AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ಮಡುವಿನಲ್ಲಿ ಮಹಿಳೆ ಶವ ಪತ್ತೆ, ಕೌಟುಂಬಿಕ ಕಲಹವೇ 12 ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡ್ತಾ?

ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡ್ತಾ ಬ್ಯೂಟಿ ಪಾರ್ಲರ್ ಇಟ್ಕೊಂಡಿದ್ದ ಆಕೆಗೆ ಆತನ ಪರಿಚಯ ಆಗಿತ್ತು. ಪರಿಚಯ ಪ್ರೀತಿಗೆ ತಿರುಗಿ ಹನ್ನೆರಡು ವರ್ಷಗಳ ಹಿಂದೆ ಅವರಿಬ್ಬರು ಮದುವೆ ಆಗಿದ್ರು. ಮದುವೆ ನಂತರದಲ್ಲಿ ಸುಂದರ ಸಂಸಾರದ ಪ್ರತೀಕವಾಗಿ ಇಬ್ಬರು ಮಕ್ಕಳು ಸಹ ಇದ್ರು. ಆದ್ರೆ ಅದೇನಾಗಿತ್ತೋ ಏನೋ ಆಕೆ ರಕ್ತದ‌ ಮಡುವಿನಲ್ಲಿ ಬಿದ್ದು ಹೆಣವಾಗಿ ಹೋಗಿದ್ದಾಳೆ.

ರಕ್ತದ ಮಡುವಿನಲ್ಲಿ ಮಹಿಳೆ ಶವ ಪತ್ತೆ, ಕೌಟುಂಬಿಕ ಕಲಹವೇ 12 ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡ್ತಾ?
ನೇತ್ರಾವತಿ ಹುಲಗಮ್ಮನವರ ಮತ್ತು ನವೀನ ಹುಲಗಮ್ಮನವರ
ಆಯೇಷಾ ಬಾನು
| Edited By: |

Updated on:Nov 30, 2020 | 8:26 AM

Share

ಹಾವೇರಿ: ಜಿಲ್ಲೆಯ ರಾಣೆಬೆನ್ನೂರಿನ ಮಾರುತಿ ನಗರದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡ್ತಾ ಬ್ಯೂಟಿ ಪಾರ್ಲರ್ ಇಟ್ಕೊಂಡಿದ್ದ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೊಂಕೇರಿ ಗ್ರಾಮದ ನಿವಾಸಿ ನೇತ್ರಾವತಿ ಹುಲಗಮ್ಮನವರ. ಹನ್ನೆರಡು ವರ್ಷಗಳ ಹಿಂದೆ ನೇತ್ರಾವತಿ ಬೆಂಗಳೂರಿನ ಗಾರ್ಮೆಂಟ್ಸ್ ಒಂದ್ರಲ್ಲಿ ಕೆಲಸ‌ ಮಾಡ್ತಿದ್ಲಂತೆ. ಜೊತೆಗೆ ಬ್ಯೂಟಿ ಪಾರ್ಲರ್ ಕೂಡ ನಡೆಸ್ತಿದ್ಲಂತೆ. ಆಗ ಅದ್ಹೇಗೋ ರಾಣೆಬೆನ್ನೂರಿನ ನವೀನ ಹುಲಗಮ್ಮನವರ ಎಂಬಾತನ ಜೊತೆಗೆ ಪರಿಚಯ ಆಗಿತ್ತು.

ಪರಿಚಯ ಪ್ರೀತಿಗೆ ತಿರುಗಿ ಇಬ್ಬರೂ ಹನ್ನೆರಡು ವರ್ಷಗಳ ಹಿಂದೆ ಮದುವೆ ಮಾಡಿಕೊಂಡಿದ್ರು. ಸುಂದರ ಸಂಸಾರದ ಪ್ರತೀಕವಾಗಿ ಇಬ್ಬರು ಮಕ್ಕಳಿದ್ದಾರೆ. ಆದ್ರೆ ಅದ್ಯಾಕೋ ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಕಲಹ ಶುರುವಾಗಿತ್ತಂತೆ. ಆಗ ರಾಜಿ ಪಂಚಾಯ್ತಿ ಮಾಡಿ ಸರಿ ಮಾಡೋಣ ಅಂತಾ ನೇತ್ರಾವತಿ ಮನೆಯವರು ತಿಳಿಸಿದ್ರಂತೆ. ಆದ್ರೆ ಮರುದಿನವೆ ಮಗಳು ಸಾವನ್ನಪ್ಪಿದ್ದಾಳೆ ಅನ್ನೋ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ.

ರಕ್ತದ‌ ಮಡುವಿನಲ್ಲಿ ಮಗಳನ್ನು ನೋಡಿದ ತಾಯಿ ಆಕ್ರಂದನ: ನೇತ್ರಾವತಿ ರಕ್ತದ‌ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾಳೆ ಅಂತಾ ನೇತ್ರಾವತಿಯ ಪತಿ ನವೀನನ ಗೆಳೆಯ ವಿಷಯ ಮುಟ್ಟಿಸಿದ್ನಂತೆ. ಮನೆಯವರು ರಾಣೆಬೆನ್ನೂರಿನ ಮಗಳ ಮನೆಗೆ ದಾವಿಸಿ ಬಂದು ನೋಡಿದ್ದಾರೆ. ಮಗಳ ಮನೆಯ ಬಾಗಿಲು ತೆಗೆದು ಒಳಗೆ ಹೋಗ್ತಿದ್ದಂತೆ ಮಗಳು ರಕ್ತಸಿಕ್ತವಾಗಿ ಬಿದ್ದಿರೋದು ತಾಯಿಯನ್ನ ಕಂಗಾಲಾಗಿಸಿದೆ.

ನೇತ್ರಾವತಿಯ ಪತಿ ನವೀನನೆ ಪತ್ನಿಯನ್ನ ಕುಡುಗೋಲಿನಿಂದ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರಾಣೆಬೆನ್ನೂರು ನಗರ ಠಾಣೆ ಪಿಎಸ್ಐ ಪ್ರಭು ಕೆಳಗಿನಮನಿ ಪರಿಶೀಲನೆ ನಡೆಸಿದ್ರು. ನಂತರ ಎಸ್ಪಿ ಕೆ.ಜಿ.ದೇವರಾಜ ಹಾಗೂ ಸಿಪಿಐ ಗೌಡಪ್ಪಗೌಡ ಕೂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ರು.

ಪ್ರೀತಿಸಿ‌ ಮದುವೆಯಾಗಿ ಹನ್ನೆರಡು ವರ್ಷಗಳ ಕಾಲ ಆಕೆಯೊಂದಿಗೆ ಸಂಸಾರ‌‌ ಮಾಡಿ ಆಕೆಯನ್ನ ಹತ್ಯೆ ಮಾಡಿದ್ದಾನೆ ಅನ್ನೋ ಸುದ್ದಿ ಇಡಿ ನಗರದ ತುಂಬ ಹಬ್ಬಿದೆ. ಪೊಲೀಸರು ಕೂಡ ನೇತ್ರಾವತಿಯ ಪತಿ ನವೀನನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಒಟ್ನಲ್ಲಿ ಪ್ರಕರಣದ‌ ಕುರಿತ ತನಿಖೆ ನಂತರವಷ್ಟೆ ನೇತ್ರಾವತಿಯ ಹತ್ಯೆಗೆ ನಿಜವಾದ ಕಾರಣ ಏನು ಅನ್ನೋದು ಗೊತ್ತಾಗಲಿದೆ.

Published On - 8:08 am, Mon, 30 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?