AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಮಠ, ಟ್ರಸ್ಟ್, ದೇಗುಲ​ಗಳಿಗೆ ಕರ್ನಾಟಕ ಸರ್ಕಾರದಿಂದ ಒಟ್ಟು 143 ಕೋಟಿ ಅನುದಾನ ಬಿಡುಗಡೆ

ಈ ಪಟ್ಟಿಯಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ.

ವಿವಿಧ ಮಠ, ಟ್ರಸ್ಟ್, ದೇಗುಲ​ಗಳಿಗೆ ಕರ್ನಾಟಕ ಸರ್ಕಾರದಿಂದ ಒಟ್ಟು 143 ಕೋಟಿ ಅನುದಾನ ಬಿಡುಗಡೆ
ಮುಜರಾಯಿ ಇಲಾಖೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 17, 2022 | 10:19 AM

Share

ಬೆಂಗಳೂರು: ಕರ್ನಾಟಕದ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇಗುಲ ಹಾಗೂ ಟ್ರಸ್ಟ್​ಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಒಟ್ಟು ₹ 142.59 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ.

178 ಮಠಗಳಿಗೆ ₹ 108.24 ಕೋಟಿ, 59 ದೇವಸ್ಥಾನಗಳಿಗೆ ₹ 21.35 ಕೋಟಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್​ಗಳಿಗೆ ₹ 13 ಕೋಟಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ ಒಟ್ಟು ₹ 148.59 ಕೋಟಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.

ಅನುದಾನವನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರವು ಕೆಲ ಷರತ್ತುಗಳನ್ನು ವಿಧಿಸಿದೆ. ಅದರಂತೆ ಮಂಜುರಾದ ಅನುದಾನವನ್ನು ‘ಖಜಾನೆ-2’ ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್​ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್​ರ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್​ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ ‘ಮುಂಗಡ ರಸೀದಿ’ (Advance Receipt) ಪಡೆದು ಸಾದಿಲ್ವಾರು ಬಿಲ್​ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು.

ಮಂಜೂರು ಮಾಡಿದ ಅನುದಾನದ ವಿವರಗಳು ಇರುವ ದಾಖಲೆ (Watch Register) ನಿರ್ವಹಿಸಬೇಕು. ಪ್ರತಿ ಮೂರು ತಿಂಗಳಿಗೆ ಒಮ್ಮೆ ಮುಜರಾಯಿ ಇಲಾಖೆಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ಅನುದಾನ ಬಳಕೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ಹಾಗೂ ಇತರ ನಿಯಮಗಳು ಅನ್ವಯವಾಗುತ್ತವೆ ಎಂದು ಕಂದಾಯ ಇಲಾಖೆಯ (ಧಾರ್ಮಿಕ ದತ್ತಿ) ಸರ್ಕಾರದ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮೀ ಸರ್ಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Published On - 10:19 am, Wed, 17 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ