದಿದ್ದು, ಶಂಕಿತ ಆರೋಪಿ ಜೈಪುರಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

Bengaluru News: ಶಾಸಕರ ಕಚೇರಿ ಬಳಿ ವೃದ್ಧನ ಹತ್ಯೆ, ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಹಂತಕ!
ಕೊಲೆಯಾದ ಜುಗ್ಗರಾಜ್, ಮನೆಯವರ ಆಕ್ರಂದನ
TV9 Web
| Updated By: Rakesh Nayak Manchi|

Updated on:May 25, 2022 | 2:16 PM

Share

ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ವೃದ್ಧೊಬ್ಬರ ಭೀರಕ ಕೊಲೆ (Murder)ಯಾದ ಘಟನೆ ನಡೆದಿದೆ. ಚಾಮರಾಜಪೇಟೆ 4ನೇ ಕ್ರಾಸ್​ ಬಳಿಯ ಶಾಸಕರ ಕಚೇರಿ ಸಮೀಪವಿರುವ ಕಿಂಗ್ಸ್​ ಎನ್​ಕ್ಲೇವ್​ ಅಪಾರ್ಟ್​​ಮೆಂಟ್​​ನಲ್ಲಿ ಜುಗ್ಗರಾಜ್ ಜೈನ್(77) ಎಂಬವರ ಭೀಕರ ಹತ್ಯೆ ನಡೆದಿದೆ. ದೀಪಂ ಎಲೆಕ್ಟ್ರಿಕಲ್ಸ್ ಎಂಬ ಅಂಗಡಿ ಇಟ್ಟುಕೊಂಡಿರುವ ಜುಗ್ಗರಾಜ್, ತನ್ನ ಮನೆಯಲ್ಲಿ ಅಂಗಡಿ ಕೆಲಸಗಾರನೊಂದಿಗೆ ಇದ್ದರು. ಹೀಗಾಗಿ ಕೆಲಸಗಾರನೇ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜುಗ್ಗರಾಜ್ ಜೈನ್​ ತನ್ನ ಮಗನೊಂದಿಗೆ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಅಲ್ಲದೆ, ಮಗ ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ. ಮಗನ ಪತ್ನಿ ತಾಯಿ ಮನೆಗೆ ತೆರಳಿದ್ದರು. ಹೀಗಾಗಿ ಅಂಗಡಿ ಕೆಲಸಗಾರ ಹಾಗೂ ಜುಗ್ಗರಾಜ್ ಇಬ್ಬರೆ ರಾತ್ರಿ ಮನೆಯಲ್ಲಿದ್ದರು. ಇಂದು ಬೆಳಗ್ಗೆ ಸಮಯ ಕಳೆದರೂ ಯಾಕೆ ಅಂಗಡಿ ತೆರೆದಿಲ್ಲ ಎಂದು ಮೊಮ್ಮಗ ಮನೆಗೆ ತೆರಳಿದ್ದಾನೆ. ಈ ವೇಳೆ ಜುಗ್ಗರಾಜು ಅವರ ಕೊಲೆ ನಡೆದಿರುವುದು ತಿಳಿದುಬಂದಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ಅಧಿಕಾರಿಗಳೂ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಟೆಕ್ಸಾಸ್​ ಶಾಲೆಯಲ್ಲಿ ಗುಂಡಿನ ದಾಳಿ: 19 ಮಕ್ಕಳು ಸೇರಿ 21 ಮುಗ್ಧರ ಹತ್ಯೆ, ಶೋಕಾಚರಣೆಗೆ ಅಧ್ಯಕ್ಷ ಜೋ ಬೈಡೆನ್ ಸೂಚನೆ

ಅಂಗಡಿ ಕೆಲಸಗಾರನೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಆರೋಪಿ ತನ್ನ ಊರು ಜೈಪುರಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ದುಷ್ಕೃತ್ಯ ಎಸಗಿದ ನಂತರ ಹಂತಕ ಮನೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾನೆ.

ಅಬಕಾರಿ ಪೊಲೀಸರ ಮೇಲೆ ದಾಳಿ ಪ್ರಕರಣ, ಐವರು ಅರೆಸ್ಟ್

ಯಾದಗಿರಿ: ನಕಲಿ ಮದ್ಯ ಸಾಗಾಟ ಹಿನ್ನಲೆ ದಾಳಿ ಮಾಡಿದ್ದ ಅಬಕಾರಿ ಇಲಾಖೆ‌ ಪೊಲೀಸರ (Excise police) ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಚಂದಪ್ಪ, ನಾನಾಗೌಡ, ನಾಗಪ್ಪ, ಮುದಕಪ್ಪ, ಮಾನಪ್ಪ ಎಂಬ ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  

ಇದನ್ನೂ ಓದಿ: Crime News: ತಂದೆ ಮೇಲಿನ ದ್ವೇಷಕ್ಕೆ ಎರಡೂವರೆ ವರ್ಷದ ಬಾಲಕನ ಕೊಲೆ ಮಾಡಿದ ಪಾಪಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಕಲಿ ಮದ್ಯ ಸಂಗ್ರಹ ಹಾಗೂ ಸಾಗಾಟದ ಬಗ್ಗೆ ಮಾಹಿತಿ ತಿಳಿದ ಶಹಾಪುರ ವಿಭಾಗದ ಅಬಕಾರಿ ಇನ್ಸ್ಪೆಕ್ಟರ್ ವಿಜಯ ಕುಮಾರ್‌ ಮತ್ತು ಸಿಬ್ಬಂದಿ ಮೇ 19ರಂದು ಕಾರ್ಯಾಚರಣೆ ನಡೆಸಿದ್ದರು. ನಕಲಿ ಮದ್ಯೆ ಮಾರಾಟ‌ ಮಾಡುತ್ತಿದ್ದ ಆರೋಪಿ ಹನುಮಂತ್ರಾಯನನ್ನು ಬಂಧಿಸಿ ಕರೆದೊಯ್ಯುವಾಗ 40ಕ್ಕೂ ಹೆಚ್ಚು ಮಂದಿ ಇದ್ದ ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಹಲ್ಲೆ ನಡೆಸಿತ್ತು. ಈ ವೇಳೆ ಆರೋಪಿ ತಪ್ಪಿಸಿಕೊಂಡಿದ್ದನು. ಘಟನೆ ನಡೆದ ಮಾರನೇ ದಿನ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನಿನ್ನೆ ಐವರನ್ನು ಬಂಧಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Wed, 25 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ