AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ

ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು - ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ
ಪ್ರಹ್ಲಾದ್​ ಜೋಶಿ ಭೇಟಿ ಮಾಡಿದ ನಿರಾಣಿ
ರಾಜೇಶ್ ದುಗ್ಗುಮನೆ
|

Updated on:Feb 06, 2021 | 9:59 PM

Share

ಬೆಂಗಳೂರು: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ ದಂಡದ ರೂಪದಲ್ಲಿ ಕಳೆದ ಆರು ವರ್ಷಗಳಿಂದ ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿ ನಿಧಿಯನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪಡೆಯಲು ಕಾನೂನಿನ ನೆರವು ನೀಡಬೇಕೆಂದು ಸಚಿವ ಮುರುಗೇಶ್ ನಿರಾಣಿ ಅವರು, ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಶನಿವಾರ ಬೆಂಗಳೂರಿನ ಬಿಜೆಪಿ ಕಚೇರಿಯನ್ನು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ ಗಣಿ ಮತ್ತು ಭೂ‌ ವಿಜ್ಞಾನ ಸಚಿವ ನಿರಾಣಿ ಮಾತುಕತೆ ನಡೆಸಿದ್ದಾರೆ.

ಕಬ್ಬಿಣದ ಅದಿರು ಗಣಿಗಳಿಂದ ದಂಡ ಮತ್ತು ಲೆವಿ ರೂಪದಲ್ಲಿ 18,000 ಕೋಟಿ ರೂಪಾಯಿಯನ್ನು ಕಳೆದ ಆರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೂಲಕ ಸಂಗ್ರಹಿಸಲಾಗಿದೆ. ಸಂಗ್ರಹವಾದ ನಿಧಿಯನ್ನು ರಾಜ್ಯದ ಬೊಕ್ಕಸಕ್ಕೆ ವರ್ಗಾಯಿಸಲು ಕಾನೂನು ನೆರವು ನೀಡುವಂತೆ ಕೋರಿದರು.

ಇದೇ ವೇಳೆ ನಿರಾಣಿ ಅವರು,ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು – ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು. ಇದು ದೀರ್ಘಾವಧಿಯ ಬೇಡಿಕೆಯಾಗಿದ್ದು, ಆದಷ್ಟು ಬೇಗ ಸೂಕ್ತವಾದ ನಿರ್ಧಾರ ತೆಗೆದುಕೊಂಡರೆ, ಹೆಚ್ಚಿನ ಅನುಕೂಲವಾಗಲಿದೆ ಜೋಶಿ ಅವರಿಗೆ ನಿರಾಣಿಯವರು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಪ್ರಹ್ಲಾದ್ ಜೋಶಿ,ಈ ವಿಷಯದ ಕುರಿತು ಹೆಚ್ಚಿನ ಚರ್ಚೆಗಾಗಿ ದೆಹಲಿಗೆ ಬರುವಂತೆ ನಿರಾಣಿಯವರಿಗೆ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲುಪುಡಿ ಘಟಕ-ಕಲ್ಲು ಗಣಿಗಾರಿಕೆ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸ್ಪಷ್ಟನೆ

Published On - 9:59 pm, Sat, 6 February 21

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ