AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ

ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು - ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ
ಪ್ರಹ್ಲಾದ್​ ಜೋಶಿ ಭೇಟಿ ಮಾಡಿದ ನಿರಾಣಿ
Follow us
ರಾಜೇಶ್ ದುಗ್ಗುಮನೆ
|

Updated on:Feb 06, 2021 | 9:59 PM

ಬೆಂಗಳೂರು: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ ದಂಡದ ರೂಪದಲ್ಲಿ ಕಳೆದ ಆರು ವರ್ಷಗಳಿಂದ ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿ ನಿಧಿಯನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪಡೆಯಲು ಕಾನೂನಿನ ನೆರವು ನೀಡಬೇಕೆಂದು ಸಚಿವ ಮುರುಗೇಶ್ ನಿರಾಣಿ ಅವರು, ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಶನಿವಾರ ಬೆಂಗಳೂರಿನ ಬಿಜೆಪಿ ಕಚೇರಿಯನ್ನು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ ಗಣಿ ಮತ್ತು ಭೂ‌ ವಿಜ್ಞಾನ ಸಚಿವ ನಿರಾಣಿ ಮಾತುಕತೆ ನಡೆಸಿದ್ದಾರೆ.

ಕಬ್ಬಿಣದ ಅದಿರು ಗಣಿಗಳಿಂದ ದಂಡ ಮತ್ತು ಲೆವಿ ರೂಪದಲ್ಲಿ 18,000 ಕೋಟಿ ರೂಪಾಯಿಯನ್ನು ಕಳೆದ ಆರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೂಲಕ ಸಂಗ್ರಹಿಸಲಾಗಿದೆ. ಸಂಗ್ರಹವಾದ ನಿಧಿಯನ್ನು ರಾಜ್ಯದ ಬೊಕ್ಕಸಕ್ಕೆ ವರ್ಗಾಯಿಸಲು ಕಾನೂನು ನೆರವು ನೀಡುವಂತೆ ಕೋರಿದರು.

ಇದೇ ವೇಳೆ ನಿರಾಣಿ ಅವರು,ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು – ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು. ಇದು ದೀರ್ಘಾವಧಿಯ ಬೇಡಿಕೆಯಾಗಿದ್ದು, ಆದಷ್ಟು ಬೇಗ ಸೂಕ್ತವಾದ ನಿರ್ಧಾರ ತೆಗೆದುಕೊಂಡರೆ, ಹೆಚ್ಚಿನ ಅನುಕೂಲವಾಗಲಿದೆ ಜೋಶಿ ಅವರಿಗೆ ನಿರಾಣಿಯವರು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಪ್ರಹ್ಲಾದ್ ಜೋಶಿ,ಈ ವಿಷಯದ ಕುರಿತು ಹೆಚ್ಚಿನ ಚರ್ಚೆಗಾಗಿ ದೆಹಲಿಗೆ ಬರುವಂತೆ ನಿರಾಣಿಯವರಿಗೆ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲುಪುಡಿ ಘಟಕ-ಕಲ್ಲು ಗಣಿಗಾರಿಕೆ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸ್ಪಷ್ಟನೆ

Published On - 9:59 pm, Sat, 6 February 21

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ