AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು

ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್, ಕೊವಿಡ್-19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ, ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು. ಮುಂದುವರಿದದು ಹೇಳಿದ ಸಚಿವರು, ‘‘ಕೊವಿಡ್-19 ಸೋಂಕಿನ ಆರಂಭದ ದಿನಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿರಲಿಲ್ಲ. ಮಾರ್ಚ್ ತಿಂಗಳಲ್ಲಿ […]

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು
ಸಚಿವ ಬಿ.ಶ್ರೀರಾಮುಲು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 22, 2020 | 7:49 PM

Share

ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್, ಕೊವಿಡ್-19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ, ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು.

ಮುಂದುವರಿದದು ಹೇಳಿದ ಸಚಿವರು, ‘‘ಕೊವಿಡ್-19 ಸೋಂಕಿನ ಆರಂಭದ ದಿನಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿರಲಿಲ್ಲ. ಮಾರ್ಚ್ ತಿಂಗಳಲ್ಲಿ ಭಾರತದಲ್ಲೇ ಮೊದಲ ಸಾವು ಕಲಬುರಗಿಯಲ್ಲಿ ಆಯ್ತು. ಆಗ ಸ್ವತಃ ನಾನೇ ಅಲ್ಲಿಗೆ ಹೋಗಿದ್ದೆ. ಆಗ ಕೊವಿಡ್-19 ಬಗ್ಗೆ ಜನರು ಹೆಚ್ಚು ಭಯಭೀತರಾಗಿದ್ದರು. ನಾನೇ ಮುಂದೆ ನಿಂತು ಎಲ್ಲಾ ಕೆಲಸ ಮಾನಿಟರ್ ಮಾಡಿ ವಾಪಸಾಗಿದ್ದೆ,’’ ಎಂದರು.

‘‘ಈ ವ್ಯಾಧಿಯನ್ನು ಸಂಪೂರ್ಣ ಹೊಗಲಾಡಿಸಲು ನಮ್ಮಿಂದ ಆಗಲ್ಲ. ನಾವೆಲ್ಲ ನಿಮಿತ್ತ ಮಾತ್ರ. ರಾಜ್ಯ ಸರ್ಕಾರ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡುತ್ತಿದೆ. ಟೆಕ್ನಾಲಜಿ ಮುಂದುವರಿದ ರಾಷ್ಟ್ರಗಳಲ್ಲೂ ಲಸಿಕೆ ಕಂಡುಹಿಡಿಯಲಾಗಿಲ್ಲ. ಆದರೂ ಸರ್ಕಾರಗಳು ಕೊವಿಡ್-19 ಸೋಂಕನ್ನು ನಿಯಂತ್ರಣ ಮಾಡುತ್ತಿವೆ. ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿರುವ ಕಡೆ ಮಾತ್ರ ಈ ರೋಗ ಬಂದಿಲ್ಲ, ಎಲ್ಲ ರಾಜ್ಯಗಳಲ್ಲೂ ಅದು ವ್ಯಾಪಿಸಿದೆ. ನಮ್ಮ ಸರ್ಕಾರ ಪಿಡುಗನ್ನು ಸಮರ್ಪಕವಾಗಿ ನಿಭಾಯಿಸಿದೆ,’’ ಎಂದು ಶ್ರೀರಾಮುಲು ಹೇಳಿದರು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?