Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶ, ಮರಳು ಮಾಫಿಯಾ ತಡೆಯಲು ಶೀಘ್ರದಲ್ಲಿಯೇ ಕ್ರಮ; ಸಚಿವ ಮುರುಗೇಶ್ ನಿರಾಣಿ

ಕೊರೊನಾ ಸೋಂಕಿನ ಬಗ್ಗೆ ಮಾತನಾಡಿದ ಸಚಿವರು, ಕೊವಿಡ್ಗಾಗಿ ಶೇ.30ರಷ್ಟು ಅನುದಾನ ಬಳಸಿಕೊಳ್ಳಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ. 2017 ರಿಂದ 2021ರ ಅವಧಿಯಲ್ಲಿ ಇಲಾಖೆ 35 ಸಾವಿರ ಕೋಟಿ ರೂ. ಆದಾಯ ಗಳಿಸಿದೆ.

ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶ, ಮರಳು ಮಾಫಿಯಾ ತಡೆಯಲು ಶೀಘ್ರದಲ್ಲಿಯೇ ಕ್ರಮ; ಸಚಿವ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
Follow us
sandhya thejappa
|

Updated on: May 23, 2021 | 2:05 PM

ಮೈಸೂರು: ರಾಜ್ಯದಲ್ಲಿ ಮರಳು ಮಾಫಿಯಾ ಜೋರಾಗಿ ನಡೆಯುತ್ತಿದೆ. ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಬೇಕಿದೆ. ಲೋಡ್ಗಟ್ಟಲೇ ಮರಳನ್ನು ಸಾಗಿಸಿ ಹಣ ಸಂಪಾದಿಸುತ್ತಿದ್ದಾರೆ. ಇದರಿಂದ ಸ್ಥಳೀಯರಿಗೆ ಮರಳು ಸಿಗುತ್ತಿಲ್ಲ. ಹೀಗಾಗಿ ಕಠಿಣ ಕ್ರಮಗಳು ಜಾರಿಯಾಗಬೇಕಿದೆ. ಇನ್ನು ಈ ಬಗ್ಗೆ ಗಣಿ ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿ, ಬೈಕ್, ಎತ್ತಿನ ಗಾಡಿಯಲ್ಲಿ ಮರಳು ಸಾಗಿಸಿಕೊಳ್ಳಬಹುದು. ಸ್ಥಳೀಯರು, ರೈತರಿಗೆ ಮಾತ್ರ ಮರಳು ಸಾಗಾಟಕ್ಕೆ ಅವಕಾಶವಿದೆ. ತಮ್ಮ ಅಗತ್ಯಕ್ಕೆ ಮರಳು ಸಾಗಿಸಿಕೊಂಡರೆ ಕೇಸ್ ಹಾಕಲ್ಲ. ಮರಳು ಮಾಫಿಯ ತಡೆಯಲು ಶೀಘ್ರದಲ್ಲೇ ಕಠಿಣವಾದ ಮರಳು ನೀತಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಬಗ್ಗೆ ಮಾತನಾಡಿದ ಸಚಿವರು, ಕೊವಿಡ್ಗಾಗಿ ಶೇ.30ರಷ್ಟು ಅನುದಾನ ಬಳಸಿಕೊಳ್ಳಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ. 2017 ರಿಂದ 2021ರ ಅವಧಿಯಲ್ಲಿ ಇಲಾಖೆ 35 ಸಾವಿರ ಕೋಟಿ ರೂ. ಆದಾಯ ಗಳಿಸಿದೆ. ಈ ಪೈಕಿ 16,000 ಕೋಟಿ ರೂ. ಈಗ ಉಳಿತಾಯವಾಗಿದೆ. ಇದರಲ್ಲಿ ಶೇಕಡಾ 30ರಷ್ಟು ಹಣ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಶೇಕಡಾ 30ರಷ್ಟು ಹಣ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲು ಇಲಾಖೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ. ಶೇ.30ರಷ್ಟು ಹಣ ಬಳಸಿಕೊಳ್ಳಲು ಇಲಾಖೆಯ ಕಾಯ್ದೆಗಳಲ್ಲಿ ಅವಕಾಶ ಇದೆ. ಅದಕ್ಕಿಂತಲೂ ಹೆಚ್ಚಿನ ಹಣ ಅಗತ್ಯವಿದ್ದರೆ ಮುಖ್ಯಮಂತ್ರಿ ಗಮನಕ್ಕೆ ತಂದು ಅನುಮತಿ ಪಡೆದುಕೊಳ್ಳುತ್ತೇವೆ. ಅನುಮತಿ ಪಡೆದು ಹಣ ನೀಡುವುದಕ್ಕೆ ನಿರ್ಧಾರ ಮಾಡುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಇದನ್ನೂ ಓದಿ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

(Murugesh Nirani says We will soon implement a sand policy to prevent the sand mafia)

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ