AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು. ತಮ್ಮ […]

‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’
ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:34 PM

Share

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ.

ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು.

ತಮ್ಮ ಇಲಾಖೆ ಹೆಚ್ಚು ನಷ್ಟ ಅನುಭವಿಸಿದೆ. ಹಾಗಂತ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಸಿಬ್ಬಂದಿ ವೇತನವನ್ನೂ ಕಡಿಮೆ ಮಾಡುವುದಿಲ್ಲ. ಸಿಬ್ಬಂದಿಗೆ ಕಡ್ಡಾಯ ರಜೆ ತೆಗೆದುಕೊಳ್ಳಿ ಅಂತಲೂ ನಾವು ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Published On - 11:13 am, Mon, 8 June 20