‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು. ತಮ್ಮ […]

‘ಎಲ್ಲಾ ಇಲಾಖೆಗಳಿಗಿಂತ ಹೆಚ್ಚು ನಷ್ಟ ಅನುಭವಿಸಿರುವುದು ನಾವೇ’
ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 08, 2020 | 2:34 PM

ಕಲಬುರಗಿ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾಗಿರುವ ಲಾಕ್​ಡೌನ್​ನಿಂದಾಗಿ ತಮ್ಮ ಇಲಾಖೆ ಅನುಭವಿಸಿರುವ ನಷ್ಟದ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತೊಮ್ಮೆ ಹೇಳಿಕೊಂಡಿದ್ದಾರೆ.

ಎಲ್ಲಾ ಇಲಾಖೆಗಳಿಗಿಂತ ಸಾರಿಗೆ ಇಲಾಖೆಯಲ್ಲಿ ಹೆಚ್ಚು ನಷ್ಟ ಉಂಟಾಗಿದೆ. 2,200 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಎಲ್ಲಾ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಚಿಂತನೆ ನಡೆಸಿದ್ದೇವೆ. ಎಸಿ ಸ್ಲೀಪರ್ ಬಸ್ ಸಂಚಾರಕ್ಕೆ ಬುಕಿಂಗ್ ಆರಂಭವಾಗಿದೆ ಎಂದು ಅವರು ಹೇಳಿದರು.

ತಮ್ಮ ಇಲಾಖೆ ಹೆಚ್ಚು ನಷ್ಟ ಅನುಭವಿಸಿದೆ. ಹಾಗಂತ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ. ಸಿಬ್ಬಂದಿ ವೇತನವನ್ನೂ ಕಡಿಮೆ ಮಾಡುವುದಿಲ್ಲ. ಸಿಬ್ಬಂದಿಗೆ ಕಡ್ಡಾಯ ರಜೆ ತೆಗೆದುಕೊಳ್ಳಿ ಅಂತಲೂ ನಾವು ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Published On - 11:13 am, Mon, 8 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us