AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಮಠ ಕೇವಲ ವೀರಶೈವ ಲಿಂಗಾಯತ ಸಮಾಜಕ್ಕೆ ಸೀಮಿತ ಅಲ್ಲ: ಅನ್ಯವರ್ಗದವರಿಗೂ ಅವಕಾಶ ಕೊಡಿ: ಬಿ.ಕಾಂತರಾಜ್

ಮಠಕ್ಕೆ ನಿರಂತರವಾಗಿ ಒಂದೇ ಸಮುದಾಯದ ಸ್ವಾಮೀಜಿ ನೇಮಕ ಏಕೆ? ಬೇರೆ ಶೂದ್ರ ಸಮುದಾಯದವರು ಏಕೆ ಸ್ವಾಮೀಜಿ ಆಗಬಾರದು. ಸರ್ವ ಸಮಾಜದವರನ್ನು ಒಳಗೊಂಡ 'ಶ್ರೀ ಮುರುಘಾ ಪರಂಪರೆ ಕಲ್ಯಾಣ ಸಮಿತಿ' ರಚಿಸಿ ಹೋರಾಡುತ್ತೇವೆ.

ಮುರುಘಾಮಠ ಕೇವಲ ವೀರಶೈವ ಲಿಂಗಾಯತ ಸಮಾಜಕ್ಕೆ ಸೀಮಿತ ಅಲ್ಲ: ಅನ್ಯವರ್ಗದವರಿಗೂ ಅವಕಾಶ ಕೊಡಿ: ಬಿ.ಕಾಂತರಾಜ್
ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಪತ್ರಿಕಾಗೋಷ್ಠಿ
TV9 Web
| Edited By: |

Updated on:Oct 01, 2022 | 10:27 AM

Share

ಚಿತ್ರದುರ್ಗ: ಮುರುಘಾಮಠ ಶೂನ್ಯ ಪೀಠ ಪರಂಪರೆಯ ಮಠ. ಕೇವಲ ವೀರಶೈವ ಲಿಂಗಾಯತ ಸಮಾಜಕ್ಕೆ ಸೀಮಿತ ಬೇಡ. ನಮ್ಮ ನಾಯಕ ಸಮುದಾಯದವರಿಗೂ ಅವಕಾಶ ನೀಡಿ ಎಂದು ನಾಯಕ ಸಮುದಾಯದ ಮುಖಂಡ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಮುರುಘಾಮಠ ಸರ್ವ ಸಮುದಾಯದ ಭಕ್ತರನ್ನು ಹೊಂದಿದೆ. ಶೂದ್ರ ಸಮಾಜದ ಅಲ್ಲಮಪ್ರಭು ಶೂನ್ಯ ಪೀಠದ ಪ್ರಥಮ ಅಧ್ಯಕ್ಷರಾಗಿದ್ದರು. ವೀರಶೈವ ಲಿಂಗಾಯತ ಸಮಾಜದವರಿಂದ ಮುರುಘಾ ಮಠ ವಶಕ್ಕೆ ಪಡೆಯಲು ಹೊರಟಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯ ಇದಕ್ಕೆ‌ ಮನ್ನಣೆ ನೀಡಬಾರದು. ಹೊಸ ಸ್ವಾಮೀಜಿ ನೇಮಕಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಮುರುಘಾಮಠವನ್ನು ಭರಮಣ್ಣ ಮಠ ಕಟ್ಟಿಸಿಕೊಟ್ಟಿದ್ದಾರೆ. ಕೆಲವರು ಸಂದರ್ಭ ಸೃಷ್ಟಿಸಿ ಸ್ವಾಮೀಜಿ ಬದಲಾವಣೆಗೆ ಹೊರಟಿದ್ದಾರೆ. ಹಿಂದುಳಿದ, ದಲಿತ ಸಮುದಾಯದವರಿಗೆ ಸ್ವಾಮೀಜಿ ಮಾಡಬೇಕು. ಇಲ್ಲವೆಂದರೆ ‘ಶ್ರೀಮುರುಘಾ ಪರಂಪರೆ ಕಲ್ಯಾಣ ಸಮಿತಿ’ ರಚಿಸಿ ಹೋರಾಡುತ್ತೇವೆ ಎಂದು ಬಿ.ಕಾಂತರಾಜ್ ಎಚ್ಚರಿಕೆ ನೀಡಿದರು.

ಒಂದೇ ಸಮುದಾಯದ ಸ್ವಾಮೀಜಿ ನೇಮಕ ಏಕೆ?

ಮಠಕ್ಕೆ ನಿರಂತರವಾಗಿ ಒಂದೇ ಸಮುದಾಯದ ಸ್ವಾಮೀಜಿ ನೇಮಕ ಏಕೆ? ಬೇರೆ ಶೂದ್ರ ಸಮುದಾಯದವರು ಏಕೆ ಸ್ವಾಮೀಜಿ ಆಗಬಾರದು. ಸರ್ವ ಸಮಾಜದವರನ್ನು ಒಳಗೊಂಡ ‘ಶ್ರೀ ಮುರುಘಾ ಪರಂಪರೆ ಕಲ್ಯಾಣ ಸಮಿತಿ’ ರಚಿಸಿ ಹೋರಾಡುತ್ತೇವೆ. ಮುರುಘಾಶ್ರೀ ಬದಲಾಯಿಸಬೇಕು ಎಂಬುದು ನಮ್ಮ ಅಭಿಪ್ರಾಯ ಅಲ್ಲ. ಕೆಲವರು ಸಂದರ್ಭ ಸೃಷ್ಠಿಸಿ ಸ್ವಾಮೀಜಿ ಬದಲಾವಣೆಗೆ ಹೊರಟಿದ್ದಾರೆ. ಹೊಸ ಸ್ವಾಮೀಜಿ ಮಾಡುವುದಾದರೆ ಶೂದ್ರ ಸಮುದಾಯದವರಿಗೆ ಮಾಡಬೇಕು. ಹಿಂದುಳಿದ, ದಲಿತ ಸಮುದಾಯದವರಿಗೆ ಸ್ವಾಮೀಜಿ ಮಾಡಬೇಕು. ಬಸವತತ್ವ ಪಾಲಿಸಿ ನಿಜವಾದ ಬಸವತತ್ವ ಅನುಸರಿಸಿ ಎಂದು ಬಿ.ಕಾಂತರಾಜ್ ಕಿಡಿಕಾರಿದರು.

ಸರ್ಕಾರಕ್ಕೆ ಮನವಿ ಸಲ್ಲಿಸಲು ಭಕ್ತರ ಸಭೆ ನಿರ್ಧಾರ

ಪೊಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡಬೇಕು ಎಂದು ಮನವಿ ಸಲ್ಲಿಸಲು ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಸೆ. 29 ರಂದು ನಡೆದಿದ್ದ ಸಭೆ ನಿರ್ಧರಿಸಿತ್ತು. ಪ್ರಸ್ತುತ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೀಠಾಧ್ಯಕ್ಷರ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಿದೆ. ಮಠದ ಧಾರ್ಮಿಕ, ಆಡಳಿತಾತ್ಮಕ ಚಟುವಟಿಕೆಗೆ ಅಡೆತಡೆ ಆಗಿದೆ. ಇಂಥ ಸಂದರ್ಭದಲ್ಲಿ ಹೊಸ ಪೀಠಾಧ್ಯಕ್ಷರ ನೇಮಕ ಅಗತ್ಯವಾಗಿದೆ. ಸರ್ಕಾರವು ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಹಲವು ಅಭಿಪ್ರಾಯಪಟ್ಟಿದ್ದರು.

ಸಭೆಯ ನಂತರ ಮಾತನಾಡಿದ್ದ ಏಕಾಂತಯ್ಯ, ಸರ್ಕಾರ ಮತ್ತು ನ್ಯಾಯಾಲಯಕ್ಕೆ ಹೊಸ ಪೀಠಾಧ್ಯಕ್ಷೆ ಬಗ್ಗೆ ತೀರ್ಮಾನ ಮಾಡಲು ಅಧಿಕಾರವಿದೆ. ಕಾನೂನಾತ್ಮಕ ಅಥವಾ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಯನ್ನು ಮುಖತಃ ಭೇಟಿ ಮಾಡಿ ಪರಿಸ್ಥಿತಿ ವಿವರಿಸಲು ತೀರ್ಮಾನಿಸಿದ್ದೇವೆ. ಈಗಿನ ಪೀಠಾದ್ಯಕ್ಷರನ್ನು ವಜಾಗೊಳಿಸಿ ಹೊಸಬರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:23 am, Sat, 1 October 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ